ರಾಷ್ಟ್ರೀಯ ಕಲೋತ್ಸವ ಸ್ಪರ್ಧೆಯಲ್ಲಿ ಯಕ್ಷಗಾನಕ್ಕೆ ಪ್ರಥಮ ಸ್ಥಾನ
Team Udayavani, Jan 10, 2018, 4:01 PM IST
ಬಂಟ್ವಾಳ: ಶಂಭೂರು ಗ್ರಾಮದ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು 2017-18ನೇ ಸಾಲಿನ ರಾಷ್ಟ್ರೀಯ ಕಲೋತ್ಸವ ಸ್ಪರ್ಧೆಯ ರಂಗಭೂಮಿ ವಿಭಾಗದಲ್ಲಿ ಪ್ರದರ್ಶಿಸಿದ ಕಿಷ್ಕಿಂದಾ ಕೌತುಕ ಯಕ್ಷಗಾನವು ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಕೊಂಡಿದ್ದು, ಈ ವಿದ್ಯಾರ್ಥಿಗಳನ್ನು ಮಂಗಳವಾರ ಶಾಲೆಗೆ ಆಗಮಿಸಿದಾಗ ಅದ್ದೂರಿಯಿಂದ ಸ್ವಾಗತಿಸಲಾಯಿತು.
ಈ ಸಂದರ್ಭ ಶಾಲಾ ಮೇಲುಸ್ತುವಾರಿ ಕಾರ್ಯಾಧ್ಯಕ್ಷ ಹಾಗೂ ಬೊಂಡಾಲ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಸಚ್ಚಿದಾನಂದ ಶೆಟ್ಟಿ, ಶಾಲಾ ಮುಖ್ಯ ಶಿಕ್ಷಕ ಕಮಲಾಕ್ಷ ಕಲ್ಲಡ್ಕ, ದೈಹಿಕ ಶಿಕ್ಷಣ ಶಿಕ್ಷಕ ಚೆನ್ನಪ್ಪ ಕೆ. ಜಾಲ್ಸೂರು, ಜಿಲ್ಲಾ ಪಂಚಾಯತ್ ಸದಸ್ಯೆ ಕಮಲಾಕ್ಷಿ ಕೆ. ಪೂಜಾರಿ, ತಾಲೂಕು ಪಂಚಾಯತ್ ಸದಸ್ಯೆ ಗಾಯತ್ರಿ ಆರ್. ಸಪಲ್ಯ, ನರಿಕೊಂಬು ಗಾಮ ಪಂಚಾಯತ್ ಅಧ್ಯಕ್ಷ ಯಶೋಧರ ಕರ್ಬೆಟ್ಟು, ಗಾಮ ಪಂಚಾಯತ್ ಸದಸ್ಯರು, ವಿದ್ಯಾಂಗ ಇಲಾಖೆಯ ಉಪನಿರ್ದೇಶಕ ವೈ. ಶಿವರಾಮಯ್ಯ, ಬಿಆರ್ಪಿ ನಾರಾಯಣ ಗೌಡ, ಸ್ಥಳೀಯ
ಗಣ್ಯರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಶಿಕ್ಷಕ ವೃಂದ, ಹೆತ್ತವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ
Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್
Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ