‘ನೀರು ಪೂರೈಕೆಗೆ ವಾರ್ಡ್‌ಗೊಂದು ಟ್ಯಾಂಕರ್‌ ನಿಗದಿ’

ನೀರು ಶುದ್ಧೀಕರಣ ಘಟಕಕ್ಕೆ ಖಾದರ್‌ ಭೇಟಿ; ಪರಿಶೀಲನೆ

Team Udayavani, May 26, 2019, 6:00 AM IST

2505MLR18

ಮಹಾನಗರ: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಜನರಿಗೆ ಟ್ಯಾಂಕರ್‌ನಲ್ಲಿ ನೀರು ಪೂರೈಕೆ ಮಾಡುವ ಕುರಿತಂತೆ ವಾರ್ಡ್‌ಗೊಂದು ಟ್ಯಾಂಕರ್‌ ನಿಗದಿ ಪಡಿಸಲು ಮಹಾನಗರ ಪಾಲಿಕೆಗೆ ಸೂಚನೆ ನೀಡಲಾಗಿದೆ ಎಂದು ನಗರಾಭಿವೃದ್ಧಿ ಖಾತೆಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ ತಿಳಿಸಿದರು.

ಶನಿವಾರ ನಗರದ ಬೆಂದೂರ್‌ವೆಲ್ನಲ್ಲಿರುವ ಪಾಲಿಕೆಯ ನೀರು ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿ ನೀರು ಸರಬರಾಜು ವ್ಯವಸ್ಥೆ ಬಗ್ಗೆ ಅವರು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಆಯುಕ್ತ ನಾರಾಯಣಪ್ಪ, ನೀರು ಸರಬರಾಜು ವಿಭಾಗದ ಎಂಜಿನಿಯರ್‌ಗಳಾದ ನರೇಶ್‌ ಶೆಣೈ, ದೇವರಾಜ್‌, ಮಾಜಿ ಮೇಯರ್‌ಗಳಾದ ಭಾಸ್ಕರ್‌ ಕೆ., ಹರಿನಾಥ್‌ ಮತ್ತು ಎಂ. ಶಶಿಧರ ಹೆಗ್ಡೆ, ಮಾಜಿ ಕಾರ್ಪೊರೇಟರ್‌ಗಳಾದ ನವೀನ್‌ ಆರ್‌. ಡಿ’ಸೋಜಾ, ಅಪ್ಪಿ, ಎ.ಸಿ. ವಿನಯರಾಜ್‌, ಅಶೋಕ್‌ ಕುಮಾರ್‌ ಡಿ.ಕೆ., ಪ್ರಕಾಶ್‌ ಸಾಲ್ಯಾನ್‌, ಆಶಾ ಡಿ’ಸಿಲ್ವಾ, ರತಿಕಲಾ, ಕವಿತಾ ವಾಸು, ಅಬ್ದುಲ್ ರವೂಫ್‌ ಮುಂತಾದವರು ಉಪಸ್ಥಿತರಿದ್ದು, ಅವರೊಂದಿಗೆ ಸಚಿವರು ಚರ್ಚಿಸಿದರು.

ವಾರ್ಡ್‌ಗೊಂದು ಟ್ಯಾಂಕರ್‌
ಪ್ರಸ್ತುತ ಪಾಲಿಕೆಯಲ್ಲಿ 25 ಟ್ಯಾಂಕರ್‌ಗಳಿದ್ದು, ಇನ್ನೂ 30 ಟ್ಯಾಂಕರ್‌ಗಳನ್ನು ಗುರುತಿಸಲಾಗಿದೆ. ಎಂಜಿನಿಯರ್‌ಗಳ ಸಂಘದ ಸಹಕಾರದೊಂದಿಗೆ ಈ ಟ್ಯಾಂಕರ್‌ಗಳನ್ನು ಪಡೆದು ವಾರ್ಡ್‌ಗೊಂದು ಟ್ಯಾಂಕರನ್ನು ನಿಗದಿ ಪಡಿಸಿ ನೀರು ಸರಬರಾಜು ಮಾಡಲಾಗುವುದು ಎಂದು ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.

ಮನೆಗೊಂದು ಬಾವಿ
ಟ್ಯಾಂಕರ್‌ಗಳಿಗೆ ನೀರು ಸರಬರಾಜು ಬಗ್ಗೆ ಪಾಲಿಕೆ ವ್ಯಾಪ್ತಿಯ
ಸಾರ್ವಜನಿಕ ಬಾವಿಗಳನ್ನು ಸ್ವಚ್ಛಗೊಳಿಸಲಾಗಿದೆ.ಈಗಾಗಲೇ 114 ಕೊಳವೆ ಬಾವಿಗಳಿದ್ದು, ಹೆಚ್ಚುವರಿಯಾಗಿ 15 ಕೊಳವೆ ಬಾವಿಗಳನ್ನು ಕೊರೆಯಲು ನಿರ್ಧರಿಸಲಾಗಿದೆ. ಇದರ ಹೊರತಾಗಿ ಖಾಸಗಿ ಬಾವಿಗಳನ್ನು ಸ್ವತ್ಛಗೊಳಿಸಲು ಮನವಿ ಸಲ್ಲಿಸಿದರೆ ವ್ಯವಸ್ಥೆ ಮಾಡ ಲಾಗುವುದು. ಮಂಗಳೂರಿನಲ್ಲಿ ರೇಷನಿಂಗ್‌ ನಿಯಮ ಜಾರಿಗೊಳಿಸಿದ್ದರಿಂದ ಒಂದು ಹಂತದ ತನಕ ನೀರು ಪೂರೈಕೆ ಮಾಡಲು ಸಾಧ್ಯವಾಗಿದೆ. ರೇಷನಿಂಗ್‌ ವ್ಯವಸ್ಥೆ ಮುಂದು ವರಿಸಿಕೊಂಡು ಹೋಗುವುದರಿಂದ ಜೂನ್‌ 6ರಿಂದ 10 ತನಕವೂ ನಗರದಲ್ಲಿ ನೀರು ಸರಬರಾಜು ಮಾಡಲು ಸಾಧ್ಯವಾಗ ಬಹುದು ಎಂದು ನಿರೀಕ್ಷಿಸಲಾಗಿದೆ ಎಂದು ಸಚಿವ ಯು.ಟಿ. ಖಾದರ್‌ ತಿಳಿಸಿದರು.

ಸಿವಿಲ್‌ ಎಂಜಿನಿಯರ್‌ಗಳ ಸೇವೆ ಬಳಕೆ
ಮಹಾನಗರ ಪಾಲಿಕೆಯಲ್ಲಿ ನೀರು ಪೂರೈಕೆ ವ್ಯವಸ್ಥೆಗೆ ಸಂಬಂಧಿಸಿ 5 ಮಂದಿ ಎಂಜಿನಿಯರುಗಳಿದ್ದು, ಪ್ರಸ್ತುತ ನೀರಿನ ಸಮಸ್ಯೆ ತೀವ್ರವಾಗಿರುವುದರಿಂದ ಈ ಐದು ಮಂದಿ ಎಂಜಿನಿಯರುಗಳಿಂದ ನಿಭಾಯಿಸಲು ಕಷ್ಟವಾಗುತ್ತಿದೆ. ಹಾಗಾಗಿ ಪಾಲಿಕೆಯಲ್ಲಿರುವ 12 ಜನ ಸಿವಿಲ್‌ ಎಂಜಿನಿಯರ್‌ಗಳ ಸೇವೆಯನ್ನು ತಾತ್ಕಾಲಿಕವಾಗಿ ನೀರು ಪೂರೈಕೆ ವ್ಯವಸ್ಥೆಯ ನಿರ್ವಹಣೆಗೆ ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಸಚಿವ ಖಾದರ್‌ ತಿಳಿಸಿದರು.

ಕಂಟ್ರೋಲ್ ರೂಂ
ನಗರದಲ್ಲಿ ಯಾವುದೇ ಪ್ರದೇಶದಲ್ಲಿ ನೀರು ಬಾರದಿದ್ದರೆ ಅಥವಾ ನೀರಿನ ಸಮಸ್ಯೆ ಇದ್ದರೆ ಅಂಥವರು ಮಹಾನಗರ ಪಾಲಿಕೆಯ ಕಂಟ್ರೋಲ್ ರೂಂ. ಸಂಪರ್ಕಿಸ ಬಹುದು: ಕಂಟ್ರೋಲ್ ರೂಂ ನಂಬರ್‌: 0824- 2220303, 0824- 2220362.ಜೂನ್‌ ಮೊದಲ ವಾರದಲ್ಲಿ ಮಳೆ ಬರ ಬಹುದೆಂದು ಹವಾಮಾನ ಇಲಾಖೆ ತಿಳಿಸಿದ್ದು, ಮಳೆ ಬಂದು ನೀರಿನ ಸಮಸ್ಯೆ ನೀಗುವಂತಾಗಲಿ ಎಂದರು.

ಟಾಪ್ ನ್ಯೂಸ್

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.