ಬದುಕು ಇನ್ನೊಬ್ಬರಿಗೆ ಪ್ರೇರಣೆಯಾದಾಗ ಸಾರ್ಥಕ್ಯ: ಎ. ಸದಾನಂದ ಶೆಟ್ಟಿ
Team Udayavani, Jul 14, 2019, 5:08 AM IST
ಮಹಾನಗರ: ಮನುಷ್ಯನ ಸಾಧನೆ, ಕೊಡುಗೆಗಳು ಇನ್ನೊಬ್ಬರ ಬದುಕಿನ ಉನ್ನತಿಗೆ ಪೂರಕವಾದರೆ ಜೀವನ ಸಾರ್ಥಕ್ಯವನ್ನು ಪಡೆಯುತ್ತದೆ ಎಂದು ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ನ ಅಧ್ಯಕ್ಷ ಎ. ಸದಾನಂದ ಶೆಟ್ಟಿ ಹೇಳಿದರು.
ಟ್ರಸ್ಟ್ನ ವತಿಯಿಂದ ಆಯೋಜಿಸಿದ್ದ ಮಾಜಿ ಮೇಯರ್ ಕುಳಾಯಿ ದೇವಣ್ಣ ಶೆಟ್ಟಿ ಅವರಿಗೆ ಶ್ರದ್ಧಾಂಜಲಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾಮಾಜಿಕ ಕಳಕಳಿಯ ಬದುಕನ್ನು ಅಳವಡಿಸಿಕೊಂಡಿದ್ದ ದೇವಣ್ಣ ಶೆಟ್ಟಿ ಅವರು ಮೇಯರ್ ಆಗಿ, ಗ್ರಾ.ಪಂ. ಅಧ್ಯಕ್ಷರಾಗಿ ಮಾಡಿರುವ ಜನಪರ ಕೆಲಸ ಜನಮನದಲ್ಲಿ ಇಂದು ಶಾಶ್ವತವಾಗಿ ಉಳಿದಿದೆ ಎಂದರು.
ಮಿನದನ ಅಂತಿಮ ಸಿದ್ಧತೆ
ಜು. 14ರಂದು ಪಡು ಚಿತ್ತರಂಜನ್ ರೈ ನೇತೃತ್ವದಲ್ಲಿ ಪಡು ಬೊಂಡಂತಿಲದಲ್ಲಿ ಎ. ಸದಾನಂದ ಶೆಟ್ಟಿ ಅಧ್ಯಕ್ಷತೆಯಲ್ಲಿ ಮರಿಯಲದ ಮಿನದನ ಕಾರ್ಯಕ್ರಮ ನಡೆಯಲಿದ್ದು, ಇದರ ಅಂಗವಾಗಿ ಆಯೋಜಿಸಲಾಗುವ ವಿವಿಧ ಕಾರ್ಯಕ್ರಮಗಳ ಅಂತಿಮ ಸಿದ್ಧತೆ ಬಗ್ಗೆ ಚರ್ಚಿಸಲಾಯಿತು.
ಕದ್ರಿ ನವನೀತ ಶೆಟ್ಟಿ, ಕಮಲಾಕ್ಷ ಶೆಟ್ಟಿ, ರವೀಂದ್ರ ಶೆಟ್ಟಿ ಉಳಿದೊಟ್ಟು, ಸಿತಾರಾಮ ಶೆಟ್ಟಿ, ಆನಂದ ಶೆಟ್ಟಿ, ರೂಪಶ್ರೀ ಶೆಟ್ಟಿ, ಸೌಮ್ಯಾ ಶೆಟ್ಟಿ, ಸುನೀತಾ ಶೆಟ್ಟಿ, ವತ್ಸಲಾ ಮಲ್ಲಿ, ಆರತಿ ಆಳ್ವ, ಶಿವರಾಮ ಶೆಟ್ಟಿ, ರಾಕೇಶ್ ಪೂಂಜ, ಸುನೀಲ್ ಶೆಟ್ಟಿ, ರಾಮಚಂದ್ರ ಆಳ್ವ, ಹರೀಶ್ ಶೆಟ್ಟಿ, ದೇವಿಪ್ರಸಾದ್ ಅಜಿಲ, ನಾಗೇಶ್ ಶೆಟ್ಟಿ, ಜೀತೇಂದ್ರ ಶೆಟ್ಟಿ, ಎಂ.ಸಿ. ಶೆಟ್ಟಿ, ಪ್ರಸಾದ್ ರೈ ಕಲ್ಲಿಮಾರ್, ಶ್ರೀನಾಥ್ ರೈ, ರತನ್ ಶೆಟ್ಟಿ, ನಿತಿಶ್ ಎಕ್ಕಾರ್, ಸತ್ಯ ಪ್ರಕಾಶ್ ಶೆಟ್ಟಿ, ಮೂಲ್ಕಿ ಕರುಣಾಕರ ಶೆಟ್ಟಿ ಉಪಸ್ಥಿತರಿದ್ದರು. ಸಂಘಟನ ಕಾರ್ಯದರ್ಶಿ ರಾಜ ಗೋಪಾಲ ರೈ ಅವರು ಸ್ವಾಗತಿಸಿದರು. ಮಹಿಳಾ ವಿಭಾಗದ ಅಧ್ಯಕ್ಷೆ ವಿಜಯ ಲಕ್ಷ್ಮೀ ಬಿ. ಶೆಟ್ಟಿ ಅವರು ವಂದಿಸಿದರು. ಯುವ ವಿಭಾಗದ ಅಧ್ಯಕ್ಷ ದೇವಿಚರಣ್ ಶೆಟ್ಟಿ ಅವರು ಕಾರ್ಯ ಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ