ಕಲ್ಲಿನ ಕೋರೆಯಲ್ಲಿ ಜಲ ಸಂರಕ್ಷಣೆ: ಅಳಿಕೆಯ ಕೃಷಿಕನ ಮಾದರಿ ಪ್ರಯೋಗ


Team Udayavani, Aug 13, 2017, 12:57 PM IST

ಜನವರಿಯಿಂದ ಕೃಷಿಭೂಮಿಗೆ ಕೋರೆ ನೀರು ಬಳಸುವ ಯೋಜನೆ

ವಿಟ್ಲ: ಮಳೆಗಾಲದಲ್ಲಿ ನೀರು ತುಂಬಿ ಬೃಹತ್‌ ಕೆರೆಗಳಾಗಿ ಪರಿವರ್ತನೆಗೊಳ್ಳುವ ಕಲ್ಲಿನ ಕೋರೆಗಳನ್ನು ಸರಕಾರ ಮುಚ್ಚಿಸುತ್ತದೆ. ಇಂತಹ ಕೋರೆಗಳಿಂದ ಅನೇಕ ಜೀವಹಾನಿ ಸಂಭವಿಸಿರುವುದರಿಂದ ಮುಚ್ಚುವುದು ಅನಿವಾರ್ಯ ಎಂಬಂತಾಗಿದೆ. ಆದರೆ ಇಂತಹ ಕೋರೆಯಲ್ಲಿ ಜಲಸಂರಕ್ಷಣೆ ಮಾಡುತ್ತಿರುವ  ಕೃಷಿಕರೋರ್ವರು ಮಾದರಿಯಾಗಿದ್ದಾರೆ. ಅಳಿಕೆ ಗ್ರಾಮದ ಕಲ್ಲೆಂಚಿಪಾದೆ ಬಾಂಡೀಲು ನಿವಾಸಿ, ಅಳಿಕೆ ವ್ಯವಸಾಯ ಸೇವಾ ಸಹಕಾರಿ ಸಂಘದ ಉದ್ಯೋಗಿ ಚಂದ್ರಹಾಸ ಅವರು ಈ ಕಾರ್ಯ ಮಾಡುತ್ತಿದ್ದಾರೆ. ತಮ್ಮ ವರ್ಗ ಭೂಮಿ ಮತ್ತು ಕುಮ್ಕಿಯಲ್ಲಿರುವ ನಿರುಪಯುಕ್ತ ಕಲ್ಲಿನ ಕೋರೆಗಳಲ್ಲಿ ಮಳೆ ನೀರು ಸಂಗ್ರಹಿಸಿ ನೀರು ಇಂಗಿಸುವಂತೆ ಮಾಡಿದ್ದಾರೆ.

ಜಿ.ಪಂ. ಯೋಜನೆ ಇತ್ತು 
ಕಲ್ಲೆಂಚಿಪಾದೆ ಭಾಗದ ಜನರ ನೀರಿನ ಸಮಸ್ಯೆಯನ್ನು ಬಗೆಹರಿಸುವುದಕ್ಕಾಗಿ ಜಿ. ಪಂ. ಮತ್ತು ಸ್ಥಳೀಯರ ಸಹಕಾರದೊಂದಿಗೆ ಈ ಭಾಗದಲ್ಲಿನ ನಿರುಪಯುಕ್ತ ಕಲ್ಲಿನ ಕೋರೆಯನ್ನು ಸ್ವಚ್ಛಗೊಳಿಸಿ ಕೆರೆಯಾಗಿ ಅಭಿವೃದ್ಧಿಪಡಿಸಲು ಎರಡು ವರ್ಷಗಳ ಹಿಂದೆ ಯೋಜನೆ ರೂಪಿಸಲಾಗಿತ್ತು. ಸುಮಾರು 1ಲ.ರೂ. ವೆಚ್ಚದಲ್ಲಿ ಕೋರೆಯಲ್ಲಿದ್ದ ಮಣ್ಣನ್ನು ಸಾಗಿಸಲು ಪ್ರಯತ್ನಿಸಲಾಗಿತ್ತು. ಕೋರೆಯಲ್ಲಿರುವ ನೀರಿನ ಸಣ್ಣ ಹರಿವಿನ ಜತೆಗೆ, ಮಳೆ ನೀರಿನ ಕೊಯ್ಲು ಮಾಡುವ ಯೋಜನೆ ಅದಾಗಿತ್ತು. ಆದರೆ ಇದಕ್ಕೆ ಸರಕಾರದಿಂದ ಹೆಚ್ಚಿನ ಅನುದಾನ ಸಿಗದೆ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡಿತ್ತು.

ಒಂದು ಎಕರೆ ವಿಸ್ತಾರ
ಕಲ್ಲೆಂಚಿಪಾದೆ ಬಾಂಡೀಲು ಪ್ರದೇಶದ ಕೃಷಿಕ ಚಂದ್ರಹಾಸ ಅವರು ಒಂದು ಎಕ್ರೆ ಭೂಭಾಗದಲ್ಲಿರುವ ಕಲ್ಲಿನ ಕೋರೆಯಲ್ಲಿ ಮಳೆ ನೀರು ಇಂಗಿಸಲು ಧೈರ್ಯವಾಗಿ ನಿರ್ಧರಿಸಿದರು. ಒಂದು ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿದ ಈ ಕೆರೆಯಲ್ಲಿ ಇದೀಗ ಸುಮಾರು 50 ಅಡಿ ಎತ್ತರಕ್ಕೆ ನೀರು ಸಂಗ್ರಹವಾಗಿದೆ. ಜನವರಿ ಬಳಿಕ ನೀರಿನ ಬಳಕೆ ಆರಂಭಿಸಿದರೂ ಎಪ್ರಿಲ್‌ ಮೇ ತಿಂಗಳ ವರೆಗೆ ಈ ಕೆರೆಯಲ್ಲಿ ನೀರು ಲಭ್ಯವಾಗಬಹುದು ಎಂಬ ಖಚಿತ ಅಭಿಪ್ರಾಯ ಅವರದು. ಕೃಷಿ ಭೂಮಿಗೆ ಹಲವು ವರ್ಷಗಳಿಂದ ನೀರಿನ ಸಮಸ್ಯೆ ಬರುತ್ತಿದ್ದು, ಮೂರು ನಾಲ್ಕು ಕೊಳವೆ ಬಾವಿ ಕೊರೆಸಿದರೂ ನೀರು ಸಿಕ್ಕಿರಲಿಲ್ಲ. ವರ್ಗ, ಕುಮ್ಕಿ ಹಾಗೂ ಸರಕಾರಿ ಜಾಗಗಳನ್ನು ಒಳಗೊಂಡಿರುವ ಸುಮಾರು ಒಂದು ಎಕರೆ ಜಾಗದಲ್ಲಿ ಹಳೆಯ ಕಲ್ಲಿನ ಕೋರೆ ನಿರುಪಯುಕ್ತವಾಗಿತ್ತು. ಇದರಲ್ಲಿ ನೀರು ಇಂಗಿಸುವ ಕ್ರಮ ಕೈಗೊಂಡಲ್ಲಿ ಕೃಷಿಗೆ ಸಹಕಾರಿಯಾಗ ಬಹುದೆಂಬ ನಿಟ್ಟಿನಲ್ಲಿ ಈ ಪ್ರಯತ್ನ ಮಾಡಲಾಗಿದೆ ಎಂದು ಚಂದ್ರಹಾಸ ಅವರು ಹೇಳುತ್ತಾರೆ.

ನೀರು ಸಂಗ್ರಹಕ್ಕೆ ದಾರಿ
ಯಾರಾದರೂ ಈಜಾಡಿ ಅವಘಡ ಉಂಟಾಗಬಹುದು ಅಥವಾ ಇನ್ನಿತರ ರೀತಿಯಲ್ಲಿ ದುರಂತ ಸಂಭವಿಸಬಹುದು ಎಂಬ ಭಯದಿಂದ  ಹೆಚ್ಚಿನವರು ಕಲ್ಲಿನ ಕೋರೆಗಳಲ್ಲಿ ನೀರು ಸಂಗ್ರಹಿಸಲು ಹಿಂದೇಟು ಹಾಕುತ್ತಾರೆ. ಆದರೆ ಇದೀಗ ಚಂದ್ರಹಾಸ ಅವರ ಪ್ರಯತ್ನ ಇತರ ಕೆಲವರಿಗೆ ಪ್ರೇರಣೆಯಾಗಲಿದೆ. ಸೂಕ್ತ ಸುರಕ್ಷಾ ಕ್ರಮಗಳೊಂದಿಗೆ ಒಂದಷ್ಟು ಯೋಜಿತವಾಗಿ ಜಲಸಂರಕ್ಷಣೆ ಮಾಡಿದರೆ ನಿಷ್ಪ್ರಯೋಜಕ, ಅಪಾಯಕಾರಿಯಾಗಿ ಉಳಿದಿರುವ ಇಂತಹ ಕಲ್ಲಿನ ಕೋರೆಗಳಿಗೂ ಜೀವ ಬಂದೀತು. ಅಪಾಯವೂ ದೂರವಾದೀತು. ಜಲ ಸಂರಕ್ಷಣೆ ಆಗಲು ಸಾಧ್ಯ.

ಸುರಕ್ಷತಾ ಕ್ರಮ

ನೀರು ಸಂಗ್ರಹಿಸಿದ ಕಲ್ಲಿನ ಕೋರೆಯ ಸುತ್ತ ಬೇಲಿ ಹಾಕಿ ಅಹಿತಕರ ಘಟನೆ ಸಂಭವಿಸದಂತೆ ಮುನ್ನೆಚ್ಚರಿಕೆ ಫಲಕ ಅಳವಡಿಸಲಾಗಿದೆ.

– ಉದಯಶಂಕರ್‌ ನೀರ್ಪಾಜೆ

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

Bantwal ಚೂರಿ ಇರಿತ ಪ್ರಕರಣ: ಆರೋಪಿಯ ಸೆರೆ

Bantwal ಚೂರಿ ಇರಿತ ಪ್ರಕರಣ: ಆರೋಪಿಯ ಸೆರೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.