‘ಯಕ್ಷಗಾನ ಬೆಳವಣಿಗೆಗೆ ಕಲಾಭಿಮಾನಿಗಳ ಸಹಕಾರ ಅಗತ್ಯ’


Team Udayavani, Apr 18, 2018, 2:52 PM IST

18-April-15.jpg

ಸುರತ್ಕಲ್‌ : ಯಕ್ಷಗಾನ ಕಲೆ ಬೆಳೆಯಲು ಕಲಾಭಿಮಾನಗಳ ಸಹಕಾರ ಅಗತ್ಯ. ಈ ನಿಟ್ಟಿನಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್‌ನಿಂದ ಯಕ್ಷಗಾನ ಕಲೆ ಬೆಳವಣಿಗೆಗೆ ಶ್ರಮಿಸುತ್ತಿರುವ ಕಾರ್ಯ ಶ್ಲಾಘನೀಯವಾದುದು ಎಂದು ಉದ್ಯಮಿ ಅಗರಿ ರಾಘವೇಂದ್ರ ರಾವ್‌ ಹೇಳಿದರು.

ಬಂಟರ ಭವನದಲ್ಲಿ ಇತ್ತೀಚೆಗೆ ಯಕ್ಷಧ್ರುವ ಫೌಂಡೇಶನ್‌ ಟ್ರಸ್ಟ್‌ನ 29ನೇ ಸುರತ್ಕಲ್‌ ಘಟಕದ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಜೋತಿಷಿ ಕೆ.ಸಿ. ನಾಗೇಂದ್ರ ಭಾರಧ್ವಾಜ್‌ ಸುರತ್ಕಲ್‌ ಉದ್ಘಾಟಿಸಿ, ಯಕ್ಷಗಾನ ಕಲಾವಿದರ ಕಷ್ಟ ಪರಿಹಾರಕ್ಕೆ ಟ್ರಸ್ಟ್‌ ಕಾರ್ಯಕ್ರಮ ಆಯೋಜಿಸುತ್ತಿರುವುದು ಮಹತ್ವದ ಕ್ರಮ ಎಂದರು.

ವಿದೇಶದಲ್ಲಿ ಟ್ರಸ್ಟ್‌ ಆರಂಭ
ಟ್ರಸ್ಟ್‌ನ ಕೇಂದ್ರೀಯ ಸಮಿತಿ ಪ್ರ. ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್‌ ಮಾತನಾಡಿ, ಟ್ರಸ್ಟ್‌ ಕಾರ್ಯಗಳು ಜನಪ್ರಿಯಗೊಂಡಿವೆ. ವಿದೇಶದಲ್ಲಿ ಟ್ರಸ್ಟ್‌ ಆರಂಭಿಸಲು ನಿರ್ಧರಿಸಲಾಗಿದ್ದು, ಅಮೆರಿಕದಲ್ಲಿ ಸದ್ಯದಲ್ಲೇ ಟ್ರಸ್ಟ್‌ ಘಟಕವನ್ನು ಆರಂಭಿಸಲಾಗುವುದು ಎಂದರು.

ಘಟಕ ಗೌರವಾಧ್ಯಕ್ಷ ಮಹಾಬಲ ಪೂಜಾರಿ ಕಡಂಬೋಡಿ ಅಧ್ಯಕ್ಷತೆ ವಹಿಸಿದ್ದರು. ಮಧ್ಯ ಶ್ರೀ ಖಡ್ಗೇಶ್ವರ ದೇಗುಲದ
ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕರುಣಾಕರ ಎಂ. ಶೆಟ್ಟಿ ಮಧ್ಯಗುತ್ತು, ಉದ್ಯಮಿ ಯಾದವ ಕೋಟ್ಯಾನ್‌, ಬಂಟರ ಸಂಘದ ಅಧ್ಯಕ್ಷ ಉಲ್ಲಾಸ್‌ ಆರ್‌. ಶೆಟ್ಟಿ, ಪ್ರೇಮ್‌ ಶೆಟ್ಟಿ ಸುರತ್ಕಲ್‌, ಉಚ್ಚಿಲದ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಗಂಗಾಧರ್‌ ಹೊಸಬೆಟ್ಟು, ಉದ್ಯಮಿಗಳಾದ ಧನ ಪಾಲ್‌ ಶೆಟ್ಟಿಗಾರ್‌, ರಮಾನಾಥ ಶೆಟ್ಟಿ ಕೃಷ್ಣಾಪುರ, ಸತೀಶ್‌ ಮುಂಚೂರು, ಡೋನ ಸುವಾರಿಸ್‌, ಟಿ.ಎನ್‌. ರಮೇಶ್‌, ಟ್ರಸ್ಟ್‌ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್‌ ಶೆಟ್ಟಿ, ಕೇಂದ್ರೀಯ ಸಮಿತಿ ಕೋಶಾಧಿಕಾರಿ ಸಿ.ಎ. ಸುದೇಶ್‌ ಕುಮಾರ್‌ ರೈ, ಮಹಿಳಾ ಘಟಕದ ಅಧ್ಯಕ್ಷೆ ಪೂರ್ಣಿಮಾ ಯತೀಶ್‌ ರೈ, ಲೀಲಾಧರ್‌ ಶೆಟ್ಟಿ ಕಟ್ಲ, ಸಂಚಾಲಕ ರವಿ ಶೆಟ್ಟಿ ಸುರತ್ಕಲ್‌, ಕೋಶಾಧಿಕಾರಿ ಸತೀಶ್‌ ಶೆಟ್ಟಿ ಬಾಳಿಕೆ, ಗಂಗಾಧರ ಪೂಜಾರಿ ಚೇಳಾಯಿರು ಮೊದಲಾದವರಿದ್ದರು.

ಶಾಸಕ ಮೊಯಿದಿನ್‌ ಬಾವಾ ಶುಭ ಹಾರೈಸಿದರು. ಘಟಕಾಧ್ಯಕ್ಷ ಸಂತೋಷ್‌ ಕುಮಾರ್‌ ಶೆಟ್ಟಿ ಸ್ವಾಗತಿಸಿದರು. ನವೀನ್‌ಕುಮಾರ್‌ ಶೆಟ್ಟಿ ಎಡ್ಮೆಮಾರ್‌ ನಿರೂಪಿಸಿದರು. ಲೋಕಯ್ಯಶೆಟ್ಟಿ ಪರಿಚಯಿಸಿದರು. ಭಾಗವತ ಶಿವ ಎಲ್‌. ಸುವರ್ಣ ಹೊಸಬೆಟ್ಟು, ಚಕ್ರತಾಳ ವಾದಕ ಸುರೇಶ್‌ ಕಾಮತ್‌ ಅವರಿಗೆ 25 ಸಾವಿರ ರೂ. ನಗದಿನೊಂದಿಗೆ ಪಟ್ಲ ಪ್ರಶಸ್ತಿ ನೀಡಿ ಗೌರವಿಸಲಾಯಿತು. 

ಗೌರವ
ಯಕ್ಷಗಾನದ ಸಾಧನೆಗಾಗಿ ಅಗರಿ ರಘುರಾಮ ಭಾಗವತರು, ಅರುಣ್‌ ಪೈ ಸುರತ್ಕಲ್‌, ಶಿವರಾಮ್‌ ಪಣಂಬೂರು, ಪ್ರಕಾಶ್‌ ಎಂ. ಶೆಟ್ಟಿ ಸುರತ್ಕಲ್‌, ಮಾಧವ ಶೆಟ್ಟಿ ಬಾಳ, ಜನಾರ್ದನ್‌ ಡಿ. ಶೆಟ್ಟಿಗಾರ್‌ ಸುರತ್ಕಲ್‌, ರವಿ ಕುಮಾರ್‌ ಸುರತ್ಕಲ್‌, ಅಪೂರ್ವಾ ಸುರತ್ಕಲ್‌ ಇವರಿಗೆ ಗೌರವಾರ್ಪಣೆ ನಡೆಯಿತು.

ಟಾಪ್ ನ್ಯೂಸ್

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.