ನಮ್ಮ ಶರತ್‌ ಏನು ಅನ್ಯಾಯ ಮಾಡಿದ್ದಾನೆ?


Team Udayavani, Jul 12, 2017, 3:25 AM IST

Sharath-Father-11-7.jpg

ಬಂಟ್ವಾಳ: ನಮ್ಮ ಶರತ್‌ ಏನು ಅನ್ಯಾಯ ಮಾಡಿದ್ದಾನೆ?ಯಾಕೆ ಅವನ ಮೇಲೆ ದ್ವೇಷ ಸಾಧಿಸಿದರು? ಸರಕಾರ ನೀಡುವ ಪರಿಹಾರದ ಹಣದಿಂದ ನಮ್ಮ ಶರತ್‌ ವಾಪಸ್‌ ಬರುವನೇ? ಹೀಗೆಂದು ಶರತ್‌ ಸಹೋದರಿಯರು ಜು.11ರಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರ ಎದುರು ಕಣ್ಣೀರು ಹಾಕಿದರು. ಸದಾನಂದ ಗೌಡ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರಾಗಿದ್ದ ಶರತ್‌ ಅವರ ಮನೆಗೆ ತೆರಳಿ ಮನೆಮಂದಿಗೆ ಸಾಂತ್ವನ ಹೇಳಿದ ಸಂದರ್ಭದಲ್ಲಿ  ಶರತ್‌ ಅವರ ಮನೆಯವರ ದುಃಖದ ಕಟ್ಟೆಯೊಡೆಯಿತು.

ಹಾಲು ಕರೆಯುತ್ತಿದ್ದ…
‘ತಾಯಿ ಬೆಳಗ್ಗೆ ಬೇಗ ಎದ್ದು ದನಗಳ ಹಾಲು ಕರೆಯಲು ಸಾಧ್ಯವಿಲ್ಲ. ದನಗಳನ್ನು ಕೊಡುವ’ ಎಂದು ನಾವು ಮನೆಯವರು ಹೇಳಿದ್ದೆವು. ಹಾಗಾಗಿ ಶರತ್‌ ತಾನೇ ಬೆಳಗ್ಗೆ ಬೇಗ ಎದ್ದು ಹಾಲು ಕರೆಯುವ ಕೆಲಸ ಮಾಡುತ್ತಿದ್ದ. ಈಗ ನಾವು ಹಾಲು ಕರೆಯಲು ಹೋಗುವಾಗ ಅವನ ಚಿತ್ರವೇ ಕಣ್ಣಿಗೆ ಕಟ್ಟುತ್ತದೆ. ದೇವರು ಅವನನ್ನು ಯಾಕೆ ರಕ್ಷಿಸಲಿಲ್ಲ? ಎಂದು ಸಹೋದರಿಯರು ಕಣ್ಣೀರಿಟ್ಟರು.

ಭಾಗ್ಯ ಕಳೆದುಕೊಂಡೆ
‘ನಾನು ಎಲ್ಲ ಭಾಗ್ಯವನ್ನು ಕಳೆದುಕೊಂಡಿದ್ದೇನೆ. ಈಗ ಮಗನೇ ಇಲ್ಲವಾಗಿದ್ದಾನೆ ಎಂದು ಶರತ್‌ ಅವರ ತಂದೆ ತನಿಯಪ್ಪ ಅವರು ಕಣ್ಣೀರು ಹಾಕಿದರು. ಡಿ.ವಿ.ಸದಾನಂದ ಗೌಡ ಅವರು ತಾನು ಪುತ್ರನನ್ನು ಕಳೆದುಕೊಂಡ ದಾರುಣ ಸಂದರ್ಭವನ್ನು ಸ್ಮರಿಸಿ ಕಣ್ಣೀರು ಸುರಿಸಿದರು. ‘ಧೈರ್ಯವಾಗಿರಿ. ಎಲ್ಲಕ್ಕೂ ಕಾಲವೇ ಉತ್ತರಿಸುತ್ತದೆ. ನಿಮ್ಮ ದುಃಖದಲ್ಲಿ ನಾನು ಸಹ ಭಾಗಿ. ಸಮಾಜ ನಿಮ್ಮ ಜತೆಗಿದೆ’ ಎಂದು ಸದಾನಂದ ಗೌಡ ಅವರು ಧೈರ್ಯ ತುಂಬುವ ಪ್ರಯತ್ನ ಮಾಡಿದರು.

ಬಿಜೆಪಿ ನೇತಾರ ರಾಜೇಶ್‌ ನಾೖಕ್‌ ಉಳಿಪಾಡಿಗುತ್ತು , ಕ್ಷೇತ್ರ ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷ ಬಿ. ದೇವದಾಸ ಶೆಟ್ಟಿ, ಕಾರ್ಕಳ ಶಾಸಕ, ಪ್ರತಿಪಕ್ಷ ನಾಯಕ ಸುನಿಲ್‌ ಕುಮಾರ್‌, ಕ್ಯಾ| ಗಣೇಶ್‌ ಕಾರ್ಣಿಕ್‌, ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜೀವ ಮಠಂದೂರು, ಮಾಜಿ ಶಾಸಕ ಎ. ರುಕ್ಮಯ ಪೂಜಾರಿ, ಯೋಗೀಶ್‌ ಭಟ್‌, ಮೋನಪ್ಪ ಭಂಡಾರಿ, ಜಿ. ಆನಂದ,  ಕಿಶೋರ್‌ ಕುಮಾರ್‌ ಬೊಟ್ಯಾಡಿ, ರಂಜನ್‌ ಗೌಡ ಬೆಳ್ತಂಗಡಿ, ದಿನೇಶ್‌ ಭಂಡಾರಿ ಬಂಟ್ವಾಳ, ಪುರಸಭಾ ಸದಸ್ಯ ಎ.ಗೋವಿಂದ ಪ್ರಭು, ಅಶೋಕ ರೈ ಪುತ್ತೂರು, ರಾಮ್‌ದಾಸ್‌ ಬಂಟ್ವಾಳ ಸಹಿತ ಇತರ ಪ್ರಮುಖರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.