ಹೊಸಮಠ ಸೇತುವೆ: 4 ದಿನದಿಂದ ಇಳಿದಿಲ್ಲ ನೀರು


Team Udayavani, Jul 14, 2018, 2:45 AM IST

hosmutt-13-7.jpg

ಕಡಬ: ಕಡಬ ಹೊಸಮಠ ಸೇತುವೆಯ ಮೇಲೆ ಕಳೆದ 4 ದಿನಗಳಿಂದ ಸತತವಾಗಿ ನೆರೆ ನೀರು ಹರಿಯುತ್ತಲೇ ಇದೆ. ಉಪ್ಪಿನಂಗಡಿ – ಕಡಬ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ. ಜನರು ಅತಂತ್ರ ಸ್ಥಿತಿಯಲ್ಲಿದ್ದಾರೆ. ನೆರೆ ನೀರು ಹರಿಯುತ್ತಿರುವ ಸೇತು ವೆಯ ಮೇಲೆ ವಾಹನಗಳು ಸಂಚರಿಸಿ ಅವಘಡ ಸಂಭವಿಸಬಾರದೆನ್ನುವ ಮುನ್ನೆಚ್ಚರಿಕೆ ನೆಲೆಯಲ್ಲಿ ರಾತ್ರಿ, ಹಗಲು ಪೊಲೀಸರು, ಗೃಹರಕ್ಷಕ ದಳದ ಸಿಬಂದಿ ಕಾವಲು ಕಾಯುತ್ತಲೇ ಇದ್ದಾರೆ. ಹೊಸಮಠ ಸೇತುವೆಯ ಇಕ್ಕೆಲಗಳಲ್ಲಿ ರಕ್ಷಣಾ ಗೇಟುಗಳನ್ನು ಹಾಕಿ ಮುಚ್ಚಲಾಗಿದೆ.

ವಿದ್ಯಾರ್ಥಿಗಳಿಗೆ ಹೆಚ್ಚಿನ ಕಷ್ಟ
ಶಾಲೆ, ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು, ಉದ್ಯೋಗಿಗಳು ಸೇತುವೆ ಮುಳುಗಡೆಯಿಂದ ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಸೇತುವೆ ಮುಳುಗಡೆಯಾಗಿರುವ ಕಾರಣದಿಂದಾಗಿ ಹೊಸಮಠ ಸೇತುವೆಯ ಮೂಲಕ ಉಪ್ಪಿನಂಗಡಿ-ಕಡಬ ನಡುವೆ ಸಂಚರಿಸುತ್ತಿದ್ದ ಸರಕಾರಿ ಬಸ್‌ ಗಳು ಓಡಾಟ ಸ್ಥಗಿತಗೊಳಿಸಿವೆ. ವಿದ್ಯಾರ್ಥಿಗಳು ಬೆಳಗ್ಗೆ ಖಾಸಗಿ ವಾಹನಗಳಲ್ಲಿ ಬಂದರೆ, ಸಂಜೆ ಮನೆ ಸೇರಲು ಪರದಾಡುವಂತಾಗಿದೆ. ಶಾಲೆ ಬಿಟ್ಟು ಕಡಬದಿಂದ ಬಿಳಿನೆಲೆ, ಕೊಂಬಾರು, ಮರ್ಧಾಳ, ಕೈಕಂಬ ಮೊದಲಾದ ಕಡೆ ಹೋಗಬೇಕಾದ ವಿದ್ಯಾರ್ಥಿಗಳು ಸಂಜೆ ಆರು ಗಂಟೆಯ ತನಕವೂ ವಾಹನಗಳಿಲ್ಲದೆ ಕಡಬ ಬಸ್‌ ನಿಲ್ದಾಣದಲ್ಲಿ ಉಳಿಯುವಂತಾಗಿದೆ. ಕೆಲವು ವಿದ್ಯಾರ್ಥಿಗಳು ಖಾಸಗಿ ಜೀಪುಗಳಲ್ಲಿ ನೇತಾಡಿಕೊಂಡು ಮಳೆಗೆ ಮೈಯೊಡ್ಡಿ ಹೋಗುತ್ತಿದ್ದಾರೆ. ಸಮಸ್ಯೆ ಬಿಗಡಾಯಿಸಿದ್ದರೂ ಸಂಬಂಧಪಟ್ಟವರು ಗಮನಹರಿಸುತ್ತಿಲ್ಲ ಎನ್ನುವ ಆರೋಪ ಕೇಳಿಬಂದಿದೆ.

ಮುಳುಗು ಸೇತುವೆಗೆ ಹಲವು ಜೀವ ಬಲಿ
ಈ ಹಿಂದೆ ಮುಳುಗಡೆಯಾದ ಸೇತುವೆಯ ಮೇಲೆ ವಾಹನ ಚಲಾಯಿಸುವ ದುಸ್ಸಾಹಸಕ್ಕೆ ಇಳಿದು ನೀರಿಗೆ ಬಲಿಯಾದ ಜೀವಗಳು ಹಲವು. ಸುಮಾರು 5 ದಶಕಗಳ ಹಿಂದೆ ನೆರೆನೀರಿನಲ್ಲಿ ಮುಳುಗಿದ್ದ ಸೇತುವೆಯನ್ನು ದಾಟಲು ಯತ್ನಿಸಿದ್ದ ಖಾಸಗಿ ಬಸ್ಸೊಂದು ಮುಳುಗಿ ಓರ್ವ ಪ್ರಯಾಣಿಕ ನೀರುಪಾಲಾಗಿದ್ದ. ಆ ಬಳಿಕ ಹಲವು ವರ್ಷಗಳ ಅನಂತರ ತಮಿಳುನಾಡಿನ ಪ್ರವಾಸಿ ಯುವಕರಿಬ್ಬರು ನೆರೆ ನೀರಿನಲ್ಲಿ ಕೊಚ್ಚಿಹೋಗಿದ್ದರು. ಅಡಿಕೆ ಸಸಿ ಸಾಗಿಸುತ್ತಿದ್ದ ಲಾರಿಯೊಂದು ಮುಳುಗಿ ಕೃಷಿಕರೊಬ್ಬರು ಜೀವ ಕಳೆದುಕೊಂಡಿದ್ದರು. 2006ರ ಮಳೆಗಾಲದಲ್ಲಿ ಸಿಮೆಂಟ್‌ ಸಾಗಾಟದ ಲಾರಿಯೊಂದು ಸೇತುವೆಯ ಮೇಲೆ ಚಲಿಸಿ ನೀರುಪಾಲಾಗಿ ಲಾರಿಯಲ್ಲಿದ್ದ ನಾಲ್ವರು ಮೃತಪಟ್ಟಿದ್ದರು. ಈ ಕಹಿ ಘಟನೆ ಜನರ ಮನಸ್ಸಿನಿಂದ ಮಾಸಿಲ್ಲ.

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.