ಮಂಗಳೂರು: ಮಹಾಮಾರಿ H1N1ಗೆ ಮಹಿಳೆ ಬಲಿ
Team Udayavani, Jul 30, 2017, 7:17 PM IST
ಮಂಗಳೂರು :ಮಾಹಾಮಾರಿ H1N1 ಖಾಯಿಲೆಗೆ ಬಾಣಂತಿ ಮಹಿಳೆ ಬಲಿಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಯ ವೇಣೂರು ನಿವಾಸಿ ಪುಷ್ಪಾವತಿ (27) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ ಮೃತಪಟ್ಟಿದ್ದಾರೆ.
ಪುಷ್ಪಾವತಿ ಕಳೆದ ಒಂದು ತಿಂಗಳಿನಿಂದ H1N1 ಖಾಯಿಲೆಗೆ ತುತ್ತಾಗಿದ್ದು ಮಂಗಳೂರಿನ ಖಾಸಾಗಿ ಆಸ್ಪತ್ರೆಗೆ ದಾಖಲಾಗಿದ್ದರು,ಎಂಟು ತಿಂಗಳ ಗರ್ಭಿಣಿಯಾಗಿದ್ದ ಪುಷ್ಪಾವತಿ ಹೊಟ್ಟೆಯಲ್ಲಿದ್ದ ಮಗುವನ್ನು ಸಿಸೇರಿಯನ್ ಮೂಲಕ ಹೊರತೆಗೆಯಲಾಗಿತ್ತು, ಆದ್ರೆ ಇದೀಗ ತೀವ್ರ ಅನಾರೋಗ್ಯಕ್ಕೀಡಾಗಿ ಪುಷ್ಪಾವತಿ ಮೃತರಾಗಿದ್ದು ಮಗು ಆರೋಗ್ಯವಾಗಿದ್ದು ಮಂಗಳೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಶುಶ್ರೂಷೆಯಲ್ಲಿದೆ.
ವೇಣೂರು ಗ್ರಾಮ ಪಂಚಾಯತ್ ನಲ್ಲಿ ಡಾಟಾ ಎಡಿಟರ್ ಆಗಿದ್ದ ಪುಷ್ಪಾವತಿ ಗೆ H1N1 ಉಲ್ಬಣವಾಗಿ,ಶ್ವಾಸಕೋಶದಲ್ಲಿ ಸಮಸ್ಯೆಯೂ ಕಂಡುಬಂದಿತ್ತು,ಕಡು ಬಡತನದ ನಡುವೆಯೂ ಆಸ್ಪತ್ರೆಯಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿದ್ರೂ ಇದೀಗ ಬದುಕುಳಿಯದಿರೋದು ಕುಟುಂಬಿಕನ್ನು ದುಃಖಿತರನ್ನಾಗಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್