ರಾಮ ರಾಜ್ಯ ನಿರ್ಮಾಣಕ್ಕಾಗಿ ಬಿಜೆಪಿ ಗೆಲ್ಲಿಸಿ: ಯೋಗಿ


Team Udayavani, May 10, 2018, 11:39 AM IST

10-May-10.jpg

ಸುಳ್ಯ : ಸುಳ್ಯ ಬಿಜೆಪಿ ಮಂಡಲ ವತಿಯಿಂದ ಮಂಗಳವಾರ ಸಂಜೆ ಚೆನ್ನಕೇಶವ ದೇವಾಲಯದ ಮುಂಭಾಗದಲ್ಲಿ ಬೃಹತ್‌ ಚುನಾವಣಾ ಪ್ರಚಾರ ಸಭೆ ನಡೆಯಿತು.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಮಾತನಾಡಿ, ಕರ್ನಾಟಕದಲ್ಲಿ ಗೂಂಡಾಗಿರಿ, ಗೋಹತ್ಯೆ, ಅಸುರಕ್ಷತೆ, ಜೆಹಾದಿ ಕೃತ್ಯಗಳನ್ನು ಮಟ್ಟ ಹಾಕಿ ಆದರ್ಶದ ಆಳ್ವಿಕೆಯ ಪ್ರತೀಕವಾಗಿರುವ ರಾಮರಾಜ್ಯ ನಿರ್ಮಾಣಕ್ಕಾಗಿ ಬಿಜೆಪಿಯನ್ನು ಬಹುಮತದಿಂದ ಗೆಲ್ಲಿಸಿ ಎಂದು ಕರೆ ನೀಡಿದ ಅವರು, ಧರ್ಮ, ಜಾತಿ ವಿಘಟನೆಯ ಮೂಲಕ ಸಮಾಜವನ್ನು ಒಡೆಯುವ ಕಾಂಗ್ರೆಸ್‌ ಸರಕಾರವನ್ನು ಕಿತ್ತೂಗೆಯುವಂತೆ ಅವರು ಮನವಿ ಮಾಡಿದರು.

ದ.ಕ. ಜಿಲ್ಲಾ ಚುನಾವಣಾ ಪ್ರಭಾರಿ ಕೆ. ಸುರೇಂದ್ರನ್‌ ಮಾತನಾಡಿ, ಕೇರಳ, ಪಂಜಾಬ್‌ ಚುನಾವಣೆಗಳಲ್ಲಿ ಇವಿಎಂ ಬಗ್ಗೆ ಮಾತನಾಡದ ಕಾಂಗ್ರೆಸ್‌ ಕರ್ನಾಟಕದಲ್ಲಿ ಬಿಜೆಪಿ ಗೆದ್ದರೆ ಇವಿಎಂ ಸರಿ ಇಲ್ಲ ಅನ್ನಬಹುದು. ಕರ್ನಾಟಕ ಚುನಾವಣೆ ಮತ ಎಣಿಕೆ ಅನಂತರ ರಾಹುಲ್‌ ಗಾಂಧಿ, ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್‌ ಅಸ್ತಿತ್ವವನ್ನೇ ಕಳೆದುಕೊಳ್ಳಲಿದೆ ಎಂದು ಟೀಕಿಸಿದರು.

ಬೇನಾಮಿ ಆಸ್ತಿ ತೋರಿಸಲಿ
ಶಾಸಕ ಎಸ್‌. ಅಂಗಾರ ಮಾತನಾಡಿ, ಸುಳ್ಯದ 110 ಕೆವಿ ಸಬ್‌ಸ್ಟೇಷನ್‌ ಬಗ್ಗೆ ಸದನದಲ್ಲಿ 24 ಬಾರಿ ಸಚಿವ ಡಿಕೆಶಿ ಅವರನ್ನು ನಾನು ಪ್ರಶ್ನಿಸಿದ್ದೆ. ಆದರೂ ಅಂಗಾರ ಅವರ ಮುಖವನ್ನೇ ಕಂಡಿಲ್ಲ ಎಂಬ ಡಿಕೆಶಿ ಹೇಳಿಕೆ ಅವರ ಸಣ್ಣತನವನ್ನು ತೋರಿಸುತ್ತದೆ ಎಂದ ಅವರು, ಕಾಂಗ್ರೆಸ್‌ ಮುಖಂಡರು ನನ್ನಲ್ಲಿ ಬೇನಾಮಿ ಆಸ್ತಿ ಇದೆ ಎಂದು ಆಪಾದಿಸಿದ್ದಾರೆ. ಅವರು ಅದನ್ನು ತೋರಿಸಿದರೆ, ತತ್‌ಕ್ಷಣವೇ ಬಿಟ್ಟು ಕೊಡುವುದಾಗಿ ಸವಾಲೆಸೆದರು.

ಹೆಲಿಪ್ಯಾಡ್‌ಗೆ ಆಗಮನ
ಸುಳ್ಯಕ್ಕೆ 3 ಗಂಟೆ ಹೊತ್ತಿಗೆ ಹೆಲಿಕಾಪ್ಟರ್‌ ನಲ್ಲಿ ಆಗಮಿಸಿದ ಯೋಗಿ ಆದಿತ್ಯನಾಥ್‌ ಅವರನ್ನು ಕೊಡಿಯಾಲಬೈಲು ಮಹಾತ್ಮಾಗಾಂಧಿ ಪ್ರೌಢಶಾಲೆಯ ಆವರಣದಲ್ಲಿನ ಹೆಲಿಪ್ಯಾಡ್‌ನ‌ಲ್ಲಿ ಶಾಸಕ ಅಂಗಾರ ಸಹಿತ ಬಿಜೆಪಿ ಮುಖಂಡರು ಸ್ವಾಗತಿಸಿದರು. ಕೆವಿಜಿ ಆಯುರ್ವೇದ ಕಾಲೇಜಿಗೆ ತೆರಳಿ ಕೆಲ ಕಾಲ ವಿಶ್ರಾಂತಿ ಪಡೆದು ಆಸ್ಪತ್ರೆ ವೀಕ್ಷಿಸಿದರು. ಕೆವಿಜಿ ಸಂಸ್ಥೆಯ ಡಾ| ಕೆ.ವಿ. ಚಿದಾನಂದ ಅವರ ಬಳಿ ಸಂಸ್ಥೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ಸಂದರ್ಭ ಬಿಜೆಪಿ ಮಾಧ್ಯಮ ವಕ್ತಾರ ಕೇಶವ ಭಟ್‌ ಮುಳಿಯ ಉಪಸ್ಥಿತರಿದ್ದರು. ಸಂಜೆ 4.20ರ ಹೊತ್ತಿಗೆ ಸಮಾವೇಶದ ಸ್ಥಳಕ್ಕೆ ಆಗಮಿಸಿದ್ದರು.

ಬಿಗಿ ಬಂದೋಬಸ್ತ್
ಯೋಗಿ ಆದಿತ್ಯನಾಥ ಆಗಮನ ಹಿನ್ನೆಲೆಯಲ್ಲಿ ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿತ್ತು. ಕೆಲ ಹೊತ್ತು ಕಾಲ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ನಗರದ ನಾನಾ ಭಾಗದಲ್ಲಿ ಅರೆಸೇನಾ ಪಡೆ, ವಿಶೇಷ ಭದ್ರತಾ ದಳ, ನೂರಾರು ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದರು. 

ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಪ್ರತಾಪಸಿಂಹ ನಾಯಕ್‌ ಮಾತನಾಡಿದರು. ವೇದಿಕೆಯಲ್ಲಿ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ ವಳಲಂಬೆ, ಪ್ರಧಾನ ಕಾರ್ಯದರ್ಶಿ ಪ್ರಕಾಶ್‌ ಹೆಗ್ಡೆ, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ನ.ಪಂ. ಅಧ್ಯಕ್ಷೆ ಶೀಲಾವತಿ ಮಾಧವ, ಜಿ.ಪಂ. ಉಪಾಧ್ಯಕ್ಷ ಕಸ್ತೂರಿ ಪಂಜ, ಎಪಿಎಂಸಿ ಅಧ್ಯಕ್ಷ ದೇರಣ್ಣ ಗೌಡ, ಎಸ್‌.ಎನ್‌. ಮನ್ಮಥ ಉಪಸ್ಥಿತರಿದ್ದರು.

ಚುನಾವಣಾ ಉಸ್ತುವಾರಿ ಎ.ವಿ. ತೀರ್ಥರಾಮ ಸ್ವಾಗತಿಸಿ, ಮಂಡಲ ಕಾರ್ಯದರ್ಶಿ ಸುಬೋಧ ಶೆಟ್ಟಿ ಮೇನಾಲ ವಂದಿಸಿದರು. ನಗರ ಸಮಿತಿ ಅಧ್ಯಕ್ಷ ವಿನಯ ಕುಮಾರ್‌ ಕಂದಡ್ಕ ನಿರೂಪಿಸಿದರು. ಮಾಧ್ಯಮ ಪ್ರಮುಖ್‌ ಮುಳಿಯ ಕೇಶವ ಭಟ್‌ ಸಹಕರಿಸಿದರು.

ಕುರುಂಜಿ ಸ್ಮರಿಸಿದ ಯೋಗಿ
ಕುರುಂಜಿ ವೆಂಕಟರಮಣ ಗೌಡ ಅವರನ್ನು ಸ್ಮರಿಸಿದ ಯೋಗಿ ಆದಿತ್ಯನಾಥ್‌, ಹತ್ತಾರು ವಿದ್ಯಾಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಸುಳ್ಯವನ್ನು ಶಿಕ್ಷಣದ ಕಾಶಿಯನ್ನಾಗಿಸಿರುವ ಅವರ ಕಾರ್ಯ ಶ್ಲಾಘನೀಯ ಎಂದು ಪ್ರಶಂಸಿಸಿದರು. ಆದಿಚುಂಚನಗಿರಿ ಕ್ಷೇತ್ರದ ಸಾಮಾಜಿಕ, ಶೈಕ್ಷಣಿಕ ಕೊಡುಗೆಗಳನ್ನು ಯುಪಿ ಮುಖ್ಯಮಂತ್ರಿ ಕೊಂಡಾಡಿದರು.

ವಿರಾಜಪೇಟೆ ಪ್ರವಾಸ ಮೊಟಕು
ಮಧ್ಯಾಹ್ನ ಕುಮಟಾ ಪ್ರವಾಸ ಮುಗಿಸಿದ ಅನಂತರ ಗೋಣಿಕೊಪ್ಪ, ವಿರಾಜಪೇಟೆ ಕಾರ್ಯಕ್ರಮಕ್ಕೆ ಹೆಲಿಕಾಪ್ಟರ್‌ನಲ್ಲಿ ತೆರಳಬೇಕಿದ್ದ ಯೋಗಿ ಆದಿತ್ಯನಾಥ ಅವರು ಮಳೆಯ ಕಾರಣದಿಂದ ಅಲ್ಲಿನ ಪ್ರವಾಸ ಮೊಟಕುಗೊಳಿಸಿ ಸುಳ್ಯಕ್ಕೆ ಆಗಮಿಸಿದ್ದರು. ಚೆನ್ನಕೇಶವ ದೇವಾಲಯದ ಮುಂಭಾಗದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಮಳೆ ಆರಂಭಗೊಳ್ಳುವ ಮುನ್ಸೂಚನೆ ಅರಿತು ಯೋಗಿ ಆದಿತ್ಯನಾಥ್‌ ಅವರು ಭಾಷಣ ಕೊನೆಗೊಳಿಸಿ, ಅನಂತರ ಮಂಗಳೂರು ಮೂಲಕ ಲಕ್ನೋಗೆ ತೆರಳಿದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.