ಅಣ್ಣಾಮಲೈ ದ.ಕ.ಎಸ್‌ಪಿ ಆಗುವರೇ ?


Team Udayavani, Jun 20, 2017, 3:18 PM IST

annamalai.jpg

ಮಂಗಳೂರು: “ದಕ್ಷಿಣ ಕನ್ನಡ ಜಿಲ್ಲೆ ಎಸ್‌ಪಿ ಆಗುವಂತೆ ನನಗೆ ಇದುವರೆಗೆ ಯಾರಿಂದಲೂ ಸೂಚನೆ ಬಂದಿಲ್ಲ’ ಎಂದು ಖಡಕ್‌ ಐಪಿಎಸ್‌ ಅಧಿಕಾರಿ ಎಂದೇ ಕರೆಸಿಕೊಂಡಿರುವ ಚಿಕ್ಕಮಗಳೂರು ಜಿಲ್ಲಾ ಎಸ್‌ಪಿ ಅಣ್ಣಾಮಲೈ ಸ್ಪಷ್ಟಪಡಿಸಿದ್ದಾರೆ.
ಏಕೆಂದರೆ, ದಕ್ಷಿಣ ಕನ್ನಡ ಜಿಲ್ಲೆಯ ಸದ್ಯದ ಕಾನೂನು ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರಕಾರವು ಚಿಕ್ಕಮಗಳೂರು ಎಸ್‌ಪಿ ಅಣ್ಣಾಮಲೈ ಅವರನ್ನು ಶೀಘ್ರದಲ್ಲೇ ಜಿಲ್ಲೆಗೆ ವರ್ಗಾಯಿಸುತ್ತಾರೆ ಎನ್ನುವ ಸುದ್ದಿಯೊಂದು ಕಳೆದ ಕೆಲವು ದಿನಗಳಿಂದ ಜಿಲ್ಲೆಯಾದ್ಯಂತ ಹರಿದಾಡುತ್ತಿದೆ. ಅಷ್ಟೇಅಲ್ಲ; ಅಣ್ಣಾಮಲೈ ಅವರು ದಕ್ಷಿಣ ಕನ್ನಡ ಜಿಲ್ಲೆ ಎಸ್‌ಪಿ ಆಗಿ ನೇಮಕಗೊಳಿಸುವುದಕ್ಕೆ ಬೆಂಬಲ ವ್ಯಕ್ತಪಡಿಸಿ ಈಗ ಸಾಮಾಜಿಕ ಜಾಲತಾಣಗಳಲ್ಲಿಯೂ ಸಾಕಷ್ಟು ಸಂದೇಶ, ಬರಹಗಳು ಹರಿದಾಡುತ್ತಿವೆ.

ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅವರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಭೂಷಣ್‌ ಜಿ. ಬೊರಸೆ
ಅವರೊಂದಿಗೆ ನಡೆಸಿದ ವಿವಾದಾತ್ಮಕ ಮಾತುಕತೆ ವೀಡಿಯೋ ಬಹಿರಂಗಗೊಂಡ ಬಳಿಕ ಅಣ್ಣಾಮಲೈ ಅವರು ಜಿಲ್ಲೆಗೆ ಆಗಮಿಸಲಿದ್ದಾರೆ ಎಂಬ ಊಹಾಪೋಹಗಳಿಗೆ ಮತ್ತಷ್ಟು ಪುಷ್ಟಿ ಬಂದಿವೆೆ. ಅಣ್ಣಾಮಲೈ ಅವರಂಥ ದಕ್ಷ ಹಾಗೂ ದಿಟ್ಟತನದ ಪೊಲೀಸ್‌ ಅಧಿಕಾರಿಯೇ ಸೂಕ್ತ ವ್ಯಕ್ತಿ ಎಂಬ ಅಭಿಪ್ರಾಯದ ಮಾತುಗಳು ಕೂಡ ಈಗ ಜಿಲ್ಲೆಯಲ್ಲಿ ವ್ಯಕ್ತವಾಗುತ್ತಿವೆ.

ಈ ನಡುವೆ, ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕ ಮತ್ತು ಇತರ ಭಾಗಗಳಲ್ಲಿ ನಡೆಯುತ್ತಿರುವ ಕೆಲವೊಂದು ಅಹಿತಕರ
ಘಟನೆಗಳ ಹಿನ್ನೆಲೆಯಲ್ಲಿ ಅವುಗಳನ್ನು ನಿಯಂತ್ರಿಸಲು ಹಾಗೂ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ
ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡು ಅಣ್ಣಾಮಲೈ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆ ಮಾಡುವ ಬಗ್ಗೆಯೂ ಸರಕಾರದ ಮಟ್ಟದಲ್ಲಿ ಗಂಭೀರ ಚರ್ಚೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿದೆ.

ಈ ಕುರಿತಂತೆ “ಉದಯವಾಣಿ’ ಸೋಮವಾರ ದೂರವಾಣಿ ಮೂಲಕ ಅಣ್ಣಾಮಲೈ ಅವರನ್ನು ಸಂಪರ್ಕಿಸಿದಾಗ, “ದ.ಕ. ಜಿಲ್ಲೆ ಎಸ್‌ಪಿ ಆಗುವ ಕುರಿತಂತೆ ಇಲ್ಲಿವರೆಗೆ ಯಾರು ಕೂಡ ಮಾತನಾಡಿಲ್ಲ. ನನಗೇನೂ ತಿಳಿದಿಲ್ಲ’ ಎಂದು ಹೇಳಿದ್ದಾರೆ.
ಅಣ್ಣಾಮಲೈ ಅವರು ಈ ಹಿಂದೆ ಉಡುಪಿಯಲ್ಲಿ ಎಸ್‌ಪಿ ಆಗಿ ಸೇವೆ ಸಲ್ಲಿಸಿದ್ದು, ಬಳಿಕ ಚಿಕ್ಕಮಗಳೂರಿಗೆ ವರ್ಗಾವಣೆಗೊಂಡಿದ್ದರು.

ಟಾಪ್ ನ್ಯೂಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.