ಸುಗಮ ಮತದಾನಕ್ಕೆ ವೆದರ್ ರಿಪೋರ್ಟ್
Team Udayavani, May 10, 2023, 7:20 AM IST
ಸದ್ಯದ ಹವಾಮಾನ ಮುನ್ಸೂಚನೆ ಪ್ರಕಾರ ಕೆಲವು ಕ್ಷೇತ್ರಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅದರ ಸಂಪೂರ್ಣ ವಿವರವನ್ನು ಇಲ್ಲಿ ನೀಡಲಾಗಿದೆ. ಹೆಚ್ಚು ಕಡೆ ಮಧ್ಯಾಹ್ನ, ಸಂಜೆ ಮಳೆ ಸಾಧ್ಯತೆ ಇದೆ. ಹಾಗಾಗಿ ಬೆಳಗ್ಗೆಯೇ ಹೋಗಿ ಮತ ಹಾಕಿ ಬಂದು ಬಿಡಿ, ತಪ್ಪಿಸಬೇಡಿ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದೆಲ್ಲೆಡೆ ಮೇ 10ರಂದು ವಿಧಾನ ಸಭಾ ಚುನಾವಣೆ ನಡೆಯಲಿದ್ದು, ಈ ಬಾರಿಯ ಚುನಾ ವಣೆಗೆ ಕೆಲವೊಂದು ಕ್ಷೇತ್ರಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮತದಾರರು ತಮ್ಮ ಮತ ಹಾಕಲು ಮಳೆರಾಯ ಅಡ್ಡಿಪಡಿಸುವ ಸಾಧ್ಯತೆ ಇದೆ.
ಮಂಗಳೂರು ನಗರ ಸಹಿತ ವಿವಿಧ ತಾಲೂಕು ಗಳಲ್ಲಿ ಸೋಮವಾರ ರಾತ್ರಿ ವೇಳೆ ಉತ್ತಮ ಮಳೆ ಯಾಗಿತ್ತು. ಮಂಗಳವಾರ ದಿನವಿಡೀ ಸೆಕೆಯಿಂದ ಕೂಡಿದ ವಾತಾವರಣ ಇತ್ತು. ಭಾರತೀಯ ಹವಾ ಮಾನ ಇಲಾಖೆಯು ಮೇ 10 ರಂದು ಕರಾವಳಿ ಯಾದ್ಯಂತ ಎಲ್ಲೋ ಅಲರ್ಟ್ ಘೋಷಿಸಿದೆ. ಸದ್ಯದ ಮಾಹಿತಿಯಂತೆ ಮೇ 10ರಂದು ಜಿಲ್ಲೆಯಾದ್ಯಂತ ಬೆಳಗ್ಗೆಯ ವೇಳೆ ಮೋಡ ಕವಿದ ವಾತಾವರಣ ಇರಲಿದೆ. ಸುಮಾರು 10 ಗಂಟೆಯ ಬಳಿಕ ಬಿಸಿಲಿನ ವಾತಾವರಣ ಏರಲಿದ್ದು, ಬಳಿಕ ಸೆಕೆ ಹೆಚ್ಚಾಗಲಿದೆ. ಸಂಜೆ ವೇಳೆ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನೆಲೆಯಲ್ಲಿ ಮತದಾರರು ಸಂಜೆಯವರೆಗೆ ಕಾಯದೆ ಆದಷ್ಟು ಬೇಗ ತಮ್ಮ ಹಕ್ಕು ಚಲಾಯಿಸಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ