ನಾಡಿಗೆ ಬಂದ ಕಾಡಾನೆಯ ಸಂಕಷ್ಟ
Team Udayavani, May 8, 2019, 4:21 PM IST
ಸುಬ್ರಹ್ಮಣ್ಯ: ಕಾಡಿನಲ್ಲಿ ಆಹಾರ ಕೊರತೆ ಕಾಣಿಸಿಕೊಳ್ಳುವ ಕಾರಣ ಹತ್ತಿರದ ಜನವಸತಿ ಪ್ರದೇಶಗಳಿಗೆ ಕಾಡುಪ್ರಾಣಿಗಳು ಲಗ್ಗೆ ಇಡುವ ಪ್ರಕರಣಗಳು ಪ್ರತೀದಿನವೆಂಬಂತೆ ವರದಿಯಾಗುತ್ತಲೇ ಇದೆ. ಅದರಲ್ಲೂ ಕಾಡೆಮ್ಮೆ, ಚಿರತೆ ಮತ್ತು ಕಾಡಾನೆಗಳು ಜನವಸತಿ ಪ್ರದೇಶಗಳಿಗೆ ಆಹಾರ ಮತ್ತು ನೀರನ್ನು ಹುಡುಕಿಕೊಂಡು ಬರುವುದು ಸರ್ವೇಸಾಮಾನ್ಯವಾಗಿಬಿಟ್ಟಿದೆ.
ಸುಬ್ರಹ್ಮಣ್ಯ ಭಾಗದಲ್ಲಿ ಬರುವ ಕುಮಾರ ಪರ್ವತದ ತಪ್ಪಲಿನ ಬಾಳುಗೋಡು ಮೀಸಲು ಅರಣ್ಯಭಾಗಕ್ಕೆ ಸೇರುವ ಕೋಟಿ ಝರಿ ಎಂಬ ಪ್ರದೇಶದ ಕಾಡಿನಲ್ಲಿ ಆನೆಯೊಂದು ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಈ ಕಾಡಾನೆಯ ಎಡ ಮುಂಗಾಲಿಗೆ ಬಲವಾದ ಪೆಟ್ಟುಬಿದ್ದಿರುವಂತೆ ತೋರುತ್ತಿದ್ದು ಆನೆ ನೋವು ತಾಳಲಾರದೆ ಮತ್ತು ಮುಂಗಾಲನ್ನು ಸರೀಯಾಗಿ ಊರಲೂ ಆಗದೇ ಯಾತನೆ ಅನುವಿಸುತ್ತಿದೆ.
ಪ್ರಾರಂಭದಲ್ಲಿ ಬುಧವಾರದಂದು ಈ ಕಾಡಾನೆಯು ಸ್ಥಳೀಯರನ್ನು ಅಟ್ಟಿಸಿಕೊಂಡು ಬಂದಿತ್ತು. ಬಳಿಕ ಕೆಲವರು ಆನೆ ಎಲ್ಲಿಗೆ ಹೋಗಿರಬಹುದು ಎಂದು ಕಾಡಿನೊಳಗೆ ಹುಡುಕುತ್ತಿದ್ದ ಸಂದರ್ಭದಲ್ಲಿ ಕಮರಿಯ ಹತ್ತಿರ ಆನೆ ಗಾಯಗೊಂಡು ನರಳಾಡುತ್ತಿರುವುದನ್ನು ಕಂಡಿದ್ದಾರೆ.
ಬಾಳುಗೋಡು, ಪದಕ, ಮಿತ್ತಡ್ಕ ಪರಿಸರದಲ್ಲಿ ಕಳೆದ ಕೆಲವು ದಿನಗಳಿಂದ ಕಾಡಾನೆಯೊಂದು ತಿರುಗಾಡುತ್ತಿದ್ದ ವಿಚಾರವನ್ನು ಈ ಭಾಗದ ಗ್ರಾಮಸ್ಥರು ತಿಳಿಸಿದ್ದು ಅದೇ ಆನೆ ಇದಾಗಿರಬಹುದೆಂಬ ಶಂಕೆಯೂ ಇದೀಗ ವ್ಯಕ್ತವಾಗಿದೆ.
ಗ್ರಾಮಸ್ಥರು ಸ್ಥಳೀಯ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಗಾಯಗೊಂಡ ಆನೆ ಇರುವ ಸ್ಥಳಕ್ಕೆ ಆಗಮಿಸಿ ಇದೀಗ ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಗುರುವಾರದಂದು ನಾಗರಹೊಳೆಯಿಂದ ತಜ್ಞ ವೈದ್ಯರು ಆಗಮಿಸಿ ಗಾಯಗೊಂಡಿರುವ ಈ ಕಾಡಾನೆಗೆ ಚಿಕಿತ್ಸೆ ನೀಡಲಿದ್ದಾರೆ ಎಂದು ರೇಂಜ್ ಫಾರೆಸ್ಟ್ ಆಫೀಸರ್ ತ್ಯಾಗರಾಜ್ ಅವರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್