ವಿಶ್ವದರ್ಜೆ ರೈಲು ನಿಲ್ದಾಣ ಯೋಜನೆ ಮತ್ತೆ ಮಂಗಳೂರು ಸೆಂಟ್ರಲ್‌ನತ್ತ


Team Udayavani, Sep 24, 2021, 3:40 AM IST

ವಿಶ್ವದರ್ಜೆ ರೈಲು ನಿಲ್ದಾಣ ಯೋಜನೆ ಮತ್ತೆ ಮಂಗಳೂರು ಸೆಂಟ್ರಲ್‌ನತ್ತ

ಮಹಾನಗರ: ಮಂಗಳೂರು ನಗರದ ಪಾಲಿಗೆ ಮಹತ್ವದ್ದು ಎಂದು ಪರಿಗಣಿಸಲ್ಪಟ್ಟಿದ್ದ ವಿಶ್ವದರ್ಜೆ ರೈಲು ನಿಲ್ದಾಣ ಯೋಜನೆಯನ್ನು ಮಂಗಳೂರು ಸೆಂಟ್ರಲ್‌ ನಿಲ್ದಾಣದಲ್ಲೇ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದ್ದು, ಇದರೊಂದಿಗೆ ಯೋಜನೆಯ ಮಂಗಳೂರು ಜಂಕ್ಷನ್‌ – ಮಂಗಳೂರು ಸೆಂಟ್ರಲ್‌ ನಡುವಣ ಹನ್ನೆರಡು ವರ್ಷಗಳ ಅಲೆದಾಟ ಕೊನೆಯಾಗುವ ಲಕ್ಷಣಗಳು ಗೋಚರಿಸಿವೆ.

ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣವನ್ನು ವಿಶ್ವದರ್ಜೆಯ ಸೌಲಭ್ಯ ಗಳನ್ನು ಅಳವಡಿಸಿಕೊಂಡು ಮರು ಅಭಿವೃದ್ಧಿ ಗೊಳಿಸುವ ಯೋಜನೆ ರೂಪುಗೊಳ್ಳುತ್ತಿದೆ. ಮಂಗಳೂರು ಜಂಕ್ಷನ್‌ ಬದಲು ಮಂಗ ಳೂರು ಸೆಂಟ್ರಲ್‌ ನಿಲ್ದಾಣವನ್ನೇ ವಿಶ್ವ ದರ್ಜೆ ನಿಲ್ದಾಣವಾಗಿ ಅಭಿವೃದ್ಧಿಪಡಿಸುವ ನಿಟ್ಟಿ ನಲ್ಲಿ ಪೂರಕ ಕ್ರಮಗಳನ್ನು ಕೈಗೊಳ್ಳುವಂತೆ ರೈಲ್ವೇ ಸಚಿವಾಲಯ ರೈಲು ಭೂಅಭಿವೃದ್ಧಿ ಪ್ರಾಧಿಕಾರಕ್ಕೆ (ಆರ್‌ಎಲ್‌ಡಿಎ) ಸೂಚಿಸಿದೆ.

ಯೋಜನೆಗೆ 12 ವರ್ಷಗಳು:

ಮಂಗಳೂರಿನ ರೈಲು ನಿಲ್ದಾಣವನ್ನು ವಿಶ್ವದರ್ಜೆಗೇರಿಸುವ ಪ್ರಸ್ತಾವ ಘೋಷಣೆ ಯಾಗಿ 12 ವರ್ಷಗಳು ಸಂದಿವೆ. ಮಮತಾ ಬ್ಯಾನರ್ಜಿ ಅವರು ಕೇಂದ್ರ ರೈಲ್ವೇ ಸಚಿವೆ ಯಾಗಿದ್ದ ಸಂದರ್ಭ 2009ರ ಜು. 3ರಂದು ರೈಲ್ವೇ ಬಜೆಟ್‌ ಮಂಡನೆ ಮಾಡುತ್ತಾ ದೇಶದ ಮಂಗಳೂರು ಸಹಿತ 50 ರೈಲು ನಿಲ್ದಾಣಗಳನ್ನು ವಿಶ್ವದರ್ಜೆಗೇರಿಸುವುದಾಗಿ ಘೋಷಣೆ ಮಾಡಿದ್ದರು. ಆದರೆ ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣವನ್ನು ವಿಶ್ವದರ್ಜೆಗೇರಿಸುವ ಪ್ರಸ್ತಾವಕ್ಕೆ ಜಾಗದ ಸಮಸ್ಯೆಯನ್ನು ಮುಂದೊಡ್ಡಿ ವಿಳಂಬ ಮಾಡುತ್ತಾ ಬರಲಾಗಿದೆ.

ಮಂಗಳೂರು ಸೆಂಟ್ರಲ್‌ ನಿಲ್ದಾಣ ನಗರದ ಕೇಂದ್ರಭಾಗದಲ್ಲಿದ್ದು, ಆವಶ್ಯಕ ಜಾಗ ದೊರೆ ಯುವುದು ಕಷ್ಟ ಎಂಬ ಹಿನ್ನೆಲೆಯಲ್ಲಿ ಸಾಕಷ್ಟು ಚರ್ಚೆಗಳು ನಡೆದಿದ್ದವು. ಇದ್ದ ಪ್ರದೇಶವನ್ನು ಮರುಹೊಂದಾಣಿಕೆ ಮಾಡಿಕೊಂಡು ಈ ಆವಶ್ಯಕತೆಯನ್ನು ಪೂರೈಸಲು ಸಾಧ್ಯವಿದೆ. ರೈಲು ನಿಲ್ದಾಣ ಬಳಿ ರೈಲ್ವೇ ಇಲಾಖೆಗೆ ಸೇರಿದ ಜಾಗದಲ್ಲಿ ಹಲವಾರು ಕಟ್ಟಡಗಳು, ವಸತಿ ನಿಲಯಗಳಿವೆ. ವ್ಯವಸ್ಥಿತವಾಗಿ ಒಂದೆಡೆ ಬಹುಮಹಡಿ ಕಟ್ಟಡಗಳನ್ನು ನಿರ್ಮಿಸಿ ಇವು ಗಳನ್ನು ಅಲ್ಲಿಗೆ ಸ್ಥಳಾಂತರಿಸಿದರೆ ಬಹಳಷ್ಟು ಜಾಗ ದೊರೆಯಬಹುದು ಎಂಬುದಾಗಿ ರೈಲ್ವೇ ಇಲಾಖೆಗೆ ಮನದಟ್ಟು ಮಾಡುವ ಕಾರ್ಯವೂ ನಡೆದಿತ್ತು. ಇದೆಲ್ಲರ ನಡುವೆ ಕೇಂದ್ರದಲ್ಲಿ ಜಿಲ್ಲೆಯವರೇ ಆದ ಡಿ.ವಿ. ಸದಾನಂದ ಗೌಡ ಅವರು ರೈಲ್ವೇ ಸಚಿವರಾದ ಬಳಿಕ ಯೋಜನೆ ಮತ್ತೂಮ್ಮೆ ಸುದ್ದಿ ಮಾಡಿತ್ತು. ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣವನ್ನು ಅಂತಾರಾಷ್ಟ್ರೀಯ ರೈಲು ನಿಲ್ದಾಣವಾಗಿ ಅಭಿವೃದ್ಧಿ ಪಡಿಸಲು ಚಿಂತನೆ ನಡೆಯಸಲಾಯಿತು. ಇದಕ್ಕೆ ಸುಮಾರು 100 ಎಕ್ರೆ ಜಾಗದ ಆವಶ್ಯಕತೆ ಇದ್ದು ರೈಲ್ವೇ ಇಲಾಖೆಗೆ ಸೇರಿದ 60 ಎಕ್ರೆ ಜಾಗವಿದೆ. ಉಳಿದಂತೆ 40 ಎಕ್ರೆ ಹೊಂದಿಕೆಯಾಗಬೇಕಾಗಿದೆ. ಇದನ್ನು ಒದಗಿಸಿಕೊಡುವಂತೆ ರಾಜ್ಯ ಸರಕಾರಕ್ಕೆ ಕೋರಿಕೆ ಸಲ್ಲಿಸಲಾಗಿತ್ತು. ಇದು ಕೂಡ ನನೆಗುದಿಗೆ ಬಿದ್ದಿದೆ.

ವಿಶ್ವದರ್ಜೆ ರೈಲು ನಿಲ್ದಾಣ :

ವಿಶ್ವದರ್ಜೆ ಮಟ್ಟದ ರೈಲು ನಿಲ್ದಾಣ ಬಹುಮಾದರಿ ಸಂಚಾರ ಕೇಂದ್ರ (ಮಲ್ಟಿ ಮೊಡೆಲ್‌ ಟ್ರಾನ್ಸಿಟಿ ಹಬ್‌) ರೀತಿಯಲ್ಲಿ ವಿನ್ಯಾಸವನ್ನು ಹೊಂದಿರುತ್ತದೆ. ವಿಮಾನ ನಿಲ್ದಾಣ ಮಾದರಿಯಲ್ಲಿ ಪ್ರತ್ಯೇಕ ಆಗಮನ, ನಿರ್ಗಮನ ಲಾಂಜ್‌ಗಳು, ಶಾಪಿಂಗ್‌ ಮಾಲ್‌, ಮಲ್ಟಿ ಫ್ಲೆಸ್‌, ಸುಸಜ್ಜಿತ ರೆಸ್ಟೋರೆಂಟ್‌, ಕಚೇರಿಗಳನ್ನು ಹೊಂದಿರುತ್ತದೆ. ಪ್ರಯಾಣಿಕರಿಗೆ ವಿಶಾಲ ವೈಟಿಂಗ್‌ ಲಾಂಜ್‌, ಸಾಕಷ್ಟು ಆಸನಗಳು, ನಿಲ್ದಾಣಕ್ಕೆ ವಿಶಾಲ ಸಂಪರ್ಕ ರಸ್ತೆಗಳು, ವಿಶಾಲ ಪಾರ್ಕಿಂಗ್‌ ವ್ಯವಸ್ಥೆ ಮುಂತಾದ ಅಂಶಗಳನ್ನು ಹೊಂದಿರುತ್ತದೆ. ವಿಶ್ವದರ್ಜೆ ರೈಲು ನಿಲ್ದಾಣ ನಿರ್ಮಾಣವನ್ನು ಖಾಸಗಿ ಹಾಗೂ ಸರಕಾರಿ ಸಹಭಾಗಿತ್ವದಲ್ಲಿ (ಪಿಪಿಮಾದರಿ)ಕೈಗೊಳ್ಳುವುದು ಪ್ರಸ್ತಾವನೆ ಯಲ್ಲಿದೆ. ಇದರಲ್ಲಿ ಗಣನೀಯ ಮೊತ್ತದ ಹೊಡಿಕೆ ಅವಶ್ಯವಿರುವುದರಿಂದ ಆಸಕ್ತ ಪಾಲುದಾರರನ್ನು ಸೇರಿಸಿಕೊಂಡು ಯೋಜನೆಯನ್ನು ಕೈಗೆತ್ತಿಕೊಳ್ಳುವ ಚಿಂತನೆ ರೈಲ್ವೇ ಇಲಾಖೆಯದ್ದಾಗಿದೆ.

ಮಂಗಳೂರಿನಲ್ಲಿ ವಿಶ್ವದರ್ಜೆ ಮಟ್ಟದ ರೈಲು ನಿಲ್ದಾಣ ಯೋಜನೆ ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ಪೂರಕ ಕ್ರಮಗಳು ನಡೆಯುತ್ತಿವೆ. ಮಂಗಳೂರು ಸೆಂಟ್ರಲ್‌ ನಿಲ್ದಾಣವನ್ನು ಈ ನಿಟ್ಟಿನಲ್ಲಿ ಮರು ಅಭಿವೃದ್ಧಿ ಪಡಿಸುವ ಯೋಜನೆ ಸಿದ್ಧಪಡಿಸಲಾಗಿದೆ. ನಳಿನ್‌ ಕುಮಾರ್‌ ಕಟೀಲು, ಸಂಸದರು, ದ.ಕ. ಲೋಕಸಭಾ ಕ್ಷೇತ್ರ

ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣವನ್ನು ವಿಶ್ವದರ್ಜೆ ಸೌಲಭ್ಯ ಗಳೊಂದಿಗೆ ಅಭಿವೃದ್ಧಿಪಡಿಸುವ ಕೆಲವು ವರ್ಷಗಳ ಹಿಂದಿನ ಯೋಜನೆಯನ್ನು ಅನುಷ್ಠಾನ ಗೊಳಿಸುವ ನಿಟ್ಟಿನಲ್ಲಿ ರೈಲು ಭೂಅಭಿವೃದ್ಧಿ ಪ್ರಾಧಿಕಾರ ಕಾರ್ಯಯೋಜನೆ ರೂಪಿಸಲಿದೆ. ಮಂಗಳೂರು ಜಂಕ್ಷನ್‌ನಿಂದ ಮಂಗಳೂರು ಸೆಂಟ್ರಲ್‌ಗೆ ಯೋಜನೆ ವರ್ಗಾ ವಣೆ ಯಾಗುತ್ತಿದ್ದು, ಹಿಂದಿನ ಮೂಲ ಯೋಜನೆ ಸಾಕಾಗಬ ಹುದೇ ಅಥವಾ ಇದರಲ್ಲಿ ಈಗಿನ ಆವಶ್ಯಕತೆಗಳಿಗನುಗುಣವಾಗಿ ಬದಲಾವಣೆಗಳು ಅವಶ್ಯವಿದೆಯೇ ಎಂಬುದನ್ನು ಪರಿಶೀಲಿಸಿ ಯೋಜನೆ ಕಾರ್ಯಗತಗೊಳ್ಳಲಿದೆ.ತ್ರಿಲೋಕ್‌ ಕೊಠಾರಿ,ಡಿಆರ್‌ಎಂ ಪಾಲ್ಗಾಟ್‌ ವಿಭಾಗ

 

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.