ಕಾರ್ಯಾಗಾರ, ಪ್ರಾತ್ಯಕ್ಷಿಕೆ, ವಿವಿಧೆಡೆ ಮಳೆಕೊಯ್ಲು ಅಳವಡಿಕೆ

"ಮನೆ ಮನೆಗೆ ಮಳೆಕೊಯ್ಲು' ಉದಯವಾಣಿ ಅಭಿಯಾನದ ಯಶಸ್ಸು

Team Udayavani, Aug 11, 2019, 5:00 AM IST

d-17

ಯೆಯ್ನಾಡಿ: ಜಿಲ್ಲಾ ಸಣ್ಣ ಕೈಗಾರಿಕಾ ಸಂಘ ಕೈಗಾರಿಕಾ ವಸಾಹತು ಮಹಿಳಾ ವಿಭಾಗದ ವತಿಯಿಂದ ಆಟಿಕೂಟ ಆಚರಣೆ ಹಾಗೂ ಮಳೆಕೊಯ್ಲು ಬಗ್ಗೆ ಕಾರ್ಯಾಗಾರ ಇತ್ತೀಚೆಗೆ ನಡೆಯಿತು.

ಮಳೆ ಕೊಯ್ಲಿನ ಬಗ್ಗೆ ರಾಜೇಂದ್ರ ಕಲಾºವಿ ಮಾತನಾಡಿದರು. ನೀರಿಂಗಿಸುವಿಕೆ ಮತ್ತು ನೀರುಳಿತಾಯದ ಆವಶ್ಯಕತೆ, ನೀರಿಂಗಿಸುವಿಕೆಯಿಂದ ಭವಿಷ್ಯಕ್ಕಾಗುವ ಪ್ರಯೋಜನಗಳು, ಮಳೆಕೊಯ್ಲು ಅಳವಡಿಕೆಯ ಅಗತ್ಯ, ಮಳೆಕೊಯ್ಲು ಅಳವಡಿಸುವ ಸರಳ ವಿಧಾನಗಳ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿದರು. ಅಲ್ಲದೆ, ನೆರೆದಿದ್ದ ಜನರಿಗೆ ಮಳೆಕೊಯ್ಲು ಬಗ್ಗೆ ಇದ್ದ ಕೆಲವೊಂದು ಪ್ರಶ್ನೆಗಳಿಗೆ ಉತ್ತರಿಸಿದರು.

ಲಯನ್ಸ್‌ ನ್ಪೋಟ್ಸ್‌ ಡಿಸಿ ನೀತಾ ಪಕ್ಕಳ, ಆಟಿಯ ಆಚಾರ ವಿಚಾರದ ಬಗ್ಗೆ ಮಾತನಾಡಿದರು. ವಂಡರ್‌ ಬುಕ್‌ಆಫ್‌ ವಲ್ಡ್‌ ರೆಕಾರ್ಡ್‌ ಸಂಸ್ಥೆಯಿಂದ ತುಳುವಿನ ಮೊದಲ ವಿಶ್ವ ದಾಖಲೆಗೆ ಅರ್ಹರಾಗಿರುವ ತಕ್ಷಿಲ್‌ ಎಂ. ದೇವಾಡಿಗ ಅವರನ್ನು ಈ ವೇಳೆ ಸಮ್ಮಾನಿಸಲಾಯಿತು. ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷ ಅಣ್ಣಪ್ಪ ಪೈ, ಉಪಾಧ್ಯಕ್ಷೆ ಕುಸುಮಾ ದೇವಾಡಿಗ, ಶ್ರೀನಿವಾಸ್‌ ಆಚಾರ್‌, ಅರುಣ್‌ ಡಿ’ಸೋಜಾ, ಜಯರಾಜ್‌ ಪೈ, ಮಹಿಳಾ ವಿಭಾಗದ ಚೇರ್‌ ಪರ್ಸನ್‌ ಹರಿಣಾ ಜೆ. ರಾವ್‌ ಉಪಸ್ಥಿತರಿದ್ದರು. ಶಾರದಾ ವಸಂತ್‌ ವಂದಿಸಿದರು. ವಿನಯಾ ಪ್ರಭು ನಿರೂಪಿಸಿದರು.

ಮಣ್ಣಗುಡ್ಡ ನಿವಾಸಿ ದಿನಕರ ಶೆಟ್ಟಿ ಅವರ ಮನೆಯಲ್ಲಿ ಮಳೆಕೊಯ್ಲು ಅಳವಡಿಸಲಾಗಿದೆ. ಕೆಲ ದಿನಗಳ ಹಿಂದಷ್ಟೇ ಮನೆಯ ಬಾವಿಗೆ ಮಳೆಕೊಯ್ಲು ವ್ಯವಸ್ಥೆ ಮೂಲಕ ಮಳೆನೀರು ಕೊಂಡೊಯ್ಯುವ ವ್ಯವಸ್ಥೆ ಮಾಡಲಾಗಿದೆ. ಛಾವಣಿ ನೀರನ್ನು ಪೈಪ್‌ ಮುಖಾಂತರ ಇಳಿಬಿಟ್ಟು ಬಾವಿಗೆ ಹಾಯಿಸಲಾಗಿದೆ. ನಡುವೆ ನೀರು ಶುದ್ಧೀಕರಣಗೊಳ್ಳಲು ವ್ಯವಸ್ಥೆ ಮಾಡಲಾಗಿದೆ. “ಉದಯವಾಣಿ’ಯಲ್ಲಿ ಪ್ರಕಟವಾಗುವ ಮಳೆಕೊಯ್ಲು ಅಭಿಯಾನವನ್ನು ನೋಡಿ ಪ್ರೇರೇಪಣೆಗೊಂಡು ಅವರು ಮಳೆಕೊಯ್ಲು ಅಳವಡಿಸಿಕೊಂಡಿದ್ದಾರೆ.

ನೀರಿನ ಸಮಸ್ಯೆಯ ಆತಂಕವಿಲ್ಲ
ಹಳೆಯಂಗಡಿ ತೋಕೂರು ನಿವಾಸಿ ನಾರಾಯಣ್‌ ಜಿ. ಕೆ. ಅವರು ಕಳೆದ ಒಂದು ತಿಂಗಳ ಹಿಂದೆ ತಮ್ಮ ಮನೆಯ ಬಾವಿಗೆ ಮಳೆಕೊಯ್ಲು ಅಳವಡಿಸಿದ್ದಾರೆ. ದೊಡ್ಡ ಸ್ಲಾಬ್‌ನಿಂದ ಸಿಟೌಟ್‌ ಸ್ಲಾಬ್‌ಗ ನೀರು ಹಾಯಿಸಿ ಅಲ್ಲಿಂದ ಟ್ಯಾಂಕ್‌ಗೆ ನೀರು ಬಿಟ್ಟು, ಶುದ್ಧೀಕೃತ ನೀರನ್ನು ಬಾವಿಗೆ ಬೀಳುವಂತೆ ನೋಡಿಕೊಂಡಿದ್ದಾರೆ. “ಉದಯವಾಣಿ ಮಳೆಕೊಯ್ಲು ಅಭಿಯಾನ ಮಳೆಕೊಯ್ಲು ಅಳವಡಿಕೆಗೆ ಸಹಕಾರಿಯಾಯಿತು. ಮುಂದಿನ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಬಗ್ಗೆ ಆತಂಕ ಎದುರಾಗುವುದಿಲ್ಲ ಎನ್ನುವ ವಿಶ್ವಾಸವಿದೆ’ ಎನ್ನುತ್ತಾರೆ.

ನೀವೂ ಅಳವಡಿಸಿ, ವಾಟ್ಸಪ್‌ ಮಾಡಿ
ಉದಯವಾಣಿಯ ಅಭಿಯಾನದಿಂದ ಪ್ರೇರಣೆಗೊಂಡು ಕಾರ್ಯಾಗಾರದಲ್ಲಿ ಭಾಗವಹಿಸಿದವರು ಈಗ ಕಾರ್ಯೋನ್ಮುಖರಾಗಿ ಮಳೆ ನೀರು ಕೊಯ್ಲು ಪದ್ಧತಿಯನ್ನು ತಮ್ಮ ಮನೆ, ಸಂಘ- ಸಂಸ್ಥೆ, ಧಾರ್ಮಿಕ ಕೇಂದ್ರಗಳಲ್ಲಿ ಅಳವಡಿಸುತ್ತಿದ್ದಾರೆ. “ಮನೆ ಮನೆಗೆ ಮಳೆಕೊಯ್ಲು’ ಅಭಿಯಾನದಿಂದ ಪ್ರೇರಿತರಾಗಿ ನೀವೂ ನಿಮ್ಮ ಮನೆ, ಮಳೆ ಕೊಯ್ಲು ಪದ್ಧತಿ ಅಳವಡಿಸಿಕೊಂಡಿದ್ದರೆ ಫೋಟೋ ಸಮೇತ ನಮಗೆ ವಿವರವನ್ನು ವಾಟ್ಸಪ್‌ ಮಾಡಿ. ಅವುಗಳನ್ನು ಪತ್ರಿಕೆಯಲ್ಲಿ ಪ್ರಕಟಿಸಿ ಮತ್ತಷ್ಟು ಜನರನ್ನು ಉತ್ತೇಜಿಸೋಣ. 9900567000

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.