“ಸಾಹಿತ್ಯಕ್ಕೆ ಸಂಗೀತ ಬೆರೆತಾಗ ಸೊಬಗು ಹೆಚ್ಚು’


Team Udayavani, Jul 13, 2017, 2:10 AM IST

1207rjh7.jpg

ನೆಹರೂನಗರ : ಭಾವನೆಗಳಿಗೆ ಪದಗಳ ರೂಪ ಕೊಟ್ಟರೆ ಸಾಹಿತ್ಯವಾಗುತ್ತದೆ. ಅದರೊಂದಿಗೆ ಸಂಗೀತ ಬೆರೆತಾಗ ಅದರ ಸೊಬಗು ಹೆಚ್ಚಾಗುತ್ತದೆ ಎಂದು ವಿವೇಕಾನಂದ ಪ. ಪೂ. ಕಾಲೇಜಿನ ಭೌತಶಾಸ್ತ್ರ  ವಿಭಾಗದ ಉಪನ್ಯಾಸಕಿ ನಂದಿನಿ ಹೇಳಿದರು.

ವಿವೇಕಾನಂದ ಕಾಲೇಜಿನ ತೃತೀಯ ಐಚ್ಛಿಕ ಕನ್ನಡ ವಿಭಾಗದ ವಿದ್ಯಾರ್ಥಿಗಳು ಕನ್ನಡ ವಿಭಾಗದ ಆಶ್ರಯದಲ್ಲಿ ಆಯೋಜಿಸುತ್ತಿರುವ ಸಾಹಿತ್ಯ ಮಂಟಪ -ಸಾಹಿತ್ಯ ಪ್ರಿಯ ಮನಗಳ ಸಮ್ಮಿಲನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ಬರವಣಿಗೆ ಹಾಗೂ ಅದರ ಸೊಬಗಿನೊಂದಿಗೆ ನಮ್ಮತನ ಎಂಬುದನ್ನೂ ಉಳಿಸಿಕೊಂಡು, ಬೆಳೆಸಿಕೊಂಡು ಹೋಗಬೇಕು ಎಂದರು.

ಸ್ವಂತಿಕೆಯನ್ನು ಬೆರೆಸಿ
ಬಾಲ್ಯದಲ್ಲಿ ರಚಿಸಿದ ಸಾಹಿತ್ಯಕ್ಕೆ ಬಾಲಿಶತೆಯ ಲೇಪನ ವಿರುತ್ತದೆ. ಪ್ರೌಢಶಾಲಾ- ಪದವಿಪೂರ್ವ ತರಗತಿಗೆ ಬಂದಾಗ ನಮ್ಮೊಂದಿಗೆ ನಮ್ಮ ಬರವಣಿಗೆಯೂ ಬೆಳೆಯುತ್ತದೆ. ಪದವಿ ಹಂತ ವಿಶೇಷವಾದದ್ದು. ಆಗ ನಾವೂ ಮತ್ತು ನಮ್ಮ ರಚನೆಗಳೆರಡೂ ಪ್ರೌಢತೆಯ ಹಾದಿಯಲ್ಲಿರುತ್ತವೆ. ನಮ್ಮ ರಚನೆಗೆ ಸ್ವಂತಿಕೆಯನ್ನು ಬೆರೆಸಿ ಬರೆಯುತ್ತಾ ಹೋದಂತೆ ಪಕ್ವಗೊಳ್ಳುತ್ತಾ ಹೋಗುತ್ತದೆ ಎಂದು ಹೇಳಿದರು.

ಅವಕಾಶ ಬಳಸಿಕೊಳ್ಳಿ
ಅಧ್ಯಕ್ಷತೆ ವಹಿಸಿದ್ದ ಕನ್ನಡ ವಿಭಾಗದ ಉಪನ್ಯಾಸಕಿ ಡಾ| ಗೀತಾ ಕುಮಾರಿ ಮಾತನಾಡಿ, ಸಿಕ್ಕ ಅವಕಾಶಗಳನ್ನು ಚೆನ್ನಾಗಿ ಬಳಸಿಕೊಂಡಾಗ ಬೆಳೆಯಲು ಸಾಧ್ಯ. ಪದವಿ ತರಗತಿಗಳಲ್ಲಿ  ಯಥೇತ್ಛವಾದ ಅವಕಾಶಗಳು ಪಠ್ಯೇತರ ಚಟುವಟಿಕೆಗಳಿಂದ ದೊರೆಯುತ್ತವೆ. ಯಾರಾದರೂ ನಮ್ಮ  ಬರವಣಿಗೆಯನ್ನು ವಿಮರ್ಶಿಸಿ ಮಾತನಾಡಿದಾಗ ಅದನ್ನು ಪ್ರೋತ್ಸಾಹದ ಮಾತುಗಳಾಗಿ ಸ್ವೀಕರಿಸಬೇಕೇ ವಿನಾ ಋಣಾತ್ಮಕವಾಗಿ ಅಲ್ಲ. ಇಂತಹ ವಿಮರ್ಶೆಗಳು ನಮ್ಮನ್ನು ನಾವು ಉತ್ತಮಪಡಿಸಿಕೊಳ್ಳಲು ಸಹಾಯ ಮಾಡುತ್ತವೆ ಎಂದರು.

ಕನ್ನಡ ವಿಭಾಗದ ಮುಖ್ಯಸ್ಥ ಡಾ| ಎಚ್‌.ಜಿ. ಶ್ರೀಧರ್‌, ಸಾಹಿತ್ಯ ಮಂಟಪದ ಸಂಯೋಜಕ ಡಾ| ಮನಮೋಹನ, ಸಾಹಿತ್ಯ ಮಂಟಪ ಕಾರ್ಯದರ್ಶಿ ಶ್ರೀನಾಥ್‌ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಪ್ರೀತಮ್‌, ಪೂಜಾ ಕೆ. ಸ್ವರಚಿತ ಕಥೆಗಳನ್ನು ವಾಚಿಸಿದರು. ಅಂತಿಮ ಪದವಿ ವಿದ್ಯಾರ್ಥಿನಿ ರೇಖಾ ಸ್ವಾಗತಿಸಿ, ಶ್ಯಾಮಲಾ ವಂದಿಸಿದರು. ಶಿವಶಂಕರ ಮಯ್ಯ ನಿರೂಪಿಸಿದರು.

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಚೆಂಡೆವಾದಕ ನೇಣು ಬಿಗಿದುಕೊಂಡು ಆತ್ಮಹತ್ಯೆ

Puttur: ಚೆಂಡೆವಾದಕ ನೇಣು ಬಿಗಿದುಕೊಂಡು ಆತ್ಮಹತ್ಯೆ

11

Puttur: ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಸಾವು ವೈದ್ಯರ ವಿರುದ್ಧ ದೂರು ದಾಖಲು

Bike theft: ಬಿ.ಸಿ.ರೋಡಿನಲ್ಲಿ ಬೈಕ್‌ ಕಳವು; ಪ್ರಕರಣ ದಾಖಲು

Bike theft: ಬಿ.ಸಿ.ರೋಡಿನಲ್ಲಿ ಬೈಕ್‌ ಕಳವು; ಪ್ರಕರಣ ದಾಖಲು

Bantwal: ಗಾಂಜಾ ಸೇವನೆ, ಸಾಗಾಟ; ಓರ್ವ ವಶಕ್ಕೆ

Bantwal: ಗಾಂಜಾ ಸೇವನೆ, ಸಾಗಾಟ; ಓರ್ವ ವಶಕ್ಕೆ

Kalladka: ಕಾರು ಢಿಕ್ಕಿಯಾಗಿ ಪಾದಚಾರಿ ಗಾಯ

Kalladka: ಕಾರು ಢಿಕ್ಕಿಯಾಗಿ ಪಾದಚಾರಿ ಗಾಯ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.