ಬಿಳಿನೆಲೆ: ಆಮ್ನಿ ಮೇಲೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ


Team Udayavani, Jun 24, 2018, 6:00 AM IST

ss-29.jpg

ಕಡಬ: ಚಲಿಸುತ್ತಿದ್ದ ಆಮ್ನಿ ಕಾರಿನ ಮೇಲೆ ಕಾಡಾನೆಯೊಂದು ದಾಳಿ ಮಾಡಿ ಹಾನಿಗೈದ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆಯಲ್ಲಿ ಶನಿವಾರ ಸಂಭವಿಸಿದೆ.   

ಕಾರಿನಲ್ಲಿ ಒಂದೇ ಕುಟುಂಬದ 9 ಮಂದಿ ಪ್ರಯಾಣಿಸುತ್ತಿದ್ದು,  ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಉಳಿದವರು  ಅಪಾಯದಿಂದ ಪಾರಾಗಿದ್ದಾರೆ. ಅದೇ ದಾರಿಯಾಗಿ ಬಂದ ಸರಕಾರಿ ಬಸ್ಸೊಂದರ ಚಾಲಕ ಜೋರಾಗಿ ಹಾರ್ನ್ ಬಾರಿಸಿದ್ದರಿಂದ ಆನೆ ಕಾಡಿನತ್ತ ಓಡಿದ್ದು ಹೆಚ್ಚಿನ ಅಪಾಯ ತಪ್ಪಿದೆ.

ಚಿಕ್ಕಮಗಳೂರು ಮೂಲದ ತರೀಕೆರಿ ತಾಲೂಕು ಕುಡೂರು ಕುಟುಂಬದ ಯಾತ್ರಾರ್ಥಿ ಗಳು ಧರ್ಮಸ್ಥಳ‌ ಕ್ಷೇತ್ರ ದರ್ಶನ ಮುಗಿಸಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದರು. ಬೆಳಗ್ಗೆ 7 ಗಂಟೆಯ ಹೊತ್ತಿಗೆ ಬಿಳಿನೆಲೆ ಸಿಪಿಸಿಆರ್‌ಐ ಬಳಿ ಬರುತ್ತಿದ್ದಂತೆ ಹಠಾತ್ತಾಗಿ ದೊಡ್ಡ ಗಾತ್ರದ ಆನೆಯೊಂದು ಕಾರಿಗೆ ಅಡ್ಡ ಬಂದಿತು. ಗಲಿಬಿಲಿಗೊಂಡ ಚಾಲಕ ಪ್ರಭುಕುಮಾರ್‌ ಕಾರನ್ನು ರಸ್ತೆ ಬದಿ ನಿಲ್ಲಿಸಿದರು. ಆನೆಯು ದಂತ ಹಾಗೂ ಸೊಂಡಿಲಿನಿಂದ ಕಾರಿನ ಮುಂಭಾಗಕ್ಕೆ ತಿವಿದು, ಮುಂಗಾಲಿನಿಂದ ತುಳಿದು ಹಾನಿ ಮಾಡಿತು. 

ಅಷ್ಟರಲ್ಲಿ ಸರಕಾರಿ ಬಸ್ಸೊಂದು ಆ ದಾರಿಯಾಗಿ ಬಂದಿದ್ದು, ಅದರ ಚಾಲಕ ದೀರ್ಘ‌ವಾಗಿ ಹಾರ್ನ್ ಬಾರಿಸಿದರು. ಗಲಿಬಿಲಿಗೊಂಡ ಆನೆಯು ಕಾರನ್ನು ಬಿಟ್ಟು ಕಾಡಿನತ್ತ ಓಡಿ ಮರೆಯಾಗಿದ್ದರಿಂದ  ಸಂಭಾವ್ಯ ಅಪಾಯವೊಂದು ತಪ್ಪಿತು. ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಗಾಯಾಳುಗಳನ್ನು ಸ್ಥಳೀಯ ಆಟೋ ಚಾಲಕ ಸುಬ್ರಹ್ಮಣ್ಯ ಖಾಸಗಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದರು. ಕಡಬ ಪೊಲೀಸರು, ಅರಣ್ಯ ಇಲಾಖಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಎಚ್ಚರಿಕೆ ಫಲಕವಿಲ್ಲ
ಉಪ್ಪಿನಂಗಡಿ-ಕಡಬ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ  ದಟ್ಟ ಅರಣ್ಯದ ಮೂಲಕ ಸಾಗುತ್ತಿದ್ದು ಕೆಲವು ಸ್ಥಳಗಳಲ್ಲಿ ಕಾಡಾನೆ ಸಹಿತ ವನ್ಯ ಪ್ರಾಣಿಗಳು ರಸ್ತೆ ದಾಟುತ್ತವೆ. ಇಂತಹ ಸೂಕ್ಷ್ಮ ಸ್ಥಳಗಳಲ್ಲಿ  ಅರಣ್ಯ ಇಲಾಖೆ ಎಚ್ಚರಿಕೆ ಫಲಕ ಅಳವಡಿಸಿ ಮುನ್ನಚ್ಚರಿಕೆ ವಹಿಸಬೇಕಿತ್ತು. ಇನ್ನಾದರೂ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಸ್ಥಳೀಯರಿಂದ ವ್ಯಕ್ತವಾಗಿದೆ.

ಸರಿಯಾದ ಸಮಯಕ್ಕೆ ಬಸ್‌ ಬಂದು ಹಾರ್ನ್ ಹಾಕಿದ ಪರಿಣಾಮ ದೊಡ್ಡ ಅನಾಹುತವೊಂದು  ತಪ್ಪಿದೆ. ಸುಬ್ರಹ್ಮಣ್ಯ ಸ್ವಾಮಿಯೇ ಬಸ್‌ ಚಾಲಕನ ರೂಪದಲ್ಲಿ ಬಂದು ನಮ್ಮನ್ನು ಪಾರು ಮಾಡಿದ್ದಾನೆ.
– ಗಿರೀಶ್‌, ಗಾಯಾಳು

ನಮ್ಮ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ಸ್ಥಳ ಮಹಜರು ನಡೆಸಿದ್ದಾರೆ. ಸ್ಥಳದಲ್ಲಿ ಆನೆಯ ಹೆಜ್ಜೆ ಗುರುತುಗಳು ಕಂಡುಬಂದಿದ್ದು, ವಾಹನ ಜಖಂಗೊಂಡಿದೆ. ಪ್ರಯಾಣಿಕರಿಗೆ ಅಪಾಯ ಸಂಭವಿಸಿಲ್ಲ. ವಾಹನದ ಮಾಲಕರು ವಾಹನಕ್ಕೆ ವಿಮೆ ಪಡೆದುಕೊಳ್ಳಲು ಘಟನೆಯ ಬಗ್ಗೆ  ಅರಣ್ಯ ಇಲಾಖೆಯಿಂದ ಮಾಹಿತಿ ಬಯಸಿದರೆ ಪೂರಕ ದಾಖಲೆ ಒದಗಿಸಲು ನಾವು ಬದ್ಧರಿದ್ದೇವೆ.
-ಎಚ್‌.ಎನ್‌. ಜಗನ್ನಾಥ್‌, ಸ. ಅರಣ್ಯ ಸಂರಕ್ಷಣಾಧಿಕಾರಿ, ಸುಳ್ಯ

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.