ಮಂ. ವಿಮಾನ ನಿಲ್ದಾಣದಲ್ಲಿ 2 ಕೋ.ರೂ. ಮೌಲ್ಯದ 5 ಕೆ.ಜಿ. ಚಿನ್ನ ವಶ

ದಶಕದ ಅವಧಿಯ ಅತಿದೊಡ್ಡ ಅಕ್ರಮ ಬಂಗಾರ ಸಾಗಾಟ ಪ್ರಕರಣ

Team Udayavani, Jan 15, 2020, 2:20 AM IST

mk-44

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದ ಏರ್‌ ಕಾರ್ಗೊ ಕಾಂಪ್ಲೆಕ್ಸ್‌ನಲ್ಲಿ ಯಂತ್ರೋಪಕರಣ ಹೆಸರಿನಲ್ಲಿ ಅಕ್ರಮವಾಗಿ ಕಳ್ಳ ಸಾಗಣಿಕೆ ಮಾಡುತ್ತಿದ್ದ 2 ಕೋಟಿ ರೂ. ಮೊತ್ತದ 5 ಕೆಜಿ ಬಂಗಾರವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಅಧಿಕಾರಿಗಳು ಸೋಮವಾರ ವಶಪಡಿಸಿಕೊಂಡಿದ್ದಾರೆ.

ಈ ಪ್ರಕರಣದಲ್ಲಿ ಚಿನ್ನವನ್ನು ಅಕ್ರಮವಾಗಿ ಆಮದು ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಉಡುಪಿಯ ಮೆಸರ್ಸ್‌ ಸ್ವರೂಪ್‌ ಮಿನರಲ್‌ ಪ್ರೈ.ಲಿ. ಎಂಬ ಕಂಪೆನಿಯ ಮನೋಹರ್‌ ಕುಮಾರ್‌ ಪೂಜಾರಿ ಮತ್ತು ಮಂಗಳೂರಿನ ಅಶೋಕನಗರ ನಿವಾಸಿ ಲೋಹಿತ್‌ ಶ್ರೀಯಾನ್‌ ಬಂಧಿತ ಆರೋಪಿಗಳು.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಒಂದು ದಶಕದ ಅವಧಿಯಲ್ಲಿ ವಶಪಡಿಸಿಕೊಳ್ಳಲಾದ ಅತೀಹೆಚ್ಚು ಮೌಲ್ಯದ ಅಕ್ರಮ ಚಿನ್ನ ಕಳ್ಳಸಾಗಣೆ ಪ್ರಕರಣ ಇದಾಗಿದೆ. ಸರಕು ಸಾಗಾಟ ಹೆಸರಿನಲ್ಲಿ ಈ ಚಿನ್ನವನ್ನು ವಿನೂತನ ಮಾದರಿಯಲ್ಲಿ ಯಂತ್ರದ ಸರಪಣಿಯಲ್ಲಿ ಅಡಗಿಸಿಟ್ಟು ಸಾಗಿಸ ಲಾಗುತ್ತಿತ್ತು.

ಮೆಸರ್ಸ್‌ ಸ್ವರೂಪ್‌ ಮಿನರಲ್‌ ಪ್ರೈ.ಲಿ. ಎಂಬ ಸಂಸ್ಥೆಯ ಮೈನಿಂಗ್‌ ಕನ್ವೇಯರ್‌ ಡ್ರೈವ್‌ ಚೈನ್‌ ಆಮದು ಮಾಡಿಕೊಳ್ಳುತ್ತಿತ್ತು. ಅದರೊಳಗೆ ಚಿನ್ನ ಅಡಗಿಸಿಟ್ಟು ಸಾಗಾಟ ಮಾಡುತ್ತಿರುವ ಬಗ್ಗೆ ಅಧಿಕಾರಿಗಳಿಗೆ ಸುಳಿವು ದೊರಕಿದ್ದು ಈ ಬಗ್ಗೆ ನಿಗಾ ಇಡಲಾಗಿತ್ತು.

ಈ ಬಗ್ಗೆ ಬೆಂಗಳೂರು ಮತ್ತು ಮಂಗಳೂರು ಡಿಆರ್‌ಐ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಮನೋಹರ್‌ ಕುಮಾರ್‌ನನ್ನು ಬೆಂಗಳೂರಿನಲ್ಲಿ ಮತ್ತು ಲೋಹಿತ್‌ನನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ ಎಂದು ಡಿಆರ್‌ಐ ಉಪ ನಿರ್ದೇಶಕ ಶ್ರೇಯಸ್‌ ಕೆ.ಎಂ. ತಿಳಿಸಿದ್ದಾರೆ. ಪ್ರಕರಣದ ಬಗ್ಗೆ ಇನ್ನಷ್ಟು ತನಿಖೆ ನಡೆಯುತ್ತಿದೆ.

ಸರಕು ಹೆಸರಿನಲ್ಲಿ ಸಾಗಾಟ
ಗಣಿ ಉದ್ಯಮದಲ್ಲಿ ಬಳಸುವ ಲೋಹದ ಕನ್ವೇಯರ್‌ ಡ್ರೈವ್‌ ಚೈನ್‌ನ ಒಳಭಾಗದಲ್ಲಿರಿಸಿ ಚಿನ್ನ ಕಳ್ಳಸಾಗಣೆ ಮಾಡಲಾಗಿತ್ತು. ಮೈನಿಂಗ್‌ ಕನ್ವೇಯರ್‌ ಡ್ರೈವ್‌ ಚೈನ್‌ಎಂಬ ಹೆಸರಿನ ಸರಕಿನಲ್ಲಿ ಈ ರೀತಿ ಚಿನ್ನವನ್ನು ಸರಪಣಿಯ ಉಬ್ಬಿನೊಳಗೆ ತುಂಬಿಸಿಡಲಾಗಿತ್ತು. ಆಮದು ಆಗಿರುವ ವಸ್ತುಗಳನ್ನು ಸ್ಕ್ಯಾನಿಂಗ್‌ ಮಾಡುವ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸಂಶಯ ಬಂದು ತೀವ್ರವಾಗಿ ಪರಿಶೀಲನೆ ನಡೆಸಿದಾಗ ರಹಸ್ಯ ಬಯಲಾಯಿತು. ಬಜಪೆಯ ಸ್ಥಳೀಯ ಯಂತ್ರಗಳು ಹಾಗೂ ಲೇಥ್‌ ಮೆಷಿನ್‌ಗಳನ್ನು ಬಳಸಿ ಮೈನಿಂಗ್‌ ಕನ್ವೇಯರ್‌ ಬೆಲ್ಟ್ನ ಒಳಭಾಗದಲ್ಲಿ ಐದು ವೃತ್ತಾಕಾರದ ಚಿನ್ನದ ತಟ್ಟೆಗಳನ್ನು ಅಡಗಿಸಿಡಲಾಗಿದ್ದª 24 ಕ್ಯಾರೆಟ್‌ ಗುಣಮಟ್ಟದ ಒಟ್ಟು 4.995 ಕೆ.ಜಿ. ಚಿನ್ನವನ್ನು ಹೊರ ತೆಗೆಯಲಾಯಿತು. ಅಧಿಕೃತ ಚಿನ್ನಾಭರಣ ವ್ಯಾಪಾರಿಗಳಿಂದ ಇದನ್ನು ಪರಿಶೀಲಿಸಿ ಚಿನ್ನವೆಂದು ಖಾತ್ರಿ ಪಡಿಸಲಾಯಿತು.

ಟಾಪ್ ನ್ಯೂಸ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.