ಕೈಗಾರಿಕೆಗಳಿಗೆ ಸದ್ಯದಲ್ಲೇ ನೀರು ರೇಷನಿಂಗ್‌; ಜಿಲ್ಲಾಡಳಿತ ಚಿಂತನೆ


Team Udayavani, Mar 24, 2020, 4:32 AM IST

ಕೈಗಾರಿಕೆಗಳಿಗೆ ಸದ್ಯದಲ್ಲೇ ನೀರು ರೇಷನಿಂಗ್‌; ಜಿಲ್ಲಾಡಳಿತ ಚಿಂತನೆ

ಮಹಾನಗರ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಕೊರತೆ ತಲೆದೋರದಂತೆ ಕ್ರಮ ವಹಿಸುವ ನಿಟ್ಟಿನಲ್ಲಿ ನೇತ್ರಾವತಿ ನದಿಯಿಂದ ಕೈಗಾರಿಕೆಗಳು ನೀರು ಪಡೆದುಕೊಳ್ಳುವ ಪ್ರಮಾಣದ ಪರಿಷ್ಕರಣೆಗೆ ಮಂಗಳೂರು ಪಾಲಿಕೆ ಚಿಂತನೆ ನಡೆಸಿದೆ.

ಮಹಾನಗರ ಪಾಲಿಕೆ ಮೂಲಗಳ ಪ್ರಕಾರ, ಕೈಗಾರಿಕೆಗಳು ನೇತ್ರಾವತಿಯಿಂದ ಪಡೆಯುತ್ತಿರುವ ನೀರಿನ ಪ್ರಮಾಣವನ್ನು ಎಪ್ರಿಲ್‌ ಮೊದಲ ವಾರದಿಂದಲೇ ಕಡಿತಗೊ ಳಿಸುವ ಸಂಬಂಧ ದ.ಕ. ಜಿಲ್ಲಾಡಳಿತ ಕೆಲವೇ ದಿನದಲ್ಲಿ ತಿರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ.

ನಗರದ ಜನರಿಗೆ ಈ ಬಾರಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವುದಿಲ್ಲ ಎಂದು ಮೇಯರ್‌ ದಿವಾಕರ್‌ ಪಾಂಡೇಶ್ವರ, ಪಾಲಿಕೆ ಆಯುಕ್ತ ಶಾನಾಡಿ ಅಜಿತ್‌ ಕುಮಾರ್‌ ಹೆಗ್ಡೆ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ಕುಡಿಯುವ ನೀರಿನ ಕೊರತೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸುವ ನೆಲೆಯಲ್ಲಿ ಕೈಗಾರಿಕೆಗಳ ನೀರಿನ ಪ್ರಮಾಣದಲ್ಲಿ ಪರಿಷ್ಕರಣೆ ಮಾಡುವ ಬಗ್ಗೆ ಯೋಚನೆ ನಡೆಸಿದ್ದು, ವಾರದೊಳಗೆ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ಅವರು ಈ ಕುರಿತಂತೆ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ.

ಈಗ ತುಂಬೆ ಡ್ಯಾಂನಲ್ಲಿ ನೀರಿನ ಒಳ ಹರಿವು ಸ್ಥಗಿತವಾಗಿದ್ದು, ಎಪ್ರಿಲ್‌-ಮೇ ಅವಧಿಯಲ್ಲಿ ಮಳೆ ಬಾರದಿದ್ದರೆ ನಗರಕ್ಕೆ ನೀರಿನ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಕೈಗಾರಿಕೆಗಳಿಗೆ ನೀರು ರೇಷನಿಂಗ್‌ ಆರಂಭಿಸಬೇಕಾದ ಅನಿವಾರ್ಯತೆಯಿದೆ.

ಕಳೆದ ವರ್ಷ ಎಪ್ರಿಲ್‌ನಲ್ಲಿ ಜಾರಿ
ಕಳೆದ ವರ್ಷವೂ ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಮುನ್ನೆಚ್ಚರಿ ಕೆಗಾಗಿ ಕೈಗಾರಿಕೆಗಳಿಗೆ ನೀಡುತ್ತಿರುವ ನೀರಿನ ಪ್ರಮಾಣವನ್ನು ಅರ್ಧದಷ್ಟು ಕಡಿತಗೊ ಳಿಸಲಾಗಿತ್ತು. ಶಂಭೂರಿನ ಎಎಂಆರ್‌ ಡ್ಯಾಂ, ತುಂಬೆ ಡ್ಯಾಂ ಸಹಿತ ಒಟ್ಟು 18 ಎಂಜಿಡಿ ನೀರನ್ನು ಕೈಗಾರಿಕೆಗಳು ಬಳಕೆ ಮಾಡುತ್ತಿದ್ದವು. ಮಾರ್ಚ್‌ ಕೊನೆಯಲ್ಲಿ ಈ ಪ್ರಮಾಣವನ್ನು 15 ಎಂಜಿಡಿಗೆ ಕಡಿತಗೊಳಿಸಲಾಗಿತ್ತು. ಎಪ್ರಿಲ್‌ 1ರಿಂದ 15 ಎಂಜಿಡಿ ಇರುವ ನೀರಿನ ಬಳಕೆಯನ್ನು ಮತ್ತೆ ಕಡಿತಗೊಳಿಸಿ 13 ಎಂಜಿಡಿಗೆ ಇಳಿಸಿ, ಎ. 15ರಿಂದ ಈ ಪ್ರಮಾಣವನ್ನು 10.5 ಎಂಜಿಡಿಗೆ ಇಳಿಸಲಾಗಿತ್ತು.

ನೀರು ಮಿತವಾಗಿ ಬಳಸಿ
ನೀರನ್ನು ಸರಿಯಾಗಿ ಬಳಸಿ ಸಂರಕ್ಷಿಸುವ ಮೂಲಕ ಸಮರ್ಪಕ ನಿರ್ವಹಣೆ ಮಾಡಬ ಹುದಾಗಿದೆ. ನೀರನ್ನು ಪೋಲು ಮಾಡದೇ, ಅಪವ್ಯಯವಾಗದಂತೆ ಮುಂಜಾಗ್ರತೆ ವಹಿಸಿ ಮಳೆ ಪ್ರಾರಂಭ ವಾಗುವವರೆಗೆ ಲಭ್ಯ ನೀರನ್ನು ಕುಡಿಯುವ ಉದ್ದೇಶಕ್ಕೆ ಬಳಸಲು ಒತ್ತು ನೀಡಬೇಕಾಗಿದೆ. ನೀರಿನ ಬಳಕೆಯಲ್ಲೂ ಜಾಗೃತಿ, ಕೌಶಲಗಳ ಅಳವಡಿಕೆಗೂ ಹೆಚ್ಚಿನ ಒತ್ತು ನೀಡಬೇಕಾಗಿದೆ.

ತುಂಬೆ, ಎಎಂಆರ್‌ ಡ್ಯಾಂ; ನೀರಿನ ಪ್ರಮಾಣ ಕಡಿಮೆ
6 ಮೀಟರ್‌ ಸಾಮರ್ಥ್ಯದ ತುಂಬೆ ಡ್ಯಾಂನಲ್ಲಿ ಮಾ. 23ರಂದು 5.71 ಮೀಟರ್‌ ನೀರು ಸಂಗ್ರಹವಿದೆ. ಎಎಂಆರ್‌ ಡ್ಯಾಂನಲ್ಲಿ ಇದೇ ದಿನ 3 ಸೆಂ.ಮೀ.ನಷ್ಟು ನೀರು ಕಡಿಮೆಯಾಗಿದೆ. ಕಳೆದ ವರ್ಷ ಇದೇ ಸಮಯದಲ್ಲಿ ಎಎಂಆರ್‌ ಡ್ಯಾಂನಿಂದ ಒಮ್ಮೆ ತುಂಬೆ ಡ್ಯಾಂಗೆ ನೀರು ಪಡೆಯಲಾಗಿತ್ತು.

ಕೈಗಾರಿಕೆಗಳಿಗೆ ಎಷ್ಟು ನೀರು?
ನಗರಕ್ಕೆ 160 ಎಂಎಲ್‌ಡಿ (ದಿನವೊಂದಕ್ಕೆ ಮಿಲಿಯ ಲೀಟರ್‌) ನೀರು ಇಲ್ಲಿವರೆಗೆ ಪೂರೈಕೆಯಾಗುತ್ತಿದೆ. ಎಂಜಿಡಿ (ಮಿಲಿಯ ಗ್ಯಾಲನ್ಸ್‌) ಲೆಕ್ಕಾಚಾರದಲ್ಲಿ 160 ಎಂಎಲ್‌ಡಿ ಅಂದರೆ ಸುಮಾರು 35 ಎಂಜಿಡಿ. ತುಂಬೆ ಡ್ಯಾಂನಿಂದ ಎಂಸಿಎಫ್‌ಗೆ 2 ಎಂಜಿಡಿ, ಎನ್‌ಎಂಪಿಟಿಗೆ 0.5 ಎಂಜಿಡಿ, ಬೈಕಂಪಾಡಿ ಸಹಿತ ಇತರ ಕೈಗಾರಿಕೆಗಳಿಗೆ 1ಎಂಜಿಡಿ ನೀರು ಪೂರೈಕೆಯಾಗುತ್ತಿದೆ. ನೇತ್ರಾವತಿಯಿಂದ ಬಂಟ್ವಾಳ ಸಮೀಪವಿರುವ ಎಎಂಆರ್‌ ಡ್ಯಾಂನಿಂದ ಎಂಆರ್‌ಪಿಎಲ್‌ಗೆ 6 ಎಂಜಿಡಿ, ವಿಶೇಷ ಆರ್ಥಿಕ ವಲಯಕ್ಕೆ (ಎಸ್‌ಇಝಡ್‌) 8 ಎಂಜಿಡಿ ನೀರು ಪೂರೈಕೆಯಾಗುತ್ತದೆ. ಹೀಗೆ ಒಟ್ಟು ಸುಮಾರು 18 ಎಂಜಿಡಿಯಷ್ಟು ನೀರು ವಿವಿಧ ಕೈಗಾರಿಕೆಗಳಿಗೆ ತುಂಬೆ, ಎಎಂಆರ್‌ ಡ್ಯಾಂನಿಂದ ನೀರು ಪೂರೈಕೆಯಾಗುತ್ತಿದೆ.

ಸಭೆಯಲ್ಲಿ ತೀರ್ಮಾನ
ಮಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳುವ ಹಿನ್ನೆಲೆಯಲ್ಲಿ ಕೈಗಾರಿಕೆಗಳು ಬಳಕೆ ಮಾಡುತ್ತಿರುವ ನೀರಿನ ಪ್ರಮಾಣದಲ್ಲಿ ಪರಿಷ್ಕರಣೆ ಮಾಡುವ ಸಂಬಂಧ ಜಿಲ್ಲಾಧಿಕಾರಿಗಳಿಗೆ ಪಾಲಿಕೆಯಿಂದ ಪತ್ರ ಬರೆಯಲಾಗಿದೆ. ಅಂತಿಮ ತೀರ್ಮಾನವನ್ನು ಜಿಲ್ಲಾಧಿಕಾರಿಗಳು ಕೈಗೊಳ್ಳಲಿದ್ದಾರೆ.
-ಶಾನಾಡಿ ಅಜಿತ್‌ ಕುಮಾರ್‌ ಹೆಗ್ಡೆ, ಆಯುಕ್ತರು, ಪಾಲಿಕೆ

 ದಿನೇಶ್‌ ಇರಾ

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.