ನಗರ-ಗ್ರಾಮಾಂತರ; ಕುಡಿಯುವ ನೀರಿಗೆ ಹೊಡೆತ!

ಶಾಲೆ-ಹಾಸ್ಟೆಲ್‌, ಹೊಟೇಲ್‌ಗ‌ಳಿಗೆ ಕಾಡಿದ ನೀರಿನ ಸಮಸ್ಯೆ

Team Udayavani, Jun 7, 2023, 2:42 PM IST

ನಗರ-ಗ್ರಾಮಾಂತರ; ಕುಡಿಯುವ ನೀರಿಗೆ ಹೊಡೆತ!

ಮಹಾನಗರ: ನಗರದಲ್ಲಿ ಕುಡಿಯುವ ನೀರಿನ ರೇಷನಿಂಗ್‌ ಜಾರಿಯಾದ ಬಳಿಕ ಶಾಲೆ, ಕಾಲೇಜು, ಹಾಸ್ಟೆಲ್‌, ಹೊಟೇಲ್‌, ಆಸ್ಪತ್ರೆ, ಅಂಗಡಿ, ಪಿಜಿ, ಕೈಗಾರಿಕೆಗಳಿಗೆ ನೀರಿನ ಹೊಡೆತ ಬಿದ್ದಿದ್ದು, ಬೇಗನೆ ಮಳೆಯಾಗದಿದ್ದರೆ ಮತ್ತಷ್ಟು ಸಮಸ್ಯೆ ಎದುರಾಗುವ ಆತಂಕ ನಿರ್ಮಾಣವಾಗಿದೆ.

ನಗರದಲ್ಲಿ ಹಲವು ವಾರ್ಡ್‌ಗಳಿಗೆ ನೀರು ಸಮರ್ಪಕ ಪ್ರಮಾಣದಲ್ಲಿ ಲಭಿಸುತ್ತಿಲ್ಲ. ಟ್ಯಾಂಕರ್‌ಗಳಿಗೂ ನೀರು ಸಿಗುತ್ತಿಲ್ಲ. ಹೀಗಾಗಿ ಟ್ಯಾಂಕರ್‌ ನೀರು ಕೂಡ ಸರಿಯಾದ ಸಮಯಕ್ಕೆ ಸಿಗುತ್ತಿಲ್ಲ ಎಂಬ ಆರೋಪವಿದೆ.

ಮಂಗಳೂರಿನ ಬಹುತೇಕ ಶಾಲೆ- ಕಾಲೇಜುಗಳಿಗೆ ಸ್ವಂತ ನೀರಿನ ಮೂಲಗಳಿಲ್ಲ. ಪಾಲಿಕೆಯ ನೀರೇ ಆಧಾರ. ಹೀಗಾಗಿ ಸದ್ಯ ಹಲವು ಶಾಲಾ-ಕಾಲೇಜುಗಳು ಟ್ಯಾಂಕರ್‌ ನೀರನ್ನು ಅವಲಂಬಿಸುವ ಪರಿಸ್ಥಿತಿ ಇದೆ.

ಖಾಸಗಿ, ಅನುದಾನಿತ, ಸರಕಾರಿ ಸೇರಿ ಮಂಗಳೂರು ನಗರ- ಗ್ರಾಮಾಂತರ ವ್ಯಾಪ್ತಿಯಲ್ಲಿ ನೂರಾರು ವಿದ್ಯಾಸಂಸ್ಥೆಗಳಿವೆ. ಕುಡಿಯಲು, ಊಟದ ಬಳಿಕ ಕೈ ತೊಳೆಯುವುದು, ತಟ್ಟೆ ತೊಳೆಯುವುದು, ಬಿಸಿಯೂಟ ತಯಾರಿ ಸಹಿತ ವಿವಿಧ ಕಾರಣಕ್ಕಾಗಿ ಶಾಲೆಗೆ ನೀರಿನ ಅಗತ್ಯವಿದೆ. ಅಧಿಕ ಪ್ರಮಾಣದಲ್ಲಿ ಶಾಲಾ-ಕಾಲೇಜಿನ ಶೌಚಾಲಯಕ್ಕೆ ನೀರಿನ ಅಗತ್ಯವಿದೆ. ಆದರೆ ಪಾಲಿಕೆ ಹಾಗೂ ಹೊರಪ್ರದೇಶದ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನಿರೀಕ್ಷೆಯಷ್ಟು ನೀರು ಲಭ್ಯವಿಲ್ಲದೆ ಶಾಲಾ ಶಿಕ್ಷಕರು-ಮಕ್ಕಳು ಕಂಗಾಲಾಗಿದ್ದಾರೆ. ಹೀಗಾಗಿ ಕೆಲವು ಶಾಲೆಗಳಿಗೆ ರಜೆ ನೀಡುವ ಪರಿಸ್ಥಿತಿಯೂ ನಿರ್ಮಾಣವಾಗಿದೆ.

ಈ ಮಧ್ಯೆ ಹಾಸ್ಟೆಲ್‌ಗ‌ಳಿಗೆ ನೀರಿನ ಕೊರತೆ ಎದುರಾಗಿದೆ. ಮಕ್ಕಳ ನಿತ್ಯದ ಚಟುವಟಿಕೆಗೆ ಬಹು ಪ್ರಮಾಣದಲ್ಲಿ ನೀರಿನ ಅಗತ್ಯ ಇರುವ ಕಾರಣದಿಂದ ಹಲವು ಹಾಸ್ಟೆಲ್‌ಗ‌ಳಿಗೆ ಟ್ಯಾಂಕರ್‌ ನೀರು ಗತಿಯಾದರೆ, ಉಳಿದ ಕೆಲವು ಹಾಸ್ಟೆಲ್‌ಗೆ ರಜೆ ನೀಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಾವಿರಾರು ವಿದ್ಯಾರ್ಥಿಗಳು ಇರುವ ಹಾಸ್ಟೆಲ್‌ಗ‌ಳ ನಿರ್ವಹಣೆ ಕಷ್ಟವಾಗಿದೆ.

ವೆನ್ಲಾಕ್ ಆಸ್ಪತ್ರೆಯಲ್ಲಿ ನೀರಿಗೆ ಹಾಹಾಕಾರ!
ನಗರದ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ನೀರಿನ ಕೊರತೆ ಬಹುವಾಗಿ ಕಾಡುತ್ತಿದೆ. ಆಸ್ಪತ್ರೆಯ ಒಪಿಡಿ, ಡಯಾಲಿಸಿಸ್‌ ಕೇಂದ್ರ ಸಹಿತ ಆಸ್ಪತ್ರೆಯ ವಿವಿಧ ವಿಭಾಗದ ನಿರ್ವಹಣೆಗಾಗಿ ನೀರಿನ ಹಾಹಾಕಾರ ತಲೆದೋರಿದೆ. ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲೂ ಸಾಧ್ಯವಾಗುತ್ತಿಲ್ಲ ಎಂದು ವೈದ್ಯರು ದೂರುತ್ತಿದ್ದಾರೆ. 5 ಎಕ್ರೆ ಪ್ರದೇಶದಲ್ಲಿ ಆಸ್ಪತ್ರೆ ಇದ್ದರೂ ಸಮರ್ಪಕ ನೀರಿಗೆ ಬೇಕಾಗುವ ಎಲ್ಲ ವ್ಯವಸ್ಥೆಗಳನ್ನು ಇಲ್ಲಿ ಮಾಡದಿರುವ ಕಾರಣದಿಂದ ಈಗ ನೀರಿನ ಸಮಸ್ಯೆ ಎದುರಾಗಿದೆ. ಆಸ್ಪತ್ರೆ ಪರಿಸರದಲ್ಲಿ ಮಳೆಕೊಯ್ಲು ಮಾಡಲು ಅವಕಾಶವಿದ್ದರೂ ಅದು ಅನುಷ್ಠಾನವಾಗಿಲ್ಲ!

ಒಂದೆಡೆ ಸೆಕೆ-ಇನ್ನೊಂದೆಡೆ ನೀರಿಲ್ಲ!
“ಮಳೆ ಇಲ್ಲದೆ ನಗರದಲ್ಲಿ ಸೆಕೆ ವಿಪರೀತ ಆಗಿದೆ. ರಣಬಿಸಿಲಿನಿಂದ ಕಂಗಾಲಾಗುವ ಪರಿಸ್ಥಿತಿ ಉಂಟಾಗಿದೆ. ಬಿಸಿಲ ಝಳದಿಂದ ತರಗತಿಯಲ್ಲಿ ಕುಳಿತು ಪಾಠ ಮಾಡಲೂ ಆಗದ ಪರಿಸ್ಥಿತಿ ಇದೆ. ಮತ್ತೂಂದೆಡೆ ಬೇಕಾದಷ್ಟು ನೀರು ಕೂಡ ಸಿಗುತ್ತಿಲ್ಲ. ರೇಷನಿಂಗ್‌ ಸಮಸ್ಯೆ ಒಂದೆಡೆಯಾದರೆ, ಬಹುದಿನದವರೆಗೆ ಪೈಪ್‌ಲೈನ್‌ ಕೆಲಸದ ನೆಪದಿಂದ ನೀರು ಸಿಗುತ್ತಿಲ್ಲ. ಎಲ್ಲರೂ ಮಳೆಯ ನಿರೀಕ್ಷೆಯಲ್ಲಿದ್ದಾರೆ. ಮಳೆ ಮತ್ತಷ್ಟು ಮುಂದೆ ಹೋದರೆ ನಗರದ ಕಥೆ ಹೇಳತೀರದು’ ಎನ್ನುತ್ತಾರೆ ಕಾಲೇಜಿನ ಅಧ್ಯಾಪಕರೊಬ್ಬರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.