ವಾರಾಂತ್ಯ ಕರ್ಫ್ಯೂ: ದ.ಕ.ದಲ್ಲಿ ಇನ್ನೆರಡು ದಿನ ದಿನಸಿ, ತರಕಾರಿ ಅಲಭ್ಯ


Team Udayavani, Jun 25, 2021, 8:00 AM IST

ವಾರಾಂತ್ಯ ಕರ್ಫ್ಯೂ: ದ.ಕ.ದಲ್ಲಿ ಇನ್ನೆರಡು ದಿನ ದಿನಸಿ, ತರಕಾರಿ ಅಲಭ್ಯ

ಸಾಂದರ್ಭಿಕ ಚಿತ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ 7ರಿಂದ ಸೋಮವಾರ ಬೆಳಗ್ಗೆ 7ರ ವರೆಗೆ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿರಲಿದ್ದು, ಈ ಅವಧಿಯಲ್ಲಿ ಹಾಲು, ಪೇಪರ್‌, ಮೆಡಿಕಲ್‌ ಹಾಗೂ ತುರ್ತು ಸೇವೆಗಳಿಗಷ್ಟೇ ಅವಕಾಶ ಕಲ್ಪಿಸಲಾಗಿದೆ. ದಿನಸಿ ಅಂಗಡಿ, ಮದ್ಯದಂಗಡಿ ಸೇರಿದಂತೆ ಇತರ ಎಲ್ಲವೂ ಬಂದ್‌ ಆಗಲಿವೆ ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ಎಲ್ಲ ರಾಜ್ಯ ಮತ್ತು ಕೇಂದ್ರ ಸರಕಾರದ ಕಚೇರಿಗಳು ಮತ್ತು ಅವುಗಳ ಸ್ವಾಯತ್ತ ಸಂಸ್ಥೆಗಳು, ನಿಗಮಗಳು, ತುರ್ತು ಅಗತ್ಯ ಸೇವೆಗಳು ಮತ್ತು ಕೊರೊನಾ ಕಂಟೈನ್‌ಮೆಂಟ್‌ ಕರ್ತವ್ಯಗಳ ನಿರ್ವಹಣೆಗೆ ಅನುಮತಿ ಇರಲಿದೆ. ಸಂಬಂಧಿತ ಅಧಿಕಾರಿಗಳು ಮತ್ತು ಸಿಬಂದಿಯ ಸಂಚಾರಕ್ಕೆ ಅನುಮತಿ ಇದೆ.

ತುರ್ತು ಮತ್ತು ಅಗತ್ಯ ಸೇವೆಗಳೊಂದಿಗೆ ವ್ಯವಹರಿಸುವ ಮತ್ತು 24×7 ಕಾರ್ಯಾಚರಣೆಗಳ ಅಗತ್ಯವಿರುವ ಎಲ್ಲ ಕೈಗಾರಿಕೆಗಳು/ ಕಂಪೆನಿಗಳು/ ಸಂಸ್ಥೆಗಳು ಕಾರ್ಯ ನಿರ್ವಹಿಸಬಹುದು. ಅಂತಹ ನೌಕರರು ಗುರುತಿನ ಚೀಟಿ ತೋರಿಸಿ ಸಂಚರಿಸಬಹುದು. ಸಾಧ್ಯವಾದಷ್ಟು ಮಟ್ಟಿಗೆ ನೌಕರರನ್ನು ಮನೆಯಿಂದ ಕೆಲಸ ಮಾಡಲು ಪ್ರೋತ್ಸಾಹಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಎಪಿಎಂಸಿ ಮಾರ್ಕೆಟ್‌ ಬಂದ್‌ :

ವಾರಾಂತ್ಯ ಕರ್ಫ್ಯೂ ಅವಧಿಯಲ್ಲಿ ಎಪಿಎಂಸಿಯ ಬೈಕಂಪಾಡಿ ಮಾರುಕಟ್ಟೆ ಪ್ರಾಂಗಣದಲ್ಲಿ ಹಣ್ಣು ಮತ್ತು ತರಕಾರಿ ವ್ಯಾಪಾರ ಸಹಿತ ಎಲ್ಲ ವಹಿವಾಟುಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಎಪಿಎಂಸಿ ಅಧ್ಯಕ್ಷ ಕೆ. ಕೃಷ್ಣರಾಜ ಹೆಗ್ಡೆ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

  • ಟೆಲಿಕಾಂ ಮತ್ತು ಇಂಟರ್‌ನೆಟ್‌ ಸೇವೆಯ ನೌಕರರು ಅವರ ವಾಹನಗಳಲ್ಲಿ ಸಂಸ್ಥೆಯ ಗುರುತಿನ ಚೀಟಿ ತೋರಿಸಿ ಸಂಚರಿಸಬಹುದು. ಐಟಿ ಮತ್ತು ಐಟಿಇಎಸ್‌ ಕಂಪೆನಿಗಳು, ಸಂಸ್ಥೆಯ ಅಗತ್ಯ ಸಿಬಂದಿ, ನೌಕರರು ಮಾತ್ರವೇ ಕಚೇರಿಯಿಂದ ಕಾರ್ಯ ನಿರ್ವಹಿಸುವುದು.
  • ರೋಗಿಗಳು ಮತ್ತು ಪರಿಚಾರಕರು/ ತುರ್ತು ಅಗತ್ಯವಿರುವ ವ್ಯಕ್ತಿಗಳು, ಲಸಿಕೆ ತೆಗೆದುಕೊಳ್ಳುವವರಿಗೆ ದಾಖಲೆಗಳೊಂದಿಗೆ ಸಂಚಾರಕ್ಕೆ ಅನುಮತಿ ಇರುತ್ತದೆ.
  • ರೆಸ್ಟೋರೆಂಟ್‌, ಹೊಟೇಲ್‌ಗಳಿಂದ ಆಹಾರವನ್ನು ಮನೆಗೆ ತೆಗೆದುಕೊಂಡು ಹೋಗಲು ಮತ್ತು ಹೋಂ ಡೆಲಿವರಿಗೆ ಮಾತ್ರ ಅನುಮತಿ.
  • ಅಂತರ್‌ ಜಿಲ್ಲಾ ಬಸ್‌ಗಳು, ರೈಲುಗಳು ಮತ್ತು ವಿಮಾನ ಪ್ರಯಾಣಕ್ಕೆ ಅನುಮತಿ ಇದೆ. ವಿಮಾನ ನಿಲ್ದಾಣಗಳು, ಬಸ್‌ ಟರ್ಮಿನಲ್‌ಗಳು/ ರೈಲು ನಿಲ್ದಾಣಗಳಿಗೆ ಸಾರ್ವಜನಿಕ ಸಾರಿಗೆ, ಖಾಸಗಿ ವಾಹನಗಳು ಮತ್ತು ಟ್ಯಾಕ್ಸಿಗಳ ಸಂಚಾರಕ್ಕೆ ಅವಕಾಶ ಇದೆ. ಪ್ರಯಾಣದ ದಾಖಲೆ ಕೈಯಲ್ಲಿರಬೇಕು.
  • ಪೂರ್ವ ನಿಗದಿತ ಮದುವೆಗೆ ಮನೆಯಲ್ಲಿ ಮಾತ್ರ ಅವಕಾಶ. ಗರಿಷ್ಠ 25 ಜನರ ಪಾಲ್ಗೊಳ್ಳುವಿಕೆಯಲ್ಲಿ ನಡೆಸಬಹುದು.
  • ಅಂತ್ಯಸಂಸ್ಕಾರಕ್ಕೆ ಗರಿಷ್ಠ 5 ಜನರ ಮಿತಿ

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.