ಯಡಮೊಗೆ ಮಗು ಸಾವು : ತಾಯಿ ವಿರುದ್ಧ ಕೊಲೆ ಕೇಸು


Team Udayavani, Jul 14, 2019, 10:02 AM IST

sanvika

ಸಿದ್ದಾಪುರ: ಯಡಮೊಗೆ ಗ್ರಾಮದ ಕುಮಿಬೇರುವಿನಲ್ಲಿ 1 ವರ್ಷ 3 ತಿಂಗಳು ಪ್ರಾಯದ ಹೆಣ್ಣು ಮಗು ಸಾನ್ವಿಕಾ ನದಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿ ತಾಯಿ ರೇಖಾ ನಾಯ್ಕ ವಿರುದ್ಧ ಶಂಕರನಾರಾಯಣ ಠಾಣೆಯಲ್ಲಿ ಕೊಲೆ ಕೇಸು ದಾಖಲಾಗಿದೆ.

ವಿಚಾರಣೆ ಸಂದರ್ಭ ಮನೋ ವೈದ್ಯರ ಸಮ್ಮುಖದಲ್ಲಿ ಆಕೆ ನೀಡಿದ ಹೇಳಿಕೆಯಂತೆ ಕಲಂ 302, 307 ಮತ್ತು 307 ಐಪಿಸಿ ಅಡಿಯಲ್ಲಿ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

“ಜು. 11ರಂದು ಬೆಳಗ್ಗೆ 4 ಗಂಟೆ ಸುಮಾರಿಗೆ ಸಾಯಬೇಕು ಎನ್ನುವ ಉದ್ದೇಶದಿಂದಲೇ 5 ವರ್ಷದ ಮಗ ಸಾತ್ವಿಕ್‌ ಹಾಗೂ ಪುತ್ರಿ ಸಾನ್ವಿಕಾಳನ್ನು ಎತ್ತಿಕೊಂಡು ಮನೆಯ ಪಕ್ಕದ ಕುಬಾj ನದಿಗೆ ಇಳಿದಿದ್ದು, ಆ ಸಮಯ ಬಲಕೈಯಲ್ಲಿದ್ದ ಮಗು ಸಾನ್ವಿಕಾಳು ಕೈಯಿಂದ ಜಾರಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾಳೆ. ಆ ಮಗುವನ್ನು ಹಿಡಿಯಲು ಹೋದಾಗ ಇನ್ನೊಂದು ಕೈಯಲ್ಲಿದ್ದ ಗಂಡು ಮಗ ಸಾತ್ವಿಕ್‌ನೊಂದಿಗೆ ಹೊಳೆಯ ನೀರಿನಲ್ಲಿ ಸುಮಾರು ದೂರ ಕೊಚ್ಚಿ ಹೋಗಿದ್ದು, ಕಷ್ಟ ಪಟ್ಟು ಗಂಡು ಮಗುವಿನೊಂದಿಗೆ ನಾನು ದಡ ಸೇರಿದೆ. ಆದರೆ ಹೆಣ್ಣು ಮಗು ಸಾನ್ವಿಕಾ ಹೊಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಮೃತಪಟ್ಟಿರುತ್ತಾಳೆ. ಇದರಿಂದ ಭಯಗೊಂಡ ನಾನು ಮಗು ಅಪಹರಣದ ನಾಟಕ ಆಡಿದ್ದೆ’ ಎಂದು ರೇಖಾ ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ಆರೋಪಿ ರೇಖಾ ಮಾನಸಿಕ ಖನ್ನತೆ ಒಳಗಾಗಿರುವುದಾಗಿ ಶುಕ್ರವಾರವೇ ವೈದ್ಯರು ತಿಳಿಸಿದ್ದು, ವೈದ್ಯರ ಸೂಚನೆ ಮೇರೆಗೆ ಸೂಕ್ತ ಚಿಕಿತ್ಸೆಗಾಗಿ ಜು.13ರಂದು ಬೆಳಗ್ಗೆ ಉಡುಪಿ ಡಾ| ಎ.ವಿ. ಬಾಳಿಗ ಮೆಮೋರಿಯಲ್‌ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಿಸಲಾಗಿದೆ.

ಆಕೆ ಮಾನಸಿಕ ಖನ್ನತೆಯಿಂದ ಚೇತರಿಸಿ ಕೊಂಡ ಬಳಿಕ ಪ್ರಕರಣದ ಸಮಗ್ರ ತನಿಖೆಯನ್ನು ಮುಂದುವರಿಸಲಾಗುವುದು. ಪ್ರಕರಣದ ನಿಷ್ಪಕ್ಷಪಾತ ಮತ್ತು ಪ್ರಾಮಾಣಿಕ ತನಿಖೆಯನ್ನು ನಡೆಸುವ ಆವಶ್ಯಕತೆ ಇದೆ.ಈ ಕುರಿತಂತೆ ತನಿಖಾಧಿಕಾರಿಯಾಗಿ ಈಗಾಗಲೇ ಕುಂದಾಪುರ ಡಿವೈಎಸ್ಪಿ ಬಿ. ಪಿ. ದಿನೇಶ ಕುಮಾರ್‌ ಅವರನ್ನು ನೇಮಿಸಲಾಗಿದ್ದು, ಅವರ ನೇತೃತ್ವದ ತಂಡದಿಂದ ತನಿಖೆ ನಡೆಯಲಿದೆ ಎಂದು ಎಸ್ಪಿ ನಿಶಾ ಜೇಮ್ಸ್‌ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಮಗುವಿನ ಅಂತ್ಯ ಸಂಸ್ಕಾರ
ಸಂತೋಷ್‌ ನಾಯ್ಕ ಹಾಗೂ ರೇಖಾ ನಾಯ್ಕ ದಂಪತಿಯ ಪುತ್ರಿ ಸಾನ್ವಿಕಾಳ ಮೃತದೇಹವನ್ನು ಪೊಲೀಸರು ಮೊದಲು ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೊಂಡೊಯ್ದಿದ್ದರು. ಅಲ್ಲಿನ ವೈದ್ಯರ ಸೂಚನೆ ಮೇರೆಗೆ ಮಣಿಪಾಲ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಶುಕ್ರವಾರ ರಾತ್ರಿಯೇ ಯಡಮೊಗೆಯಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.