ಜಿಲ್ಲೆಯ 2ನೇ ಅತಿ ದೊಡ್ಡ ಮಹಿಳಾ ಕಾಲೇಜಿನ ಸ್ವಂತ ಕಟ್ಟಡಕ್ಕೆ ವಿಘ್ನ?

 ಪುತ್ತೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಲಿಯುತ್ತಿದ್ದಾರೆ 717 ವಿದ್ಯಾರ್ಥಿಗಳು

Team Udayavani, Oct 13, 2019, 5:17 AM IST

e-25

ಪುತ್ತೂರು: ಜಿಲ್ಲೆಯ ಎರಡನೇ ಸ.ಪ್ರ.ದ. ಮಹಿಳಾ ಕಾಲೇಜು ಎಂಬ ಹೆಗ್ಗಳಿಕೆಯಿರುವ ಮತ್ತು ಬರೋಬ್ಬರಿ 717 ವಿದ್ಯಾರ್ಥಿಗಳನ್ನು ಹೊಂದಿರುವ ಪುತ್ತೂರು ಸ.ಪ್ರ.ದ. ಮಹಿಳಾ ಕಾಲೇಜಿಗೆ ಪ್ರಥಮ ಮೂಲ ಸೌಕರ್ಯವೆನಿಸಿರುವ ಸಮರ್ಪಕ ಕಟ್ಟಡ ಭಾಗ್ಯ ಇನ್ನೂ ಸಿಕ್ಕಿಲ್ಲ!

2014ರ ಜುಲೈ ತಿಂಗಳಲ್ಲಿ ಆರಂಭಗೊಂಡ ಕಾಲೇಜು ಪುತ್ತೂರು ನಗರದ ಹಲವು ಖಾಲಿ ಕಟ್ಟಡಗಳಿಗೆ ಸುತ್ತಿ ಕೆಲವು ವರ್ಷಗಳಿಂದ ಹಳೆಯ ಜೈಲಿನ ಕಟ್ಟಡ ಹಾಗೂ ಹಳೆಯ ತಾಲೂಕು ಕಚೇರಿ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಈ ಕಟ್ಟಡಗಳಲ್ಲಿ ಅನುಕೂಲತೆಗಳಿಲ್ಲದೆ ಉತ್ತಮ ಶಿಕ್ಷಣ ಪಡೆದು ಭವಿಷ್ಯದ ಸಂಪನ್ಮೂಲಗಳಾಗಿ ಬೆಳೆಯುವ ಮಕ್ಕಳು ಇಲ್ಲಿ ನರಕಸದೃಶರಾಗಿ ಪಾಠ ಕೇಳುವ ಸ್ಥಿತಿ ಇದೆ.

ಜಾಗ, ಅನುದಾನ ಸಿಕ್ಕಿತು
ಮಹಿಳಾ ಕಾಲೇಜು ಕಟ್ಟಡಕ್ಕೆ ಸ್ವಂತ ಕಟ್ಟಡ ಆಗಬೇಕೆನ್ನುವ ಉದ್ದೇಶದಿಂದ ನಡೆಸಿದ ಪ್ರಯತ್ನದ ಫಲವಾಗಿ ನಗರದಿಂದ ಬೊಳುವಾರು – ಉಪ್ಪಿನಂಗಡಿ ರಸ್ತೆಯ ಬನ್ನೂರು ಆನೆಮಜಲಿನಲ್ಲಿ 4.70 ಎಕ್ರೆ ಜಮೀನು ಸಿಕ್ಕಿದೆ. ಅದರ ಖಾತೆ ಬದಲಾವಣೆ ನಡೆದು ಇಲಾಖೆಯ ಆಯುಕ್ತರ ಹೆಸರಿಗೆ ಪಹಣಿಯೂ ಆಗಿದೆ. ಜತೆಗೆ ಸೌಕರ್ಯಗಳಿಗಾಗಿ ಸರಕಾರಕ್ಕೆ 8 ಕೊಟಿ ರೂ. ಪ್ರಸ್ತಾವನೆ ಸಲ್ಲಿಸಿ, ಅದರಲ್ಲಿ ಸದ್ಯಕ್ಕೆ 4.30 ಕೋಟಿ ರೂ. ಅನುದಾನ ಮಂಜೂರಾತಿಯೂ ಆಗಿದೆ. ಅದರಲ್ಲಿ 25 ಕೊಠಡಿಗಳು, ಪ್ರಾಂಶುಪಾಲರ ಕೊಠಡಿ, ಉಪನ್ಯಾಸಕರ ಕೊಠಡಿ, ವಿಶ್ರಾಂತಿ ಕೊಠಡಿ, ಗ್ರಂಥಾಲಯ, ಶೌಚಾಲಯ, 200 ಮೀ. ಆಟದ ಮೈದಾನ ನಿರ್ಮಾಣದ ಉದ್ದೇಶ ಇಟ್ಟುಕೊಳ್ಳಲಾಗಿದೆ. ಕಟ್ಟಡ ನಿರ್ಮಾಣದ ರೇಖಾ ನಕ್ಷೆಗೆ ಅನುಮೋದನೆಯೂ ಸಿಕ್ಕಿದೆ.

ಮತ್ತೇನು ಸಮಸ್ಯೆ?
ಇಲಾಖೆಯ ಹೆಸರಿಗೆ ಜಾಗದ ಪಹಣಿ ಆಗಿದ್ದರೂ ಆ ಜಾಗದ ಕುಮ್ಕಿ ಹಕ್ಕುದಾರರೊಬ್ಬರು ರಾಜ್ಯ ಮೇಲ್ಮನವಿ ಪ್ರಾಧಿಕಾರದಿಂದ ತಡೆಯಾಜ್ಞೆ ತಂದಿದ್ದಾರೆ. ಕುಮ್ಕಿ ವಿರಹಿತಗೊಳಿಸಿ ಜಿಲ್ಲಾಧಿಕಾರಿಯವರು ಜಾಗ ನೀಡಿದ ವಿಧಿ ವಿಧಾನ ಸರಿಯಾಗಿಲ್ಲ ಎಂಬ ದೂರು ಅವರದು. ಕಟ್ಟಡ ಕಟ್ಟಲು ತಡೆಯಾಜ್ಞೆ ಇರುವುದರಿಂದ ಇಷ್ಟರವರೆಗೆ ಮಹಿಳಾ ಕಾಲೇಜಿಗೆ ಸ್ವಂತ ಕಟ್ಟಡ ಭಾಗ್ಯ ಮರೀಚಿಕೆಯಾಗಿದೆ.

ಜೈಲಿನ ಕಟ್ಟಡ
ದೂರದೂರುಗಳಿಂದ ಕಾಲೇಜಿಗೆ ಸೇರಿರುವ ಬಡ ವಿದ್ಯಾರ್ಥಿನಿಯರಿಗೆ ಅನಾನುಕೂಲಕರ ಸ್ಥಿತಿಯಲ್ಲಿ ಪಾಠ ಪ್ರವಚನ ಕೇಳಬೇಕಾದ ಸ್ಥಿತಿ ಇದೆ. ಸ್ವಲ್ಪ ಸಮಯಕ್ಕೆ ಹಿಂದಿನ ಪುರಸಭಾ ಕಟ್ಟಡಕ್ಕೆ ತರಗತಿಗಳನ್ನು ಸ್ಥಳಾಂತರ ಮಾಡಿದ್ದರೂ ಅನಿವಾರ್ಯತೆಗೆ ಸಿಲುಕಿ ಮತ್ತೆ ಜೈಲಿನ ಕಟ್ಟಡಕ್ಕೆ ಸ್ಥಳಾಂತರವಾಗಿದ್ದಾರೆ. ಹಳೆಯ ಮತ್ತು ಇಕ್ಕಟ್ಟಾದ ಕೊಠಡಿ, ಜತೆಗೆ ಸೌಕರ್ಯಗಳ ಕೊರತೆ ವಿದ್ಯಾರ್ಥಿಗಳನ್ನು, ಉಪನ್ಯಾಸಕರನ್ನು ಕಾಡುತ್ತಿದೆ.

ವಿದ್ಯಾರ್ಥಿ ಸಂಖ್ಯೆಯಲ್ಲಿ ಪ್ರಗತಿ
2014-15ನೇ ಸಾಲಿನಲ್ಲಿ ನೆಲ್ಲಿಕಟ್ಟೆ ದ.ಪ್ರಾ. ಶಾಲೆಯಲ್ಲಿ ಕಾಲೇಜು ಆರಂಭಗೊಂಡಾಗ 2015-16ನೇ ಸಾಲಿನಲ್ಲಿ ಜೈಲಿನ ಕಟ್ಟಡಕ್ಕೆ ಸ್ಥಳಾಂತಗೊಂಡಾಗ ಮೊದಲ ಶೈಕ್ಷಣಿಕ ವರ್ಷದಲ್ಲಿ 120, ಎರಡನೇ ವರ್ಷ 354, ಮೂರನೇ ವರ್ಷ 540, ನಾಲ್ಕನೇ ವರ್ಷ 620, ಐದನೇ ವರ್ಷ 717ಕ್ಕೆ ಏರಿಕೆಯಾಗಿದೆ. ಬಿಎ ಹಾಗೂ ಬಿಕಾಂ ಎರಡೂ ವಿಭಾಗದಲ್ಲೂ ಎ ಹಾಗೂ ಬಿ ತರಗತಿಗಳನ್ನು ವಿಭಾಗಿಸಲಾಗಿದೆ.

 ಪ್ರಗತಿಗೆ ತೊಡಕು
ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿ ನಿಯರ ಸಂಖ್ಯೆ ಹೆಚ್ಚಾಗುತ್ತಿರುವುದು ನಮಗೆ ಖುಷಿಯಾಗುತ್ತಿದೆ. ಅದರಲ್ಲೂ ಕಲಾ ವಿಭಾಗಕ್ಕೆ ನಮ್ಮಲ್ಲಿ ಅತ್ಯಂತ ಹೆಚ್ಚು ವಿದ್ಯಾರ್ಥಿನಿಯರು ಸೇರ್ಪಡೆಯಾಗುತ್ತಿದ್ದಾರೆ. ಆದರೆ ಕಟ್ಟಡದ ಕೊರತೆ ಕಾಲೇಜಿನ ಇನ್ನಷ್ಟು ಪ್ರಗತಿಗೆ ತೊಡಕಾಗುತ್ತಿದೆ. ಆನೆಮಜಲಿನ ಜಾಗದ ಸಮಸ್ಯೆ ಬಗೆಹರಿದರೆ ಹೆದ್ದಾರಿಯ ಬದಿಯಲ್ಲಿ ಅತ್ಯಂತ ಅನುಕೂಲದ ಪರಿಸರದಲ್ಲಿ ಕಾಲೇಜು ಕಾರ್ಯನಿರ್ವಹಿಸಲಿದೆ.
– ಪ್ರೊ| ಝೇವಿಯರ್‌ ಡಿ’ಸೋಜಾ, ಕಾಲೇಜು ಪ್ರಾಂಶುಪಾಲರು

 ಶೀಘ್ರ ಕಟ್ಟಡ ನಿರ್ಮಾಣ
ಕುಮ್ಕಿ ಹಕ್ಕುದಾರರು ಮೇಲ್ಮನವಿ ಪ್ರಾಧಿಕಾರದಿಂದ ತಡೆಯಾಜ್ಞೆ ತಂದಿರುವುದರಿಂದ ಅನುದಾನವಿದ್ದರೂ ಕಾಲೇಜು ಕಟ್ಟಡ ನಿರ್ಮಾಣಕ್ಕೆ ತೊಂದರೆ ಯಾಗಿದೆ. ತಡೆಯಾಜ್ಞೆಯನ್ನು ತೆರವುಗೊಳಿಸುವ ನಿಟ್ಟಿನಲ್ಲಿ ಎಲ್ಲ ಪ್ರಯತ್ನಗಳನ್ನು ನಡೆಸಲಾಗುತ್ತಿದೆ ಮತ್ತು ಶೀಘ್ರದಲ್ಲಿ ಕಟ್ಟಡ ನಿರ್ಮಾಣವಾಗಲಿದೆ.
– ಸಂಜೀವ ಮಠಂದೂರು , ಶಾಸಕರು, ಪುತ್ತೂರು

- ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ; ಪ್ರಕರಣ ದಾಖಲು

Belthangady ರಸ್ತೆ ಬದಿಗೆ ಜಾರಿದ ಟೆಂಪೋ; ಟ್ರಾಫಿಕ್‌ ಜಾಮ್‌

Belthangady ರಸ್ತೆ ಬದಿಗೆ ಜಾರಿದ ಟೆಂಪೋ; ಟ್ರಾಫಿಕ್‌ ಜಾಮ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.