ನೆರಿಯ: ಮುಂದುವರಿದ ಕಾಡಾನೆ ದಾಂಧಲೆ; ಆನೆ ಅಟ್ಟಲು ನಾಗರಹೊಳೆಯ ತಂಡ
Team Udayavani, Dec 14, 2022, 12:15 AM IST
ಬೆಳ್ತಂಗಡಿ: ತಾಲೂಕಿನ ನೆರಿಯ ಸುತ್ತಮುತ್ತ ಬೀಡು ಬಿಟ್ಟಿರುವ ಕಾಡಾನೆಗಳು ಸೋಮವಾರ ರಾತ್ರಿ ಕಡಿರುದ್ಯಾವರ ಗ್ರಾಮದ ಭಂಡಾಜೆ ಆಸುಪಾಸು ತೋಟಗಳಿಗೆ ದಾಳಿ ಇಟ್ಟು ಬಾಳೆ ಕೃಷಿಯನ್ನು ನಾಶಪಡಿಸಿವೆ.
ತೋಟತ್ತಾಡಿಯಲ್ಲಿ ಸೋಮವಾರ ರಾತ್ರಿಯೂ ಇಲಾಖೆಯ ಸಿಬಂದಿಯ ಕಾರ್ಯಾಚರಣೆಯ ವೇಳೆ ಮತ್ತೆ ಒಂಟಿ ಸಲಗ ಕಂಡುಬಂದಿದೆ. ಆದ್ದರಿಂದ ನೆರಿಯ ಅಣಿಯೂರಿನಲ್ಲಿ ಸೋಮವಾರ ಬೆಳಗ್ಗೆ ಕಂಡು ಬಂದ ಒಂಟಿ ಸಲಗವೂ ಇಲ್ಲಿರುವ ಸಲಗವೂ ಬೇರೆ ಬೇರೆ ಎಂಬ ಅನುಮಾನ ವ್ಯಕ್ತವಾಗಿದೆ. ರವಿವಾರ ನೆರಿಯದ ರಾಮಕುಮಾರ್ ಅವರ ತೋಟಕ್ಕೆ ದಾಳಿ ನಡೆಸಿರುವ ಒಂಟಿ ಸಲಗ ಅಡಿಕೆ ಗಿಡಗಳಿಗೆ ಹಾನಿ ಮಾಡಿದೆ. ಕಡಿರುದ್ಯಾವರ ಗ್ರಾಮದ ಭಂಡಾಜೆ ಬಳಿಯೂ ಆನೆಗಳು ದಾಳಿ ನಡೆದಿರುವುದರಿಂದ ಈ ಗ್ರಾಮಗಳಲ್ಲಿ ಬೇರೆ ಬೇರೆ ಹಿಂಡು ಇರುವುದು ಸ್ಪಷ್ಟವಾಗಿದೆ.
ಎಸಿಎಫ್ ಭೇಟಿ
ತೋಟತ್ತಾಡಿ, ಚಿಬಿದ್ರೆ ಗ್ರಾಮಗಳಿಗೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ರಹ್ಮಣ್ಯ ರಾವ್ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು. ಆನೆಗಳನ್ನು ಕಾಡಿಗಟ್ಟುವ ತಂಡ ಗಳಿಂದ ಹಾಗೂ ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿ ಹೆಚ್ಚಿನ ಸಲಹೆ ಸೂಚನೆಗಳನ್ನು ನೀಡಿದರು.
ಬೆಳ್ತಂಗಡಿ ವಲಯ ಅರಣ್ಯಧಿಕಾರಿ ತ್ಯಾಗರಾಜ್, ಉಪ ವಲಯ ಅರಣ್ಯಾಧಿಕಾರಿ ಭವಾನಿ ಶಂಕರ, ಗಸ್ತು ಅರಣ್ಯ ಪಾಲಕ ಪಾಂಡುರಂಗ ಕಮತಿ, ವಾಸಣ್ಣ ಹಾಗೂ ಸ್ಥಳೀಯರು ಇದ್ದರು.
ಆನೆ ಅಟ್ಟಲು ನಾಗರಹೊಳೆಯ ತಂಡ
ಕಾಡಾನೆಗಳ ಉಪಟಳವನ್ನು ತಡೆಗಟ್ಟಲು ನಾಗರಹೊಳೆಯಿಂದ ನುರಿತ ಕಾವಾಡಿಗರನ್ನು ತರಿಸಿ ಕಾಡಾನೆಗಳನ್ನು ಕಾಡಿಗೆ ಅಟ್ಟುವ ಕುರಿತು ಕ್ರಮ ಕೈಗೊಳ್ಳಲಾಗುವುದು ಈ ಬಗ್ಗೆ ಸಂಬಂಧಪಟ್ಟವರಲ್ಲಿ ಮಾತುಕತೆ ನಡೆಸಿದ್ದು ಮುಂದಿನ ಒಂದೆರಡು ದಿನದಲ್ಲಿ ತಂಡ ಆಗಮಿಸುವ ನಿರೀಕ್ಷೆ ಇದೆ ಎಂದು ಡಿಎಫ್ಒ ಡಾ| ದಿನೇಶ್ ಕುಮಾರ್ ತಿಳಿಸಿದ್ದಾರೆ.
ಈ ಹಿಂದೆ ಮುಂಡಾಜೆಯ ಧುಂಬೆಟ್ಟು ಪ್ರದೇಶಕ್ಕೂ ನಾಗರಹೊಳೆಯಿಂದ ಕಾವಾಡಿಗರು ಆಗಮಿಸಿದ್ದರು. ಆದರೆ ಆಗ ಆನೆಗಳ ಸುಳಿವು ಪತ್ತೆಯಾಗಿರಲಿಲ್ಲ. ತಂಡ ವಾಪಸಾದ ಒಂದೆರಡು ದಿನಗಳಲ್ಲೇ ಮತ್ತೆ ಉಪಟಳ ಆರಂಭಿಸಿದ್ದವು.
ಇದನ್ನೂ ಓದಿ: ಗುಂಡ್ಲುಪೇಟೆ: ಲಾರಿ ಢಿಕ್ಕಿ ಹೊಡೆದು ಹೆಣ್ಣಾನೆ ಸಾವು, ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ