ಜಲಸಿರಿ ಕಾಮಗಾರಿ; ಕೆಲವೆಡೆ ಮಂದಗತಿ

ಸುರತ್ಕಲ್‌: ತಾಂತ್ರಿಕ, ಜನವಸತಿ ಪ್ರದೇಶದ ತೊಡಕು

Team Udayavani, Mar 31, 2022, 1:13 PM IST

kamagari

ಸುರತ್ಕಲ್‌: ಮಂಗಳೂರು ಮಹಾನಗರ ಪಾಲಿಕೆಯ ಸುರತ್ಕಲ್‌ ವಲಯದಲ್ಲಿ 24×7 ಗಂಟೆಗಳ ಕಾಲ ಕುಡಿಯುವ ನೀರು ವಿತರಿಸುವ ಯೋಜನೆ ಜಲಸಿರಿ ಕಾಮಗಾರಿ ಮಂದಗತಿಯಲ್ಲಿ ನಡೆಯುತ್ತಿದೆ.

ಎರಡು ವರ್ಷಗಳಲ್ಲಿ ಪೂರ್ಣಗೊಳಿಸುವ ಗುರಿ ಹೊಂದಿರುವ ಈ ಕಾಮಗಾರಿಗೆ ಹಲವೆಡೆ ತಾಂತ್ರಿಕ, ಜನವಸತಿ ಪ್ರದೇಶದ ತೊಡಕುಗಳು ಎದುರಾಗಿದೆ. ಸುರತ್ಕಲ್‌ ಪೂರ್ವದಲ್ಲಿ ಎರಡು ಜಲಸಿರಿ ಓವರ್‌ ಹೆಡ್‌ ಟ್ಯಾಂಕ್‌ ನಿರ್ಮಾಣ ನಡೆಯುತ್ತಿದೆ. ಮುಂಚೂರು ಕೊಡಿಪಾಡಿಯಲ್ಲಿ ಟ್ಯಾಂಕ್‌ ಕಾಮಗಾರಿ ಶೇ. 50ರಷ್ಟು ಮುಗಿದಿದೆ.

ಸುರತ್ಕಲ್‌ ತಡಂಬೈಲ್‌ ಸಮೀಪದ ಟ್ಯಾಂಕ್‌ ಕಾಮಗಾರಿ ಸ್ಥಳದಲ್ಲಿ ಕೆಲಸ ನಿಧಾನಗತಿಯಲ್ಲಿ ನಡೆಯುತ್ತಿದೆ. ಕಾಟಿಪಳ್ಳ ಮೂರನೇ ವಾರ್ಡ್‌ ನಲ್ಲಿ ಅಂಡರ್‌ಗ್ರೌಂಡ್‌ ನೀರು ಸಂಗ್ರಹ ಟ್ಯಾಂಕ್‌ ನಿರ್ಮಾಣಕ್ಕೆ ಬೃಹತ್‌ ಗುಂಡಿ ತೋಡಲಾಗಿದ್ದು, ಸಿಮೆಂಟ್‌ ಬೆಡ್‌, ಕಾಂಕ್ರೀಟ್‌ ಕಾಮಗಾರಿ ನಡೆಯುವ ಹಂತದಲ್ಲಿದೆ. ಹೊಸಬೆಟ್ಟು ವಾರ್ಡ್‌ನಲ್ಲಿ ನಾಲ್ಕು ವಾರ್ಡ್‌ಗಳಿಗೆ ನೀರು ಪೂರೈಸುವ ಟ್ಯಾಂಕ್‌ ಕಾಮಗಾರಿ ಆರಂಭವಾಗಿಲ್ಲ. ಇಲ್ಲಿ ಜನವಸತಿ ಪ್ರದೇಶವಿದ್ದು, ಪೈಪ್‌ಲೈನ್‌ ಹಾಕುವ ವಿಚಾರದಲ್ಲಿ ಸಮಸ್ಯೆ ಉಂಟಾಗಿದೆ. ಗುದ್ದಲಿ ಪೂಜೆ ನೆರವೇರಿಸಿ ಹಲವು ತಿಂಗಳಾದರೂ ಕಾಮಗಾರಿ ನಡೆದಿಲ್ಲ. ಈ ಬಗ್ಗೆ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು. ಸ್ಥಳೀಯ ಮನಪಾ ಸದಸ್ಯರಿಗೆ ಪ್ರಗತಿಯ ಮಾಹಿತಿ ನೀಡಬೇಕು ಎಂಬುದು ನಮ್ಮ ಆಗ್ರಹ ಎನ್ನುತ್ತಾರೆ ಮನಪಾ ಸದಸ್ಯ ವರುಣ್‌ ಚೌಟ ಅವರು.

ಟ್ಯಾಂಕ್‌ ನಿರ್ಮಾಣದ ಬಳಿ ಹೊಸ ಪೈಪ್‌ ಅಳವಡಿಕೆ ಕಾಮಗಾರಿ ನಡೆಯಬೇಕಿದೆ. ಈಗಾಗಲೇ ಪೈಪ್‌ ಗಳನ್ನು ತರಿಸಲಾಗಿದ್ದು, ಸರ್ವೇ ಮಾಡಿದ ಸ್ಥಳದಲ್ಲಿ ಅಳವಡಿಕೆಯಾಗಲಿದೆ. ಹಲವೆಡೆ ಜಲಸಿರಿ ಕಾಮಗಾರಿ ಪೈಪ್‌ ಅಳವಡಿಕೆಗೆ ಅಗೆಯಲಾಗುತ್ತಿದ್ದು, ಸೂಕ್ತ ಬ್ಯಾರಿಕೇಡ್‌, ಮಾಹಿತಿ ಫಲಕ ಹಾಕಬೇಕಾದ ಆವಶ್ಯಕತೆಯಿದೆ. ನಗರದಲ್ಲಿ ಈಗಾಗಲೇ ಗ್ಯಾಸ್‌ ಪೈಪ್‌ಲೈನ್‌ ಕಾಮಗಾರಿಯೂ ನಡೆಯುತ್ತಿದ್ದು, ಯಾವ ಕಾಮಗಾರಿ ಎಂಬುದರ ಬಗ್ಗೆ ಮಾಹಿತಿ ಅಳವಡಿಸಿದರೆ ಉತ್ತಮ. ಇದರಿಂದ ಜನರಿಗೆ ಸಮಸ್ಯೆಯಾದಲ್ಲಿ ದೂರು ದಾಖಲಿಸಲು ಸಾಧ್ಯವಾಗುತ್ತದೆ ಎಂಬುದು ಜನರ ಅಭಿಪ್ರಾಯ.

ನೀರಿನ ಶುಲ್ಕ ಕುರಿತಂತೆ ಜನರಿಗೆ ಮಾಹಿತಿ ಇಲ್ಲ. ಪಾಲಿಕೆ ಕಡಿಮೆ ದರದಲ್ಲಿ ನೀರು ಪೂರೈಸುತ್ತಿದ್ದರೆ, ಜಲಸಿರಿ ಯೋಜನೆಯಲ್ಲಿ ಕಾಮಗಾರಿ ಬಳಿಕ ಏಳೆಂಟು ವರ್ಷ ನಿರ್ವಹಣೆಯನ್ನು ಗುತ್ತಿಗೆ ಪಡೆದ ಸೂಯೆಜ್‌ ಪ್ರಾಜೆಕ್ಟ್ ಸಂಸ್ಥೆಯೇ ಮಾಡಬೇಕಿದ್ದು, ಈ ಎಲ್ಲ ವೆಚ್ಚ ಆಧರಿಸಿ ನಿಗದಿ ಆಗಲಿದೆ ಎನ್ನಲಾಗಿದೆ.

ಸಮಸ್ಯೆ ಬಗೆಹರಿಸಲು ಕ್ರಮ

ಕುಡ್ಸೆಂಪ್‌ ವತಿಯಿಂದ ಜಲಸಿರಿ ಕಾಮಗಾರಿಗಳು ನಡೆಯುತ್ತಿವೆ. ನಿಗದಿತ ಗುರಿಯೊಳಗೆ ಮುಗಿಸಿಕೊಡುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ತಾಂತ್ರಿಕ ಸಮಸ್ಯೆಗಳಿದ್ದರೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಅಕ್ಷಯ್‌ ಶ್ರೀಧರ್‌, ಆಯುಕ್ತರು, ಮಂಗಳೂರು ಮಹಾನಗರ ಪಾಲಿಕೆ

ಟಾಪ್ ನ್ಯೂಸ್

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.