ಯಕ್ಷಕೌಮುದಿ ಮಹಿಳಾ ಸಂಘ: ವಾರ್ಷಿಕೋತ್ಸವ ಸಮಾರಂಭ
Team Udayavani, Oct 5, 2017, 2:02 PM IST
ಕೆರೆಕಾಡು: ಮಹಿಳೆ ಆರ್ಥಿಕವಾಗಿ ಶೈಕ್ಷಣಿಕವಾಗಿ ಮುಂದುವರಿದರೂ ಶೋಷಣೆ ಇನ್ನೂ ಇದೆ. ಈ ನಿಟ್ಟಿನಲ್ಲಿ ಮಹಿಳಾ ಸಂಘಟನೆಯ ಅಗತ್ಯವಿದೆ ಎಂದು ನಿಟ್ಟೆ ಎನ್.ಎ.ಎಂ. ಎಂ. ತಾಂತ್ರಿಕ ವಿದ್ಯಾಲಯದ ಪ್ರಾಧ್ಯಾಪಕಿ ಜ್ಯೋತಿ ಶೆಟ್ಟಿ ಹೇಳಿದರು.
ಅವರು ಅ. 2 ರಂದು ಕೆರೆಕಾಡುವಿನಲ್ಲಿ ಯಕ್ಷ ಕೌಮುದಿ ಮಹಿಳಾ ಸಂಘದ ಆರನೇ ವರ್ಷದ ವಾರ್ಷಿಕೋತ್ಸವ
ಸಂದರ್ಭದಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ತಮ್ಮ ಸಂಘಟನೆಯ ಮಹಿಳೆಯರು ಹೆಣ್ಣು ಮಕ್ಕಳಿಗೆ ಯಕ್ಷಗಾನ ತರಬೇತಿ ನೀಡುತ್ತಿರುವುದು ಶ್ಲಾಘನೀಯ ಎಂದರು.
ವಿನಾಯಕ ಯಕ್ಷಕಲಾ ತಂಡದ ಕಾರ್ಯದರ್ಶಿ ರೇಶ್ಮಾ ಜಿ. ಬಂಗೇರ ಮಾತನಾಡಿ, ಯಕ್ಷಗಾನ ಕ್ಷೇತ್ರ ಗಂಡಸರಿಗೆ
ಮಾತ್ರ ಸೀಮಿತವಲ್ಲ. ಹೆಣ್ಣು ಮಕ್ಕಳು ಕೂಡ ಅದರಲ್ಲಿ ಸಾಧನೆ ಮಾಡಬಹುದು. ಇಲ್ಲಿನ ಮಕ್ಕಳ ಮೇಳದಲ್ಲಿ ಸುಮಾರು 20 ಹುಡುಗಿಯರು ಯಕ್ಷಗಾನ ಅರ್ಥಗಾರಿಕೆ, ವೇಷ ಹಾಕುವುದನ್ನು ತರಬೇತು ಪಡೆದು ಯಶಸ್ವಿಯಾಗಿದ್ದಾರೆ. ಈ ನಿಟ್ಟಿನಲ್ಲಿ ಇಲ್ಲಿನ ಮಹಿಳಾ ಸಂಘಟನೆಯು ಉತ್ತಮ ಕೆಲಸಮಾಡುತ್ತಿದೆ ಎಂದರು. ಇದೇ ಸಂದರ್ಭದಲ್ಲಿ ಜಾನಪದ ಕ್ಷೇತ್ರದ ನಾಟಿ ವೈದ್ಯೆ ಸುಮತಿ ಪೂಜಾರಿ ಶಾಂತಿ ನಗರ ಅವರನ್ನು ಗೌರವಿಸಲಾಯಿತು.
ಕಿಲ್ಪಾಡಿ ಗ್ರಾಮ ಪಂಚಾಯತ್ ಸದಸ್ಯೆ ದಮಯಂತಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧಿಕಾರಿ ಶಿಮಂತೂರು ರೇಖಾ ಮತ್ತಿತರರು ಉಪಸ್ಥಿತರಿದ್ದರು. ಮಹಿಳಾ ಸಂಘದ ಅಧ್ಯಕ್ಷೆ ಪ್ರೇಮಲತಾ ಸ್ವಾಗತಿಸಿದರು. ಅನ್ವಿತಾ ಸಮ್ಮಾನ ಪತ್ರ ವಾಚಿಸಿದರು. ಪೂಜಾ ವಂದಿಸಿದರು. ಸಂಧ್ಯಾ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ಶ್ರೀ ವಿನಾಯಕ ಯಕ್ಷಕಲಾ ತಂಡ ಮಕ್ಕಳ ಮೇಳದವರಿಂದ ಪಾಂಚಜನ್ಯ ಯಕ್ಷಗಾನ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್
ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್ ಪಡೀಲ್ ಆಯ್ಕೆ
ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!
Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !
Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!
MUST WATCH
ಹೊಸ ಸೇರ್ಪಡೆ
Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್; ಭಾರೀ ನಷ್ಟ
Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ
Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ
Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ
Lok Sabha Polls: ಕಾಗೆ ಮಾತು ಕಾಂಗ್ರೆಸ್ನ ಮನಸ್ಥಿತಿ: ಬಿ.ವೈ.ರಾಘವೇಂದ್ರ