ಮಳೆ ಬರುವವರೆಗೆ ನೀರಿಗೆ ಕೊರತೆ ಇಲ್ಲ


Team Udayavani, Apr 20, 2018, 10:13 AM IST

20-April-1.jpg

ಮಹಾನಗರ: ಕುಡಿಯುವ ನೀರಿನ ಮೂಲವಾಗಿರುವ ತುಂಬೆ ವೆಂಟೆಡ್‌ ಡ್ಯಾಂ ಬೇಸಗೆಯಲ್ಲೂ ಪೂರ್ಣ ಪ್ರಮಾಣದಲ್ಲಿ ತುಂಬಿದ್ದು, ಈ ಬಾರಿ ನಗರಕ್ಕೆ ಕುಡಿಯುವ ನೀರಿನ ಚಿಂತೆ ದೂರವಾಗಿದೆ. ಪ್ರಸ್ತುತ ಎ. 19ರಂದು ತುಂಬೆ ವೆಂಟೆಡ್‌ ಡ್ಯಾಂನ ನೀರಿನ ಮಟ್ಟ 5.9 ಮೀಟರ್‌ ಇದೆ. ಕಳೆದ ವರ್ಷ ಎ. 19 ರಂದು 4.3 ಮೀ. ನೀರು ಸಂಗ್ರಹವಿತ್ತು.

ಗರಿಷ್ಠ 7 ಮೀಟರ್‌ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ತುಂಬೆ ಡ್ಯಾಂನಲ್ಲಿ ಪೂರ್ತಿ ನೀರು ಸಂಗ್ರಹವಾದರೆ ಅಕ್ಕಪಕ್ಕದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜಮೀನು ಮುಳುಗಡೆಯಾಗುವ ಸಾಧ್ಯತೆ ಇದೆ. ಹೀಗಾ ಗಿ ಈ ಬಾರಿ 6 ಮೀ. ನೀರು ಸಂಗ್ರಹ ಮಾಡಲಾಗಿತ್ತು. ಪ್ರಸ್ತುತ ಒಟ್ಟು ಸಂಗ್ರಹಣೆ ಮಾಡಿರುವ ನೀರಿನ ಮಟ್ಟದಲ್ಲಿ 10 ಸೆಂ.ಮೀ. ಮಾತ್ರ ಕಡಿಮೆಯಾಗಿದೆ. ಇದರ ಆಧಾರದಲ್ಲಿ ಮಂಗಳೂರು ನಗರಕ್ಕೆ ಕನಿಷ್ಠ 50 ದಿನಗಳವರೆಗೆ ಕುಡಿಯುವ ನೀರು ಪೂರೈಕೆ ಮಾಡಬಹುದಾಗಿದೆ. ಅಂದರೆ ಜೂನ್‌ 20ರವರೆಗೆ ನೀರು ಅಬಾಧಿತವಾಗಿ ಸರಬರಾಜು ಮಾಡಬಹುದು.

ಬೇಸಗೆಯಲ್ಲಿ ಸಾಮಾನ್ಯವಾಗಿ ತುಂಬೆ ವೆಂಟೆಡ್‌ ಡ್ಯಾಂನಲ್ಲಿ ದಿನವೊಂದಕ್ಕೆ ಸುಮಾರು 3ರಿಂದ 5 ಸೆಂ.ಮೀ. ನೀರು ಕಡಿಮೆಯಾಗುತ್ತಾ ಹೋಗುತ್ತದೆ.

ತುಂಬೆ ಡ್ಯಾಂನ ಮೇಲ್ಭಾಗದಲ್ಲಿರುವ ಶಂಭೂರು ಎಆರ್‌ಎಂ ಡ್ಯಾಂನಲ್ಲಿ ಪೂರ್ಣ ಪ್ರಮಾಣದಲ್ಲಿ 5 ಮೀಟರ್‌ ನೀರು ಸಂಗ್ರಹವಿದೆ. ಸಾಮಾನ್ಯವಾಗಿ ಮೇ ಮಾಸಾಂತ್ಯಕ್ಕೆ ಮುಂಗಾರು ಮಳೆ ಪ್ರಾರಂಭವಾಗಲಿದ್ದು, ಒಟ್ಟು ಪರಿಸ್ಥಿತಿ ಅವಲೋಕಿಸಿದರೆ ನಗರಕ್ಕೆ ಈ ಬಾರಿ ಕುಡಿಯುವ ನೀರಿನ ಸಮಸ್ಯೆ ಎದುರಾಗದು.

7 ಮೀ. ನೀರು ಸಂಗ್ರಹವಾದರೆ 90 ದಿನಗಳವರೆಗೆ ನೀರು
ತುಂಬೆ ವೆಂಟೆಡ್‌ಡ್ಯಾಂನ್ನು ಮಂಗಳೂರು ನಗರದ ಮುಂದಿನ 20ರಿಂದ 25 ವರ್ಷಗಳವರೆಗಿನ ನೀರಿನ ಅವಶ್ಯಕತೆಯನ್ನು ಮನಗಂಡು 2009ರಲ್ಲಿ ರೂಪಿಸಲಾಗಿತ್ತು . ಡ್ಯಾಂನ ಎತ್ತರ 12 ಮೀಟರ್‌ ಆಗಿದ್ದು ಗರಿಷ್ಠ ನೀರು 7 ಮೀ.ವರೆಗೆ ನಿಲ್ಲಿಸಬಹುದಾಗಿದೆ. ಆದರೆ 7 ಮೀಟರ್‌ ನೀರು ಸಂಗ್ರಹಿಸಿದರೆ ನದಿಯ ಎರಡೂ ಕಡೆಗಳಲ್ಲಿ ಕೃಷಿ ಭೂಮಿ ಸೇರಿದಂತೆ ಗಣನೀಯ ಪ್ರಮಾಣದಲ್ಲಿ ಪ್ರದೇಶ ಜಲಾವೃತಗೊಳ್ಳುವುದರಿಂದ ಆರಂಭದಲ್ಲಿ ಇಲ್ಲಿ 5 ಮೀಟರ್‌ ಎತ್ತರಕ್ಕೆ 2017 ರಲ್ಲಿ ನೀರು ಸಂಗ್ರಹಿಸಲಾಯಿತು. ಇದರಿಂದ ನದಿಪಾತ್ರದ ಎರಡೂ ಕಡೆಗಳಲ್ಲಿ 19 ಎಕರೆ ಜಾಗ ಜಲಾವೃತವಾಗಿದೆ. 

ಈ ವರ್ಷ 6 ಮೀಟರ್‌ ನೀರು ಸಂಗ್ರಹ ಮಾಡಲಾಗಿದೆ. ಗರಿಷ್ಠ ಮಟ್ಟ 7 ಮೀಟರ್‌ ನೀರು ಸಂಗ್ರಹಿಸಿದರೆ ಸುಮಾರು 85 ರಿಂದ 90 ದಿನಗಳವರೆಗೆ ನಗರಕ್ಕೆ ಕುಡಿಯುವ ನೀರು ಅಬಾಧಿತವಾಗಿ ಸರಬರಾಜು ಮಾಡಬಹುದಾಗಿದೆ. 6 ಮೀಟರ್‌ವರೆಗೆ ನೀರು ಸಂಗ್ರಹವಿದ್ದರೆ ಒಳಹರಿವ ಸ್ಥಗಿತಗೊಂಡ 55 ರಿಂದ 60 ದಿನಗಳವರೆಗೆ ನೀರು ಪೂರೈಕೆ ಮಾಡಬಹುದಾಗಿದೆ. ತುಂಬೆ ವೆಂಟೆಡ್‌ ಡ್ಯಾಂನಲ್ಲಿ ನೀರು ಕಡಿಮೆಯಾದರೆ ಎಎಂಆರ್‌ ಡ್ಯಾನಿಂದ ನೀರು ಬಿಟ್ಟು ನೀರಿನ ಮಟ್ಟವನ್ನು ಕಾಯ್ದುಕೊಳ್ಳಲಾಗುತ್ತದೆ. ಸಾಮಾನ್ಯವಾಗಿ ನೇತ್ರಾವತಿ ನದಿಯಲ್ಲಿ ಫೆಬ್ರವರಿ ಮಧ್ಯಭಾಗದವರೆಗೆ ಒಳಹರಿವು ಇರುತ್ತದೆ.

ನೀರು ಸಂಗ್ರಹ ಪ್ರಮಾಣ; ಪೂರೈಕೆ ಸಾಮರ್ಥ್ಯ
ನಗರಕ್ಕೆ ದಿನಂಪ್ರತಿ 160 ಎಂಎಲ್‌ಡಿ ನೀರು ಸರಬರಾಜಾಗುತ್ತಿದೆ. ಈ ಪ್ರಮಾಣವನ್ನು ಲೆಕ್ಕಹಾಕಿ 4 ಮೀ.ಎತ್ತರಕ್ಕೆ ನಿಲ್ಲಿಸಿದರೆ 5.21 ಮಿಲಿಯನ್‌ ಕ್ಯುಬಿಕ್‌ ಮೀಟರ್‌ ನೀರು ಸಂಗ್ರಹ ಮಾಡಿ 23 ದಿನಗಳವರೆಗೆ ನಗರಕ್ಕೆ ನೀರು ಪೂರೈಕೆ ಮಾಡಬಹುದಾಗಿದೆ. 4.50 ಮೀ.ಎತ್ತರಕ್ಕೆ ಸಂಗ್ರಹಿಸಿದರೆ 6.40 ಮಿಲಿಯನ್‌ ಕ್ಯುಬಿಕ್‌ ಮೀಟರ್‌ ನೀರು ಸಂಗ್ರಹವಾಗುತ್ತದೆ ಮತ್ತು 30 ದಿನಗಳವರೆಗೆ ಪೂರೈಕೆ ಮಾಡಬಹುದಾಗಿದೆ. 5 ಮೀ. ಎತ್ತರಕ್ಕೆ ನೀರು ನಿಲ್ಲಿಸಿದರೆ 7.71 ಮಿಲಿಯನ್‌ ಕ್ಯುಬಿಕ್‌ ಮೀಟರ್‌ ನೀರು ಸಂಗ್ರಹವಾಗುತ್ತದೆ. ಇದು 40 ದಿನಗಳವರೆಗೆ ಸಾಕಾಗುತ್ತದೆ.5.50 ಮೀ. ಎತ್ತರಕ್ಕೆ ಸಂಗ್ರಹ ಮಾಡಿದರೆ 9.17 ಮಿಲಿಯನ್‌ ಕ್ಯುಬಿಕ್‌ ಮೀಟರ್‌ ನೀರು ಸಂಗ್ರಹವಾಗುತ್ತದೆ. ಇದರಿಂದ 48 ದಿನಗಳವರೆಗೆ ನೀರು ಪೂರೈಕೆ ಮಾಡಬಹುದು. 6 ಮೀ. ಎತ್ತರಕ್ಕೆ ನಿಲ್ಲಿಸಿದರೆ 10.83 ಮಿಲಿಯನ್‌ ಕ್ಯುಬಿಕ್‌ ಮೀಟರ್‌ ನೀರು ದಾಸ್ತಾನು ಆಗಿ 55 ದಿನಗಳವರೆಗೆ ಪೂರೈಕೆ ಮಾಡಬಹುದಾಗಿದೆ. 7 ಮೀಟರ್‌ ಎತ್ತರಕ್ಕೆ ನೀರು ನಿಲ್ಲಿಸಿದರೆ 14.73 ಮಿಲಿಯನ್‌ ಕ್ಯುಬಿಕ್‌ ಮೀಟರ್‌ ನೀರು ಸಂಗ್ರಹವಾಗಿ 85 ದಿನಗಳವರೆಗೆ ನೀರು ಪೂರೈಕೆ ಮಾಡಬಹುದಾಗಿದೆ.

1956ರಲ್ಲಿ ನಗರಕ್ಕೆ ಮೊದಲ ಬಾರಿ ಕುಡಿಯುವ ನೀರು ಸರಬರಾಜು ಯೋಜನೆ ಅನುಷ್ಟಾನಗೊಂಡಿತು. ಆಗ 1,80,000 ಜನಸಂಖ್ಯೆಯನ್ನು ಅಂದಾಜಿಸಿಕೊಂಡು ಈ ಯೋಜನೆ ಸಿದ್ದಪಡಿಸಲಾಗಿತ್ತು. ಆಗ ಬೇಡಿಕೆ ಇದ್ದದ್ದು 10 ಎಂಎಲ್‌ಡಿ ನೀರಿಗೆ . 1971 ರಲ್ಲಿ ನೀರಿನ ಬೇಡಿಗೆ 81.70 ಎಂಎಲ್‌ಡಿಗೇರಿತು. ಈಗ ಇದು 137 ಎಂಎಲ್‌ಡಿಗೆ ತಲುಪಿದೆ.

ಕಳೆದ ವರ್ಷ4.3 ಮೀಟರ್‌
ಕಳೆದ ವರ್ಷ ತುಂಬೆ ವೆಂಟೆಡ್‌ ಡ್ಯಾಂನಲ್ಲಿ 5 ಮೀಟರ್‌ ನೀರು ಸಂಗ್ರಹ ಮಾಡಲಾಗಿದ್ದು ಎ. 19ರಂದು 4.3 ಮೀಟರ್‌ ನೀರು ಸಂಗ್ರಹವಿತ್ತು. ಬೇಸಗೆಯಲ್ಲಿ ನೀರಿನ ಕೊರತೆ ಎದುರಾಗುವ ಆತಂಕ ಕಾಡಿದ್ದರೂ ಮೇ ತಿಂಗಳಿನಲ್ಲಿ ಸುರಿದ ಮಳೆ ನೆರವಿಗೆ ಬಂದಿತ್ತು. 2016ರಲ್ಲಿ ತುಂಬೆಯ ಹಳೆಯ ವೆಂಟೆಡ್‌ ಡ್ಯಾಂನ ನೀರು ಸಂಗ್ರಹ ಸಾಮರ್ಥ್ಯ 4 ಮೀಟರ್‌ ಆಗಿದ್ದು , ಎಪ್ರಿಲ್‌ನಲ್ಲಿ ನೀರಿನ ಮಟ್ಟ ತೀವ್ರ ಕುಸಿಯಲು ಆರಂಭಗೊಂಡ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಕೊರತೆ ಗಂಭೀರವಾಗಿ ಕಾಡಿತ್ತು.

ಮಳೆ ನೆರವು
ಈ ಬಾರಿ ಎಪ್ರಿಲ್‌ ತಿಂಗಳಿನಲ್ಲಿ ನೇತ್ರಾವತಿ ನದಿ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವುದು ನೀರಿನ ಸಮಸ್ಯೆ ನೀಗಿಸುವಲ್ಲಿ ಸಹಕಾರಿಯಾಗಿದೆ. ನೇತ್ರಾವತಿ ನದಿಯಲ್ಲಿ ಕ್ಷೀಣಗೊಂಡಿದ್ದ ಒಳಹರಿವು ಇದರಿಂದ ಹೆಚ್ಚಳವಾಗಿದ್ದು, ಎಆಂಆರ್‌ ಡ್ಯಾಂಗೆ ಈ ವರೆಗೆ ಸುಮಾರು 20 ಸೆಂ.ಮೀ. ನೀರು ಹರಿದು ಬಂದಿದೆ. ಮಳೆಯಾಗಿರುವುದರಿಂದ ನದಿ ಪಕ್ಕದಲ್ಲಿರುವ ಅಡಿಕೆ ತೋಟ ಸಹಿತ ಕೃಷಿಗೆ ನದಿ ನೀರಿನ ಬಳಕೆ ಕಡಿಮೆಯಾಗಿದೆ. ಇದು ತುಂಬೆ ಡ್ಯಾಂನಲ್ಲಿ ನೀರಿನ ಮಟ್ಟವನ್ನು ಕಾಯ್ದು ಕೊಳ್ಳುವಲ್ಲಿ ಸಹಕಾರಿಯಾಗಿದೆ. 

 ಕೇಶವ ಕುಂದರ್‌

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.