ಗಾಳಿ: ಲಾರಿ ಮೇಲೆ ಉರುಳಿದ ಮರ
Team Udayavani, Apr 4, 2018, 7:48 AM IST
ಬೆಳ್ತಂಗಡಿ: ಮಂಗಳವಾರ ಸಂಜೆ ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಮಳೆ ಸುರಿದಿದ್ದು, ಉಜಿರೆಯ ನೀರಚಿಲುಮೆ ಬಳಿ ರಾಜ್ಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಮಿನಿ ಲಾರಿಯ ಮೇಲೆ ಮರ ಬಿದ್ದು ಹಾನಿ ಸಂಭವಿಸಿದೆ. ಸ್ವಲ್ಪ ಸಮಯ ಉಜಿರೆ – ಧರ್ಮಸ್ಥಳ ರಸ್ತೆ ಸಂಚಾರಕ್ಕೆ ಅಡ್ಡಿಯುಂಟಾಯಿತು.
ಹಲವು ವಿದ್ಯುತ್ ಕಂಬಗಳಿಗೂ ಹಾನಿಯುಂಟಾಗಿದೆ. ಕನ್ಯಾಡಿ-2 ಶಾಲೆ ಬಳಿ ವಿದ್ಯುತ್ ತಂತಿಗಳ ಮೇಲೆ ಮರಬಿದ್ದು ಹಾನಿಯುಂಟಾಗಿದೆ.
ಗುಡುಗು ಸಿಡಿಲು ಗಾಳಿ ಸಹಿತ ಮಳೆ ಸುರಿದಿದ್ದರಿಂದ ಮುಂಡಾಜೆ, ಕಲ್ಮಂಜ, ಮುಲಾರು ಮೊದಲಾದೆಡೆ 500ಕ್ಕೂ ಹೆಚ್ಚು ಅಡಿಕೆ ಮರ, ರಬ್ಬರ್ ಮರಗಳಿಗೆ ಹಾನಿಯಾಗಿದೆ. ಪರಾರಿ ಸಿದ್ದಬೈಲು ಮಾರ್ಗದ ಪಿಲತಡ್ಕ ಬಳಿ 5 ವಿದ್ಯುತ್ ಕಂಬಗಳು ನೆಲಕಚ್ಚಿವೆ. ಉಜಿರೆ, ಕನ್ಯಾಡಿ ಮೊದಲಾದೆಡೆ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಮಂಗಳವಾರ ಸಂಜೆಯಿಂದಲೇ ನಗರ ಸಹಿತ ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ ಉಂಟಾಗಿ ಕತ್ತಲು ಆವರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು