ಮಹಿಳಾ ಮತ್ತು ಮಕ್ಕಳ ಕೇಂದ್ರ ಅದ್ಭುತ ಪರಿಕಲ್ಪನೆ

ಕೆಎಂಸಿ ಆಸ್ಪತ್ರೆಯಲ್ಲಿ ಹೆರಿಗೆ ಮತ್ತು ಮಕ್ಕಳ ವಿಸ್ತೃತ ಸೇವೆಗಳ ಕೇಂದ್ರ ಅನಾವರಣಗೊಳಿಸಿ ಶಿಲ್ಪಾ ಶೆಟ್ಟಿ

Team Udayavani, Sep 27, 2019, 1:42 AM IST

x-52

ಬಾಲಿವುಡ್‌ ಅಭಿನೇತ್ರಿ ಶಿಲ್ಪಾಶೆಟ್ಟಿ ಕುಂದ್ರಾ ಅವರು ಮಹಿಳಾ ಮತ್ತು ಮಕ್ಕಳ ಕೇಂದ್ರಕ್ಕೆ ಚಾಲನೆ ನೀಡಿದರು.

ಮಂಗಳೂರು: ತಾಯ್ತನದ ಕಾಳಜಿ ಮತ್ತು ಆರೈಕೆಗಾಗಿ ಕೆಎಂಸಿ ಆಸ್ಪತ್ರೆ ಆರಂಭಿಸಿರುವ ವಿನೂತನ ಮಹಿಳಾ ಮತ್ತು ಮಕ್ಕಳ ಕೇಂದ್ರ ಒಂದು ಅದ್ಭುತ ಪರಿಕಲ್ಪನೆ ಎಂದು ಬಾಲಿವುಡ್‌ ಅಭಿನೇತ್ರಿ ಶಿಲ್ಪಾ ಶೆಟ್ಟಿ ಕುಂದ್ರಾ ಹೇಳಿದ್ದಾರೆ.

ನಗರದ ಅಂಬೇಡ್ಕರ್‌ ವೃತ್ತದ ಕೆಎಂಸಿ ಆಸ್ಪತ್ರೆಯಲ್ಲಿ ಆರಂಭಿಸಿರುವ “ಮಹಿಳಾ ಮತ್ತು ಮಕ್ಕಳ ಕೇಂದ್ರ’ಕ್ಕೆ ಗುರುವಾರ ಅವರು ಚಾಲನೆ ನೀಡಿದರು. ಬಳಿಕ ಡಾ| ಟಿಎಂಎ
ಪೈ ಇಂಟರ್‌ನ್ಯಾಶನಲ್‌ ಕನ್ವೆನ್ಶನ್‌ ಸೆಂಟರ್‌ನಲ್ಲಿ ಜರಗಿದ ಸಮಾರಂಭದಲ್ಲಿ “ವಾವ್‌ ಮಾಮ್‌- 2019′ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು. ಈ ಅದ್ಭುತ ಉಪಕ್ರಮಕ್ಕಾಗಿ ಕೆಎಂಸಿಯನ್ನು ಅಭಿನಂದಿಸುತ್ತೇನೆ ಎಂದರು. ಕೆಎಂಸಿ ಆಸ್ಪತ್ರೆಯ ಪ್ರಾದೇಶಿಕ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಗೀರ್‌ ಸಿದ್ಧಿಕಿ ಅವರು ಮಾತನಾಡಿ, ಕೇಂದ್ರದಲ್ಲಿರುವ ವಿವಿಧ ಸೌಲಭ್ಯಗಳ ಬಗ್ಗೆ ವಿವರಿಸಿದರು.

ಕೆಎಂಸಿ ವೈದ್ಯಕೀಯ ಸೇವೆಗಳ
ಮುಖ್ಯಸ್ಥ ಆನಂದ್‌ ವೇಣು ಗೋಪಾಲ್‌, ಮಣಿಪಾಲ್‌ ಹೆಲ್ತ್‌ ಎಂಟರ್‌ಪ್ರೈಸಸ್‌ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕಾರ್ತಿಕ್‌ರಾಜ್‌ಗೊàಪಾಲ್‌, ವೈದ್ಯಕೀಯ ಸೇವೆ ಗಳ ಮುಖ್ಯಸ್ಥೆ ಡಾ| ವಸುಧಾ ಶೆಟ್ಟಿ, ಇಂದಿರಾ ಬಲ್ಲಾಳ್‌ ಉಪಸ್ಥಿತರಿದ್ದರು.

ಮೊದಲ ಬಾರಿ ನಾನು ಸಮಸ್ಯೆ ಎದುರಿಸಿದ್ದೆ
ಚೊಚ್ಚಲ ಗರ್ಭ ಧರಿಸಿದ್ದಾಗ ನಾನು ಕೂಡ ಆರೋಗ್ಯ ಸಮಸ್ಯೆ ಎದುರಿಸಿದ್ದೆ. ಇದು ನಾನು ಎರಡನೇ ಬಾರಿ ಗರ್ಭವತಿಯಾದಾಗ ಹೆಚ್ಚು ಎಚ್ಚರ ಮತ್ತು ಕಾಳಜಿ ವಹಿಸುವಂತೆ ಮಾಡಿತ್ತು. ಇದರ ಫಲವಾಗಿ ಎರಡನೇ ಹೆರಿಗೆ ವೇಳೆ ಸಮಸ್ಯೆ ಅಥವಾ ಆತಂಕ ಎದುರಾಗಿರಲಿಲ್ಲ ಎಂದು ತಾಯ್ತನದ ಅನುಭವವನ್ನು ತೆರೆದಿಟ್ಟರು. ನಾನು ಈ ಊರಿನ ಮಗಳು. ಅಳಿಯಕಟ್ಟು ಸಂತಾನ ಈ ನಾಡಿನ ಪರಂಪರೆ. ಇದರಲ್ಲಿ ಮಹಿಳೆಗೆ ವಿಶೇಷ ಸ್ಥಾನಮಾನವಿದೆ. ಮಹಿಳೆಯನ್ನು ಅತ್ಯಂತ ಗೌರವದಿಂದ ಕಾಣಲಾಗುತ್ತದೆ ಎಂದು ತುಳುನಾಡಿನ ಹಿರಿಮೆ, ಸಂಬಂಧವನ್ನು ಮೆಲುಕು ಹಾಕಿದರು.

ಸಮಗ್ರ ಕ್ಲಿನಿಕ್‌ : ಡಾ| ಎಚ್‌.ಎಸ್‌. ಬಲ್ಲಾಳ್‌
ಮಾಹೆ ಸಹಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌ ಮಾತನಾಡಿ, ಈ ಸಮಗ್ರ ಕ್ಲಿನಿಕ್‌ ಮಹಿಳೆಯರಿಗೆ ಅತ್ಯದ್ಭುತ ರೀತಿಯಲ್ಲಿ ಪ್ರಯೋಜನಕಾರಿಯಾಗಲಿದೆ. ಕೆಎಂಸಿ ವಿನೂತನ ಪರಿಕಲ್ಪನೆ ಮತ್ತು ಉನ್ನತ ಆರೋಗ್ಯ ಸೇವೆಯೊಂದಿಗೆ ಟ್ರೆಂಡ್‌ ಸೆಟ್ಟರ್‌ ಆಗಿದೆ. ಜಿಲ್ಲೆಯಲ್ಲಿ ಇಂಥ ಸಮಗ್ರ ಕೇಂದ್ರ ಪ್ರಥಮ ಎಂದರು.

ನಫೀಸಾ, ಮೋನಿಸಾಗೆ “ವಾವ್‌ ಮಾಮ್‌’ ಕಿರೀಟ
ಕೆಎಂಸಿ ಆಸ್ಪತ್ರೆ ಮಂಗಳೂರು ವತಿಯಿಂದ ಆಯೋಜಿಸಿದ್ದ ಗರ್ಭಿಣಿಯರ “ವಾವ್‌ ಮಾಮ್‌’ ಸ್ಪರ್ಧೆಯಲ್ಲಿ ನಫೀಸಾ ಮಲಿಕ್‌ ಪ್ರಥಮ ಪ್ರಶಸ್ತಿ ಮತ್ತು ಮೋನಿಸಾ ಡಿ’ಸೋಜಾ ರನ್ನರ್ ಅಪ್‌ ಪ್ರಶಸ್ತಿ ಪಡೆದುಕೊಂಡಿದ್ದಾರೆ.  ಶಿಲ್ಪಾ ಶೆಟ್ಟಿ ಕುಂದ್ರಾ ವಿಜೇತರಿಗೆ ಪ್ರಶಸ್ತಿ ಕಿರೀಟ ತೊಡಿಸಿ ಪ್ರಶಸ್ತಿ ಪ್ರದಾನ ಮಾಡಿ ಅಭಿನಂದಿಸಿದರು.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.