ಸಂಪರ್ಕ ಸೇತುವೆ ನಿರ್ಮಾಣ ಎಂದು?


Team Udayavani, Jan 18, 2019, 5:24 AM IST

18j-anuary-5.jpg

ಅರಂತೋಡು : ತೊಡಿಕಾನ ಗ್ರಾಮಕ್ಕೆ ಸೇರಿದ ತೊಡಿಕಾನ ಹಾಗೂ ಸಂಪಾಜೆ ಗ್ರಾಮದ ಸಂಪರ್ಕದ ಎರುಕಡಪು ಎಂಬಲ್ಲಿ ಸೇತುವೆ ನಿರ್ಮಾಣದ ಬೇಡಿಕೆ ಇನ್ನೂ ಈಡೇರದ ಕಾರಣ ಈ ಭಾಗದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ.

25 ವರ್ಷಗಳ ಹಿಂದೆ ಇಲ್ಲಿ ತೂಗು ಸೇತುವೆಯನ್ನು ನಿರ್ಮಾಣ ಮಾಡಲಾಗಿತ್ತು. ಇದೀಗ ತೂಗು ಸೇತುವೆ ಶಿಥಿಲಗೊಂಡು ಮುರಿದು ಬಿದ್ದಿದ್ದು, ನೇತಾಡುತ್ತಿದೆ. ಕಬ್ಬಿಣದ ರಾಡ್‌ಗಳು ತುಕ್ಕು ಹಿಡಿದಿವೆ. ಕೆಲವೊಂದು ಭಾಗಗಳು ಈ ವರ್ಷ ಸುರಿದ ಮಳೆಯಿಂದ ಹೊಳೆಯಲ್ಲಿ ಅಧಿಕ ನೀರು ಬಂದು ಕೊಚ್ಚಿಕೊಂಡು ಹೋಗಿವೆ. ಸೇತುವೆಯ ಇನ್ನೊಂದಷ್ಟು ಬಿಡಿ ಭಾಗಗಳು ಅಲ್ಲಿ ಜೋತಾಡುತ್ತಿವೆ. ಸುಮಾರು 8 ವರ್ಷಗಳ ಹಿಂದೆಯೇ ಈ ಸೇತುವೆ ಶಿಥಿಲಗೊಂಡಿದೆ. ಬಳಿಕ ಈ ಭಾಗದ ಜನರು ಮಳೆಗಾಲದಲ್ಲಿ ಸಂಪರ್ಕ ಕಳೆದುಕೊಂಡಿದ್ದಾರೆ.

ಅನುದಾನ ಬಿಡುಗಡೆಯಾಗಿಲ್ಲ
ಅನೇಕ ವರ್ಷಗಳಿಂದ ಇಲ್ಲಿಗೆ ಸರ್ವಋತುವಿನಲ್ಲಿ ವಾಹನ ಓಡಲು ಸಂಪರ್ಕ ಸೇತುವೆ ನಿರ್ಮಾಣ ಮಾಡಬೇಕೆಂದು ಸ್ಥಳೀಯಾಡಳಿತಕ್ಕೆ ಹಾಗೂ ಶಾಸಕರು, ಸಂಸದರಿಗೆ, ರಾಜ್ಯ ಸರಕಾರಕ್ಕೆ, ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಜನಪ್ರತಿನಿಧಿಗಳು ಸೇತುವೆ ನಿರ್ಮಾಣದ ಭರವಸೆ ನೀಡಿದ್ದರೂ ಎರಡು ವರ್ಷಗಳ ಹಿಂದೆ ಮಲೆನಾಡು ಪ್ರದೇಶಾಭಿವೃದ್ಧಿ ಯೋಜನೆ ಅಡಿ 50 ಲಕ್ಷ ರೂ. ಮಂಜೂರುಗೊಂಡಿತ್ತು. ಆದರೆ ಅನುದಾನ ಬಿಡುಗಡೆ ಆಗಿರಲಿಲ್ಲ.

ತೊಡಿಕಾನ ಗ್ರಾಮದ ಪೆತ್ತಾಜೆ ಎನ್ನುವಲ್ಲಿ ಸಂಪರ್ಕ ಸೇತುವೆ ನಿರ್ಮಾಣ ಮಾಡಲು ಅನುದಾನ ಬಿಡುಗಡೆಗೊಂಡಿದೆ ಎಂದು ತಿಳಿದುಬಂದಿದೆ. ಆದರೆ ಕಾಡುಪಂಜ ಹಾಗೂ ಊರುಪಂಜದ ಜನಪ್ರತಿನಿಧಿಗಳು ಎರುಕಡಪುದಲ್ಲಿಯೇ ಸೇತುವೆ ನಿರ್ಮಾಣ ಮಾಡಬೇಕೆಂದು ಜನಪ್ರತಿನಿಧಿಗಳನ್ನು ಒತ್ತಾಯಿಸುತ್ತಿದ್ದಾರೆ.

ಸುತ್ತು ಬಳಸಿ ಬರುವ ಜನರು
ಕಾಡಪಂಜ ಹಾಗೂ ಊರುಪಂಜ ಪರಿಸರದಲ್ಲಿ 42ಕ್ಕೂ ಅಧಿಕ ಮನೆಗಳು ಇವೆ. ಈ ಭಾಗದ ಜನರು ತಮ್ಮ ದಿನನಿತ್ಯದ ವ್ಯವಹಾರಗಳಿಗೆ ಸಂಪಾಜೆ ಗ್ರಾ.ಪಂ. ವ್ಯಾಪ್ತಿಯ ಕಲ್ಲುಗುಂಡಿ ಪೇಟೆಯನ್ನು ಅವಲಂಬಿಸಿದ್ದಾರೆ. ಇದೀಗ ಇಲ್ಲಿ ಸೇತುವೆ ನಿರ್ಮಾಣವಾಗದ ಪರಿಣಾಮ ಈ ಭಾಗದ ಜನರು 7 ಕಿ.ಮೀ. ಸುತ್ತು ಬಳಸಿ ಮಳೆಗಾಲ ಕಲ್ಲುಗುಂಡಿ ಪೇಟೆಯನ್ನು ಸೇರಬೇಕಾಗಿದೆ.

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.