ಕರಾವಳಿಯಲ್ಲಿ ಮಳೆ ಮತ್ತೆ ಚುರುಕು ; 3 ದಿನ ಎಲ್ಲೋ ಅಲರ್ಟ್
Team Udayavani, Aug 22, 2022, 8:58 AM IST
ಮಂಗಳೂರು/ಉಡುಪಿ : ಹಲವು ದಿನಗಳ ವಿರಾಮದ ಬಳಿಕ ಕರಾವಳಿಯ ಹೆಚ್ಚಿನ ಕಡೆಗಳಲ್ಲಿ ಶನಿವಾರ ರಾತ್ರಿಯಿಂದ ಮತ್ತೆ ಮಳೆ ಚುರುಕುಗೊಂಡಿದೆ.
ಕರಾವಳಿಯಲ್ಲಿ ರವಿವಾರ ಸಾಧಾರಣ ಮಳೆಯಾಗಿದೆ. ದ.ಕ. ಜಿಲ್ಲೆಯ ವಿವಿಧೆಡೆ ಬೆಳಗ್ಗೆ ದಟ್ಟ ಮೋಡ ಆವರಿಸಿ ಉತ್ತಮ ಮಳೆಯ ಮುನ್ಸೂಚನೆ ನೀಡಿತು. ಬಳಿಕ ಮೋಡಗಳು ದುರ್ಬಲವಾಗಿ ಆಗಾಗ್ಗೆ ಸಾಧಾರಣ ಮಳೆಯಾಗಿದೆ. ಮಂಗಳೂರು, ಪುತ್ತೂರು, ಸುಳ್ಯ ಹಾಗೂ ಬೆಳ್ತಂಗಡಿ ತಾಲೂಕುಗಳಲ್ಲಿ ಸಾಧಾರಣ ಮಳೆಯಾಗಿದೆ. ಬಂಟ್ವಾಳ ತಾಲೂಕಿನ ಹೆಚ್ಚಿನ ಕಡೆ ಉತ್ತಮ ಮಳೆ ಸುರಿದಿದೆ.
ಉಡುಪಿ: ಬಿಟ್ಟು ಬಿಟ್ಟು ಮಳೆ
ಉಡುಪಿ: ಜಿಲ್ಲೆಯಲ್ಲಿ ಶನಿವಾರ ರಾತ್ರಿ, ರವಿವಾರ ಹಲವೆಡೆ ಬಿಟ್ಟುಬಿಟ್ಟು ಮಳೆಯಾಗಿದೆ. ಉಡುಪಿ ನಗರ ಮತ್ತು ಆಸುಪಾಸಿನ ಪ್ರದೇಶಗಳಲ್ಲಿ ಶನಿವಾರ ರಾತ್ರಿ ಪೂರ್ತಿ ಉತ್ತಮ ಮಳೆಯಾಗಿದೆ. ಕುಂದಾಪುರ, ಕಾರ್ಕಳ ತಾಲೂಕಿನ ವಿವಿಧೆಡೆ ಕೂಡ ಉತ್ತಮ ಮಳೆಯಾಗಿದೆ.
ಉಡುಪಿ, ಮಣಿಪಾಲ, ಮಲ್ಪೆ ಸುತ್ತಮುತ್ತ ಬಿಸಿಲು, ಮೋಡ ಕವಿದ ವಾತಾವರಣ ನಡುವೆ ಆಗಾಗ್ಗೆ ಧಾರಕಾರ ಮಳೆ ಸುರಿದಿದೆ. ಸಂಜೆ ಬಳಿಕ ನಗರದ ಸುತ್ತಮುತ್ತ ಕೆಲಕಾಲ ಬಿಟ್ಟುಬಿಟ್ಟು ನಿರಂತರ ಮಳೆಯಾಗಿದೆ.
ಮಳೆ ಮತ್ತೆ ಚುರುಕು ಆಗಿದ್ದರಿಂದ ಮುಖ್ಯವಾಗಿ ಭತ್ತ ಕೃಷಿಕರ ಮೊಗದಲ್ಲಿ ಹರ್ಷ ಕಾಣಿಸಿದೆ. ಕೆಲವು ದಿನಗಳ ಬಿಸಿಲಿನಿಂದಾಗಿ ಗದ್ದೆಗಳಲ್ಲಿ ನೀರು ಕಡಿಮೆಯಾಗಿದ್ದು, ಇನ್ನೇನು ಒಣಗುವ ಹಂತಕ್ಕೆ ಹೋಗುವಷ್ಟರಲ್ಲಿ ಮತ್ತೆ ಮಳೆ ಸುರಿದಿದೆ.
ಮೂರು ದಿನ ಎಲ್ಲೋ ಅಲರ್ಟ್
ಮುಂದಿನ ಮೂರ್ನಾಲ್ಕು ದಿನ ಕರಾವಳಿಯಲ್ಲಿ ಮಳೆ ಇನ್ನಷ್ಟು ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಆಗಸ್ಟ್ 22, 24 ಮತ್ತು 25ಕ್ಕೆ ಅನ್ವಯ ವಾಗುವಂತೆ ಎಲ್ಲೋ ಅಲರ್ಟ್ ನೀಡಲಾಗಿದೆ. ಈ ಅವಧಿಯಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು ಮತ್ತು ಚಿಕ್ಕಮಗಳೂರಿಗೂ ಈ 3 ದಿನಗಳಿಗೆ ಎಲ್ಲೋ ಅಲರ್ಟ್ ನೀಡಲಾಗಿದೆ. ಕಾಸರಗೋಡು ಸಹಿತ ಕೇರಳದ ವಿವಿಧೆಡೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದೂ ತಿಳಿಸಲಾಗಿದೆ.
ಎಚ್ಚರಿಕೆ ವಹಿಸಲು ಸೂಚನೆ
ಸಮುದ್ರದಲ್ಲಿ ಆ. 23ರಿಂದ 25ರ ವರೆಗೆ ಗಾಳಿಯ ವೇಗ ಹೆಚ್ಚಿರುವ ಸಾಧ್ಯತೆ ಇದೆ. ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವ ಇದೆ. ಆದುದರಿಂದ ಕೇರಳ ಮತ್ತು ಕರ್ನಾಟಕ ಕರಾವಳಿಯ ಮೀನುಗಾರರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ