Tulu Movies”ಯಾನ್‌ ಸೂಪರ್‌ ಸ್ಟಾರ್‌’ ;ತುಳು ಸಿನೆಮಾ ನಾಳೆಯಿಂದ ತೆರೆಗೆ


Team Udayavani, Sep 21, 2023, 6:15 AM IST

“ಯಾನ್‌ ಸೂಪರ್‌ ಸ್ಟಾರ್‌’ ;ತುಳು ಸಿನೆಮಾ ನಾಳೆಯಿಂದ ತೆರೆಗೆ

ಮಂಗಳೂರು: ಆನಂದ ಫಿಲಂಸ್‌ ಮತ್ತು ದ ಮಂಗಳೂರಿಯನ್ಸ್‌ ಲಾಂಛನದಲ್ಲಿ ರಾಮ್‌ ಶೆಟ್ಟಿ ಅರ್ಪಿಸುವ, ದಯಾನಂದ ಶೆಟ್ಟಿ ನಿರ್ಮಾಣ, ಸಂತೋಷ್‌ ಶೆಟ್ಟಿ ನಿರ್ದೇಶನದಲ್ಲಿ ತಯಾರಾದ “ಯಾನ್‌ ಸೂಪರ್‌ ಸ್ಟಾರ್‌’ ತುಳು ಚಲನ ಚಿತ್ರವು ಸೆ. 22ರಂದು ಕರಾವಳಿಯಾದ್ಯಂತ ತೆರೆ ಕಾಣಲಿದೆ.

ಚಿತ್ರ ನಿರ್ಮಾಪಕ ಹಾಗೂ ನಟ ದಯಾನಂದ ಶೆಟ್ಟಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಯಾನ್‌ ಸೂಪರ್‌ ಸ್ಟಾರ್‌ ಸಿನೆಮಾ ಮಂಗಳೂರಿನ ರೂಪವಾಣಿ, ಭಾರತ್‌ ಸಿನೆಮಾಸ್‌, ಪಿವಿಆರ್‌, ಸಿನನೆಪೊಲಿಸ್‌, ಉಡುಪಿಯಲ್ಲಿ ಕಲ್ಪನಾ, ಮಣಿಪಾಲದಲ್ಲಿ ಐನಾಕ್ಸ್‌, ಭಾರತ್‌ ಸಿನೆಮಾಸ್‌, ಪಡುಬಿದ್ರೆಯಲ್ಲಿ ಭಾರತ್‌ ಸಿನೆಮಾಸ್‌, ಕಾರ್ಕಳದಲ್ಲಿ ರಾಧಿಕಾ, ಪ್ಲಾನೆಟ್‌, ಬೆಳ್ತಂಗಡಿಯಲ್ಲಿ ಭಾರತ್‌, ಸುರತ್ಕಲ್‌ನಲ್ಲಿ ನಟರಾಜ್‌, ಸಿನೆಗ್ಯಾಲಕ್ಸಿ, ಪುತ್ತೂರಿನಲ್ಲಿ ಭಾರತ್‌ ಸಿನೆಮಾಸ್‌, ಸುಳ್ಯದಲ್ಲಿ ಸಂತೋಷ್‌ ಚಿತ್ರಮಂದಿರದಲ್ಲಿ ತೆರೆ ಕಾಣಲಿದೆ.

ಸೆನ್ಸಾರ್‌ನಲ್ಲಿ ಯು ಎ ಸರ್ಟಿಫಿಕೆಟ್‌ ಪಡೆದುಕೊಂಡಿರುವ ಸಿನೆಮಾ ಮಂಡಳಿಯಿಂದ ಮೆಚ್ಚುಗೆ ಪಡೆದಿದೆ. ತುಳು ಸಿನೆಮಾರಂಗಕ್ಕೆ ಯಾನ್‌ ಸೂಪರ್‌ ಸ್ಟಾರ್‌ ಮೂಲಕ ಒಂದು ಸದಭಿರುಚಿಯ ಚಿತ್ರ ಲಭಿಸಲಿದೆ. ಕುಟುಂಬ ಸಮೇತ ಸಿನೆಮಾ ವೀಕ್ಷಿಸಬಹುದಾಗಿದೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ ಎಂದರು.
ಮುಂಬಯಿ, ಪೂನಾ ಮತ್ತಿತರ ಕಡೆಗಳಲ್ಲಿ ಈಗಾಗಲೇ ಸಿನೆಮಾ ಪ್ರೀಮಿಯರ್‌ ಶೋ ನಡೆದಿದ್ದು, ಪ್ರೇಕ್ಷಕರಿಂದ ವ್ಯಾಪಕ ಮೆಚ್ಚುಗೆ ಪಡೆದುಕೊಂಡಿದೆ. ಬೆಂಗಳೂರು ಮತ್ತು ಗಲ್ಫ್ ದೇಶಗಳಲ್ಲೂ ಸಿನೆಮಾ ಬಿಡುಗಡೆಗೆ ತಯಾರಿ ನಡೆಯುತ್ತಿದೆ ಎಂದರು.

ಉಡುಪಿ ಸುತ್ತಮುತ್ತ ಒಂದೇ ಹಂತದಲ್ಲಿ 25 ದಿನಗಳ ಕಾಲ ಯಾನ್‌ ಸೂಪರ್‌ ಸ್ಟಾರ್‌ ಚಿತ್ರೀಕರಣ ನಡೆದಿತ್ತು. ಸಂತೋಷ್‌ ಶೆಟ್ಟಿ ಅವರ ಕಥೆಗೆ ಸಚಿನ್‌ ಶೆಟ್ಟಿ ಕುಂಬಳೆ ಸಂಭಾಷಣೆ ಬರೆದಿದ್ದಾರೆ. ವಿ. ಮನೋಹರ್‌ ಸಂಗೀತ ಒದಗಿಸಿದ್ದಾರೆ ಎಂದು ಹೇಳಿದ ಅವರು, ತುಳುವಿನಲ್ಲಿ ಇದೊಂದು ವಿಭಿನ್ನ ಸಿನೆಮಾ. ಕಾಮಿಡಿ ಹಾಗೂ ಸಂದೇಶ ಭರಿತ ಸಿನೆಮಾ ಇದಾಗಿದೆ ಎಂದವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ರಾಮ್‌ ಶೆಟ್ಟಿ, ಸಂಗೀತ ನಿರ್ದೇಶಕ ವಿ. ಮನೋಹರ್‌, ನಿರ್ದೇಶಕ ಸಂತೋಷ್‌ ಶೆಟ್ಟಿ, ನಟರಾದ ನವೀನ್‌ ಡಿ. ಪಡೀಲ್‌, ಹರೀಶ್‌ ವಾಸು ಶೆಟ್ಟಿ, ಛಾಯಾಗ್ರಾಹಕ ಕೃಷ್ಣ ರಾಜ್‌ ಕೋಟ್ಯಾನ್‌, ತಮ್ಮ ಲಕ್ಷ್ಮಣ ಉಪಸ್ಥಿತರಿದ್ದರು.

ಹಿಂದಿಯ “ಸಿಐಡಿ’ ಧಾರವಾಹಿಯ ತಂಡ!
ಜನಮನ್ನಣೆ ಪಡೆದಿರುವ ಸಿಐಡಿ ಧಾರಾವಾಹಿಯ ಮುಂಬಯಿ ಕಲಾವಿದರು ಈ ಸಿನೆಮಾದಲ್ಲಿ ಮುಖ್ಯ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ದಯಾನಂದ ಶೆಟ್ಟಿ, ಹರೀಶ್‌ ವಾಸು ಶೆಟ್ಟಿ, ಸಾಯಿ ಬಲ್ಲಾಲ್‌ರೊಂದಿಗೆ ತುಳುನಾಡಿನ ಖ್ಯಾತ ಕಲಾವಿದರಾದ ನವೀನ್‌ ಡಿ ಪಡೀಲ್‌, ಭೋಜರಾಜ ವಾಮಂಜೂರು, ಮಾನಸಿ ಸುಧೀರ್‌, ಅನ್‌ ಷಾ, ಅಶೋಕ್‌ ಪಕ್ಕಳ, ಅತಿಶ್‌ ಶೆಟ್ಟಿ, ಅರುಷ್‌ ಯು ಪೂಜಾರಿ, ಶ್ರೀಯಾ ಹೆಗ್ಡೆ ಮೊದಲಾದವರು ತಾರಾಗಣದಲ್ಲಿದ್ದಾರೆ.

 

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.