ಒಪಿಡಿ ವಿಭಾಗದ ಶೌಚಾಲಯದಲ್ಲಿ ಅವ್ಯವಸ್ಥಿತ ಫ್ಲಶ್‌ ಔಟ್‌;


Team Udayavani, Dec 1, 2018, 11:37 AM IST

1-december-2.gif

ಮಹಾನಗರ: ಬಡವರ ಆರೋಗ್ಯ ಸೇವೆಗಾಗಿ ಇರುವ ಸರಕಾರಿ ಆಸ್ಪತ್ರೆಗಳಲ್ಲಿ ಬೇಕಾದ ಸೌಲಭ್ಯಗಳನ್ನು ಕಲ್ಪಿಸಿಕೊಡುವುದೂ ಮುಖ್ಯ. ಆದರೆ ನಗರದ ಸರಕಾರಿ ವೆನ್ಲಾಕ್‌ ಆಸ್ಪತ್ರೆಯ ಹೊರ ರೋಗಿ ವಿಭಾಗದ ಶೌಚಾಲಯ ಇರುವ ಜಾಗಕ್ಕೆ ಹೋದರೆ ಅವ್ಯವಸ್ಥೆಯೇ ಎದ್ದು ಕಾಣುತ್ತಿದೆ.

ಆಸ್ಪತ್ರೆಯ ಒಪಿಡಿ ವಿಭಾಗದ ಶೌಚಾಲಯದಲ್ಲಿ ಸಮಸ್ಯೆ ಇರುವ ಬಗ್ಗೆ ಓದುಗರೊಬ್ಬರು ನೀಡಿದ ದೂರನ್ನಾಧರಿಸಿ ಆಸ್ಪತ್ರೆಗೆ ತೆರಳಿದ ‘ಸುದಿನ’ ತಂಡವು ಸೌಲಭ್ಯಗಳನ್ನು ಪರಿಶೀಲಿಸಿತು. ಈ ವೇಳೆ ಮುರಿದ ಟ್ಯಾಪ್‌, ಫ್ಲಶ್‌ ಔಟ್‌ ಇಲ್ಲದ ಶೌಚಾಲಯ ಕಂಡು ಬಂತು. ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ತಲಾ ನಾಲ್ಕು ಶೌಚಾಲಯಗಳಿದ್ದು, ಈ ಪೈಕಿ ಎರಡೂ ಕಡೆಯೂ ತಲಾ ಒಂದು ಶೌಚಾಲಯಕ್ಕೆ ಬೀಗ ಹಾಕಿಡಲಾಗಿದೆ. ವೆನ್ಲಾಕ್‌ ಆಸ್ಪತ್ರೆಯು ರಾಜ್ಯದ ಅತ್ಯುತ್ತಮ ಸರಕಾರಿ ಆಸ್ಪತ್ರೆ ಎಂಬ ಖ್ಯಾತಿ ಗಳಿಸಿದೆ. ಆದರೆ ಸೇವೆಯ ಜತೆಗೆ ಮೂಲ ಸೌಕರ್ಯಗಳೂ ಸರಿಯಾಗಿರಬೇಕು. 

ಆದರೆ ಆಸ್ಪತ್ರೆಯ ಒಪಿಡಿ ವಿಭಾಗದ ಶೌಚಾಲಯದಲ್ಲಿ ಸರಿಯಾದ ಸೌಲಭ್ಯವಿಲ್ಲದೆ ರೋಗಿಗಳು ಸಮಸ್ಯೆ ಎದುರಿಸುವಂತಾಗಿದೆ. ಶೌಚಾಲಯದೊಳಗೆ ಫ್ಲಶ್‌ ಔಟ್‌ ಸಿಸ್ಟಮ್‌ ಜೋಡಿಸಲಾಗಿದೆ. ಆದರೆ ಫ್ಲಶ್‌ ಔಟ್‌ನ ಪೈಪ್‌ ತುಂಡಾಗಿದ್ದು, ಕಬ್ಬಿಣದ ರಾಡ್‌ ಮಾತ್ರ ಉಳಿದುಕೊಂಡಿದೆ. ಅಲ್ಲದೆ, ಪುರುಷರ ಶೌಚಾಲಯದ ಫ್ಲಶ್‌ ಔಟ್‌ ಸಿಸ್ಟಮ್‌ನ ಮೇಲ್ಭಾಗ ಸಂಪೂರ್ಣ ತೆರೆದುಕೊಂಡಿದೆ. ಟ್ಯಾಪ್‌ನಲ್ಲಿ ಕೆಲವೊಮ್ಮೆ ನೀರೂ ಅಲಭ್ಯವಾಗುವುದರಿಂದ ಫ್ಲಶ್‌ ಔಟ್‌ ಅಗತ್ಯವಾಗಿ ಬೇಕಾಗುತ್ತದೆ. ಆದರೆ ಪೈಪ್‌ ಸಂಪರ್ಕ ಇಲ್ಲದೆ, ಇದರಲ್ಲಿ ನೀರೇ ಬರುತ್ತಿಲ್ಲ ಎನ್ನುತ್ತಾರೆ ರೋಗಿಗಳ ಜತೆಗೆ ಬಂದ ಸಂಬಂಧಿಕರು.

ತುಂಡಾದ ಬೇಸಿನ್‌ ಟ್ಯಾಪ್‌
ಇನ್ನು ಪುರುಷರ ಮತ್ತು ಮಹಿಳೆಯರ ಶೌಚಾಲಯದ ಹೊರಭಾಗದಲ್ಲಿ ರೋಗಿಗಳು ಅಥವಾ ಅವರ ಸಂಬಂಧಿಕರಿಗೆ ಮುಖ, ಕೈ ತೊಳೆಯುವುದಕ್ಕೆ ಬೇಸಿನ್‌ ಗಳನ್ನು ಹಾಕಲಾಗಿದೆ. ಆದರೆ ವಿಚಿತ್ರವೆಂದರೆ ಮಹಿಳೆಯರ ಹಾಗೂ ಪುರುಷರ ಶೌಚಾಲಯದಲ್ಲಿ ಅಳವಡಿಸಲಾದ ಎಲ್ಲ ಬೇಸಿನ್‌ಗಳ ಟ್ಯಾಪ್‌ ಮುರಿದಿದ್ದು, ತಿರುಗಿಸುವಾಗ ಅಲ್ಲಾಡುತ್ತಿದೆ. ಅಲ್ಲದೆ, ಈ ಮೂರೂ ಬೇಸಿನ್‌ಗಳಲ್ಲಿ ನೀರು ಬಾರದೇ, ರೋಗಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ರೋಗಿಗಳ ಸಂಬಂಧಿಕರು ಹೇಳುವ ಪ್ರಕಾರ, ಒಮ್ಮೊಮ್ಮೆ ಬೇಸಿನ್‌ ಟ್ಯಾಪ್‌ನಲ್ಲಿ ನೀರು ಬರುತ್ತದೆ. ಆದರೆ ನೀರು ಅಲಭ್ಯವಾದ ಸಂದರ್ಭದಲ್ಲಿ ಶೌಚಾಲಯದ ಟ್ಯಾಪ್‌ ನಿಂದ ನೀರು ತುಂಬಿಸಿ ತಂದು ಮುಖ, ಕೈಗಳನ್ನು ಶುಚಿಗೊಳಿಸಬೇಕಾಗುತ್ತದೆ ಎನ್ನುತ್ತಾರೆ.

ಸಚಿವರಿಗೂ ಪತ್ರ ಬರೆಯಲಾಗಿದೆ 
ಹಲವಾರು ಸಮಯಗಳಿಂದ ಶೌಚಾಲಯದಲ್ಲಿ ಈ ರೀತಿಯ ಸಮಸ್ಯೆ ಇದೆ. ಈ ಬಗ್ಗೆ ವೆನ್ಲಾಕ್‌ನ ಅಧಿಕಾರಿಗಳಿಗೆ, ಜಿಲ್ಲಾಧಿಕಾರಿಗೆ ಹಾಗೂ ಹಿಂದಿನ ಆರೋಗ್ಯ ಸಚಿವ ರಮೇಶ್‌ಕುಮಾರ್‌ ಅವರಿಗೆ ಪತ್ರ ಮುಖೇನ ತಿಳಿಸಲಾಗಿದೆ. ಆದಾಗ್ಯೂ ಅವ್ಯವಸ್ಥೆ ಮುಂದುವರಿದಿದೆ ಎಂದು ನಗರದ ನಿವಾಸಿ ಜಾಧವ್‌ ಮುಂಡೋಡು ತಿಳಿಸಿದ್ದಾರೆ.

ಶನಿವಾರವೇ ರಿಪೇರಿ
ಆಸ್ಪತ್ರೆಯಲ್ಲಿ ನೀರಿನ ವ್ಯವಸ್ಥೆ ಸರಿಯಾಗಿದೆ. ಯಾವುದೇ ಸಮಸ್ಯೆ ಇಲ್ಲ. ಟ್ಯಾಪ್‌ ಮುರಿದು ಹೋಗಿರುವ ಹಿನ್ನೆಲೆಯಲ್ಲಿ ಒಂದು ಶೌಚಾಲಯಕ್ಕೆ ಬೀಗ ಹಾಕಲಾಗಿದೆ. ಫ್ಲಶ್‌ ಔಟ್‌ ಇಲ್ಲದ ಶೌಚಾಲಯಗಳಲ್ಲಿ ತತ್‌ಕ್ಷಣವೇ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು. ರಿಪೇರಿ ಮಾಡುವವರು ರಜೆಯಲ್ಲಿದ್ದು, ಶನಿವಾರ ಬೆಳಗ್ಗೆ ವೇಳೆಗೆ ಎಲ್ಲವನ್ನು ರಿಪೇರಿ ಮಾಡಿಸಲಾಗುವುದು.
ಡಾ| ರಾಜೇಶ್ವರಿ ದೇವಿ,
  ವೈದ್ಯಕೀಯ ಅಧೀಕ್ಷಕಿ, ವೆನ್ಲಾಕ್‌ಆಸ್ಪತ್ರೆ 

ಧನ್ಯಾ ಬಾಳೆಕಜೆ 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.