ಸಣ್ಣ-ಮಧ್ಯಮ ಕೈಗಾರಿಕೆಗಳಿಗೂ “ಜಲ ಸಂಕಟ’?


Team Udayavani, May 15, 2019, 6:09 AM IST

small-factory

ಮಂಗಳೂರು: ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಳ್ಳುತ್ತಿದ್ದಂತೆ ನೀರಿನ ಅಗತ್ಯ ಹೆಚ್ಚಿರುವ ಸುಮಾರು 700ಕ್ಕೂ ಅಧಿಕ ಸಂಖ್ಯೆಯ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೂ ಸಂಕಟ ಎದುರಾಗುವ ಸಾಧ್ಯತೆಯಿದೆ.

ಸದ್ಯ ಬಹುತೇಕ ಕೈಗಾರಿಕೆಗಳಿಗೆ ಖಾಸಗಿ ಬಾವಿ, ಬೋರ್‌ವೆಲ್‌, ಟ್ಯಾಂಕರ್‌ ಮೂಲಕ ನೀರಿನ ವಿತರಣೆ ನಡೆಯುತ್ತಿದ್ದರೂ ಮುಂದೆ ಕೆಲವು ದಿನಗಳವರೆಗೆ ಮಳೆ ಬಾರದಿದ್ದರೆ ಕಷ್ಟ ಎದುರಾಗಬಹುದು. 2016ರಲ್ಲಿ ಇದೇ ರೀತಿ ಸಮಸ್ಯೆ ಎದುರಾಗಿ ಕೆಲವು ಸಣ್ಣ-ಮಧ್ಯಮ ಕೈಗಾರಿಕೆಗಳು ಕೆಲವು ದಿನ ಸ್ಥಗಿತಗೊಂಡಿದ್ದವು.

ಬೈಕಂಪಾಡಿ ವ್ಯಾಪ್ತಿಯ ಒಟ್ಟು ಕೈಗಾರಿಕೆಗಳ ಪೈಕಿ ಸುಮಾರು 400ಕ್ಕೂ ಅಧಿಕ ಪಾಲಿಕೆ ನೀರನ್ನೇ ಅವಲಂಬಿಸಿವೆ. ವಾರ್ಷಿಕವಾಗಿ ಸುಮಾರು 4 ಕೋಟಿ ರೂ.ಗಳಷ್ಟನ್ನು ನೀರಿನ ಬಿಲ್‌ ಆಗಿ ಪಾವತಿಸುತ್ತಿವೆ. ಸದ್ಯ ಬೋರ್‌ವೆಲ್‌, ಬಾವಿ, ಟ್ಯಾಂಕರ್‌ ನೀರು ಇರುವುದರಿಂದ ದೊಡ್ಡ ಕೊರತೆ ಆಗಿಲ್ಲ. ಎಸ್‌ಇಝಡ್‌ ಒಳಗಿರುವ ಎರಡು ಕೈಗಾರಿಕೆಗಳಿಗೆ ನಗರದಿಂದ ನೀರು ಸರಬರಾಜು ನಿಂತಿದ್ದು, ಅವು ಈಗಾಗಲೇ ಸ್ಥಗಿತಗೊಂಡಿವೆ.

ಮಿತ ಬಳಕೆ; ಇರುವುದರ ಹಂಚಿಕೆ
ಬೈಕಂಪಾಡಿಯ ಕೈಗಾರಿಕೆಗಳ ಪೈಕಿ ಕೆಲವು ಸ್ವಂತ ನೀರಿನ ಮೂಲ ಬಳಸುತ್ತಿವೆ. ಮಿತ ಮತ್ತು ಕನಿಷ್ಠ ನೀರಿನ ಬಳಕೆಗೆ ಒತ್ತು ನೀಡಿರುವುದರಿಂದ ಸದ್ಯಕ್ಕೆ ಸಮಸ್ಯೆ ಗಂಭೀರವಾಗಿಲ್ಲ ಎಂಬುದು ಉದ್ಯಮಿಯೊಬ್ಬರ ಅಭಿಪ್ರಾಯ.
ಈಗ ಲಭ್ಯವಿರುವ ನೀರನ್ನು ಹಂಚಿಕೊಳ್ಳುವ ವ್ಯವಸ್ಥೆಯನ್ನು ಇಲ್ಲಿನ
ಬಹುತೇಕ ಕೈಗಾರಿಕೆಗಳ ಮುಖ್ಯಸ್ಥರು ಮಾಡಿಕೊಂಡಿದ್ದಾರೆ. ಜತೆಗೆ ಅಗತ್ಯವಿರುವಲ್ಲಿ ಟ್ಯಾಂಕರ್‌ ನೀರು ಸರಬರಾಜಿದೆ. ಹೀಗಾಗಿ ಸದ್ಯ ಬೆರಳೆಣಿಕೆ ಸಣ್ಣ ಕೈಗಾರಿಕೆಗಳಿಗೆ ಮಾತ್ರ ಸಂಕಷ್ಟ ಇದ್ದು, ಮುಂದೆ ಮಳೆ ಆಗದಿ
ದ್ದರೆ ಹಲವು ಕೈಗಾರಿಕೆಗಳು ಗಂಭೀರ ಸಮಸ್ಯೆ ಎದುರಿಸ ಬೇಕಾದೀತು ಎನ್ನುತ್ತಾರೆ ಅವರು.

ಯೆಯ್ನಾಡಿಯ ಕೈಗಾರಿಕೆಗಳು ಬೋರ್‌ವೆಲ್‌ ನೀರನ್ನು ಬಳಸುತ್ತಿವೆ. ದಿನ ಕಳೆದಂತೆ ಇಲ್ಲಿಯೂ ನೀರಿನ ಲಭ್ಯತೆ ಕಡಿಮೆಯಾಗುತ್ತಿದ್ದು, ಆತಂಕ ಆರಂಭವಾಗಿದೆ. ಮೇ ತಿಂಗಳ ಅಂತ್ಯದೊಳಗೂ ಮಳೆ ಬಾರದಿದ್ದರೆ ಸಣ್ಣ
ಕೈಗಾರಿಕೆಗಳು ಸಂಕಷ್ಟ ಎದುರಿಸುವುದರಲ್ಲಿ ಅನುಮಾನವಿಲ್ಲ.

ಸದ್ಯ ಬೈಕಂಪಾಡಿ ಕೈಗಾರಿಕಾ ಪ್ರಾಂಗಣ ವ್ಯಾಪ್ತಿಯ ಹಲವು ಕೈಗಾರಿಕೆಗಳು ಸಂಸ್ಕರಣ ಘಟಕ ಆರಂಭ ಮಾಡಿದ ಅನಂತರ ನೀರಿನ ಮರುಬಳಕೆಗೆ ವಿಶೇಷ ಒತ್ತು ನೀಡುತ್ತಿವೆ. ಜತೆಗೆ ಸಣ್ಣ ಕೈಗಾರಿಕೆಗಳು ಜಲಮರುಪೂರಣ ವ್ಯವಸ್ಥೆಗೆ ಒತ್ತು ನೀಡಿವೆ. ಮಳೆ ನೀರನ್ನು ಇಂಗಿಸುವ ಕೆಲಸಕ್ಕೆ ಬಹುತೇಕ ಸಣ್ಣ ಕೈಗಾರಿಕೆಗಳು ಮನಸ್ಸು ಮಾಡಿರುವುದು ಇಲ್ಲಿನ ವಿಶೇಷ.

650 ಕೈಗಾರಿಕೆಗಳು; 20,000 ಉದ್ಯೋಗಿಗಳು
ಬೈಕಂಪಾಡಿ ಮತ್ತು ಯೆಯ್ನಾಡಿಯಲ್ಲಿ ಕಿರು ಮತ್ತು ಸಣ್ಣ ಕೈಗಾರಿಕೆಗಳಿವೆ. ಆಹಾರ ಮತ್ತು ತಂಪು ಪಾನೀಯ, ಜವುಳಿ, ಮರದ ಉತ್ಪನ್ನ, ಪ್ರಿಂಟಿಂಗ್‌ ಮತ್ತು ಲೇಖನ ಸಾಮಗ್ರಿ, ಚರ್ಮದ ಉತ್ಪನ್ನ, ರಬ್ಬರ್‌ ಮತ್ತು ಪ್ಲಾಸ್ಟಿಕ್‌, ರಾಸಾಯನಿಕ, ಗ್ಲಾಸ್‌ ಮತ್ತು ಸಿರಾಮಿಕ್‌, ಮೂಲ ಲೋಹದ ಉತ್ಪನ್ನ, ಜನರಲ್‌ ಎಂಜಿನಿಯರಿಂಗ್‌, ಇಲೆಕ್ಟ್ರಿಕಲ್‌ ಮತ್ತು ಎಲೆಕ್ಟ್ರಾನಿಕ್ಸ್‌, ಆಟೋಮೊಬೈಲ್‌, ಸಾರಿಗೆ ಉತ್ಪನ್ನ ಮತ್ತು ಇತರ ಉತ್ಪಾದನೆಯಾಗುತ್ತವೆ.

ಬೈಕಂಪಾಡಿಯಲ್ಲಿ ಕಿರು ಮತ್ತು ಸಣ್ಣ ಸೇರಿದಂತೆ ಸುಮಾರು 650ರಷ್ಟು ಕೈಗಾರಿಕೆಗಳು ಹಾಗೂ ಯೆಯ್ನಾಡಿಯಲ್ಲಿ ಸುಮಾರು 45ರಷ್ಟು ಕೈಗಾರಿಕೆಗಳಿವೆ. 20,000ಕ್ಕೂ ಅಧಿಕ ಉದ್ಯೋಗಿಗಳು ಕೆಲಸ ಮಾಡುತ್ತಿದ್ದಾರೆ.

ಮಳೆಯಾಗದಿದ್ದರೆ
ನಗರದ ಸಣ್ಣ-ಮಧ್ಯಮ ಕೈಗಾರಿಕೆಗಳಿಗೆ ಸದ್ಯಕ್ಕೆ ನೀರಿನ ಸಮಸ್ಯೆ ಅಷ್ಟೊಂದು ಎದುರಾಗಿಲ್ಲ. ಇನ್ನೂ ಕೆಲವು ದಿನ ಮಳೆಯಾಗದಿದ್ದರೆ ಅವು ಕೂಡ ನೀರಿನ ಕೊರತೆ ಎದುರಿಸಬೇಕಾಗಬಹುದು.
– ಗೌರವ್‌ ಹೆಗ್ಡೆ, ಅಧ್ಯಕ್ಷ, ಬೈಕಂಪಾಡಿ ಕೆನರಾ ಸಣ್ಣ ಕೈಗಾರಿಕೆಗಳ ಸಂಘ

ಹೊಟೇಲ್‌ಗ‌ೂ ನೀರಿನ ಕೊರತೆ
ನೀರಿನ ಕೊರತೆ ಕಾಣಿಸಿಕೊಳ್ಳುತ್ತಿದ್ದಂತೆ ನಗರದ ಹೊಟೇಲ್‌ ಉದ್ಯಮಕ್ಕೂ ಬಿಸಿ ತಟ್ಟಲಾರಂಭಿಸಿದೆ. ನಗರದಲ್ಲಿ ಸುಮಾರು 500ರಷ್ಟು ಹೊಟೇಲ್‌ಗ‌ಳಿವೆ. ಕೆಲವು ಖಾಸಗಿ ಬೋರ್‌ವೆಲ್‌, ಬಾವಿಯ ನೀರನ್ನು ಆಶ್ರಯಿಸಿದ್ದರೆ, ಮಿಕ್ಕುಳಿದವುಗಳಿಗೆ ಟ್ಯಾಂಕರ್‌ ನೀರು. ಸಣ್ಣ-ಪುಟ್ಟ ಹೊಟೇಲ್‌ನವರು ಪಾಲಿಕೆ ನೀರಿಗಾಗಿ ಕಾಯುತ್ತಿದ್ದಾರೆ.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.