ಸುಬ್ರಹ್ಮಣ್ಯ: ಆನೆ ಬಂತು… ದಾರಿ ಬಿಡಿ!
Team Udayavani, Jan 27, 2023, 6:10 AM IST
ಸುಬ್ರಹ್ಮಣ್ಯ: ಸಲಗವೊಂದು ಊರಿನ ದಾರಿ ಹಿಡಿದಿದ್ದು, ಸ್ಥಳೀಯ ಜನತೆ, ಸಾರ್ವಜನಿಕರು ಎಚ್ಚರ ವಹಿಸುವಂತೆ ಸಾಮಾಜಿಕ ಜಾಲತಾಣದಲ್ಲಿ ಜಾಗೃತಿ ಮೂಡಿಸುವ ಕಾರ್ಯ ಸುಳ್ಯ ತಾಲೂಕಿನಲ್ಲಿ ನಡೆಯುತ್ತಿದೆ.
ಪಂಬೆತ್ತಾಡಿ, ಪಂಜ ಭಾಗದಲ್ಲಿ ಬುಧವಾರ ರಾತ್ರಿ ಕಾಡಾನೆ ಸಂಚರಿಸಿ ಬಳಿಕ ಪುಳಿಕುಕ್ಕು ಕಡೆಯಲ್ಲಿ ಹಾಗೂ ಅರಣ್ಯ ಪ್ರದೇಶ ಕಾಣಿಸಿಕೊಂಡಿದೆ ಎನ್ನಲಾಗಿದೆ. ರಾತ್ರಿ ಆನೆ ಸಂಚರಿಸುತ್ತಿರುವ ವೀಡಿಯೋಗಳು ಕೂಡ ಹರಿದಾಡುತ್ತಿವೆ. ಕೆಲವು ವರ್ಷಗಳಿಂದ ನಿರ್ದಿಷ್ಟ ಅವಧಿಯಲ್ಲಿ ಈ ಆನೆ ಊರಿನತ್ತ ಬಂದು ಹೋಗುತ್ತಿದೆ ಎನ್ನಲಾಗುತ್ತಿದ್ದು, ಈ ವರ್ಷವೂ ಪಂಜ ಭಾಗದಿಂದ ಸಂಚಾರ ಆರಂಭಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಇದೇ ಆನೆ 2021ರ ಫೆಬ್ರವರಿಯಲ್ಲಿ ಪಂಬೆತ್ತಾಡಿ, ಪಂಜದಲ್ಲಿ ಸಂಚರಿಸಿತ್ತು. ಬುಧವಾರ ರಾತ್ರಿ ಪಂಬೆತ್ತಾಡಿಯಿಂದ ಕರಿಕ್ಕಳದಲ್ಲಿ ರಾಜ್ಯ ಹೆದ್ದಾರಿ ದಾಟಿ ಚಿಂಗಾಣಿಗುಡ್ಡೆಯಲ್ಲಿ ಸಂಚರಿಸಿ ಎಣ್ಮೂರು ರಕ್ಷಿತಾರಣ್ಯದ ಪುಳಿಕುಕ್ಕು ಭಾಗಕ್ಕೆ ತೆರಳಿತ್ತು ಎಂದು ಪಂಜ ಅರಣ್ಯ ಇಲಾಖೆಯವರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು