ಕರಾವಳಿ ಭಾಗದಲ್ಲಿ ಯಲ್ಲೋ ಅಲರ್ಟ್; ಮಳೆ ನಿರೀಕ್ಷೆ
Team Udayavani, Mar 23, 2022, 8:35 AM IST
ಮಂಗಳೂರು/ಉಡುಪಿ: ಕರಾವಳಿ ಭಾಗದಲ್ಲಿ ಪೂರ್ವ ಮುಂಗಾರು ಚುರುಕುಗೊಂಡಿದೆ. ಮುಂದಿನ ಎರಡು ದಿನಗಳ ಕಾಲ ಉತ್ತಮ ಮಳೆಯಾಗುವ ನಿರೀಕ್ಷೆ ಇದ್ದು, ಭಾರತೀಯ ಹವಾಮಾನ ಇಲಾಖೆ “ಯಲ್ಲೋ ಅಲರ್ಟ್’ ಘೋಷಿಸಿದೆ. ದ.ಕ. ಜಿಲ್ಲೆಯ ಕೆಲವು ಭಾಗಗಳಲ್ಲಿ ಸೋಮವಾರ ಮಧ್ಯರಾತ್ರಿ ಮತ್ತು ಮಂಗಳವಾರ ಸಾಧಾರಣ ಮಳೆಯಾಗಿದೆ. ಉಡುಪಿ ಜಿಲ್ಲೆಯ ವಿವಿಧೆಡೆ ಮೋಡ ಕವಿದ ವಾತಾವರಣವಿತ್ತು.
ಧರ್ಮಸ್ಥಳ, ಗುರುವಾಯನಕರೆ, ನೆರಿಯ, ಬೆಳ್ತಂಗಡಿ, ಉಜಿರೆ, ಗಂಡಿಬಾಗಿಲು, ಮಂಗಳೂರು ಸೇರಿದಂತೆ ಜಿಲ್ಲೆಯ ಹಲವು ಕಡೆಗಳಲ್ಲಿ ಸೋಮವಾರ ಮಧ್ಯರಾತ್ರಿಯಿಂದ ಮಳೆ ಆರಂಭವಾಗಿತ್ತು. ಅಳದಂಗಡಿ, ನಾರಾವಿ ಸುತ್ತಮುತ್ತ ಮಂಗಳವಾರ ಮಳೆಯಾಗಿದೆ. ಬಂಟ್ವಾಳದ ಹಲವೆಡೆ ಸಾಧಾರಣ ಮಳೆಯಾಗಿದೆ. ರಾತ್ರಿ 1ರ ಸುಮಾರಿಗೆ ಹನಿ ಮಳೆ ಕಾಣಿಸಿ ಕೊಂಡು ನಿಂತಿದ್ದು, ಬಳಿಕ ಸ್ವಲ್ಪ ಹೊತ್ತು ಮಳೆ ಸುರಿದಿತ್ತು
ಕೆಲವು ದಿನಗಳಿಂದ ದ.ಕ.ದಲ್ಲಿ ಸೆಕೆಯ ಬೇಗೆ ಹೆಚ್ಚಿದ್ದು, ಗರಿಷ್ಠ ಉಷ್ಣಾಂಶವೂ ಏರಿಕೆ ಕಾಣುತ್ತಿದೆ. ಐಎಂಡಿ ಮಾಹಿತಿ ಯಂತೆ ಮಂಗಳೂರಿನಲ್ಲಿ ಮಂಗಳವಾರದಂದು 31.9 ಡಿ.ಸೆ. ಗರಿಷ್ಠ ಮತ್ತು 22.4 ಡಿ.ಸೆ. ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಎಕ್ಕಾರು: ಸಿಡಿಲಿನಿಂದ 3 ಮನೆಗೆ ಹಾನಿ
ಬಜಪೆ: ಎಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ 3.30ರ ವೇಳೆಗೆ ಮಿಂಚು ಸಿಡಿಲು
ಸಹಿತ ಉತ್ತಮ ಮಳೆಯಾಗಿದ್ದು ಮೂರು ಮನೆಗಳಿಗೆ ಹಾನಿಯಾಗಿದೆ.
ಕಟಾವು ಮಾಡಿದ ಭತ್ತ ವನ್ನು ಗೋಣಿಚೀಲದಲ್ಲಿ ತುಂಬಿಸಿ ಗದ್ದೆಯಲ್ಲೇ ಇರಿಸಿದ್ದ ಕೃಷಿಕನಿಗೆ ನಷ್ಟವಾಗಿದೆ. ತೆಂಕ ಎಕ್ಕಾರು ಗ್ರಾಮದ ತುಕಾರಾಮ ಶೆಟ್ಟಿ ಅವರ ಮನೆಗೆ ಸಿಡಿಲು ಬಡಿದಿದ್ದು, ಗೋಡೆ ಬಿರುಕು ಬಿಟ್ಟಿದೆ. ವಿದ್ಯುತ್ ವಯರಿಂಗ್, ಎಲೆಕ್ಟ್ರಾನಿಕ್ ಮತ್ತು ಎಲೆಕ್ಟ್ರಿಕಲ್ ಸಾಮಗ್ರಿಗಳು ಹಾನಿಗೀಡಾಗಿವೆ. ಸಿಡಿಲಿನಿಂದಾಗಿ ಸಮೀಪದ ಎರಡು ಮನೆಗಳಿಗೂ ಹಾನಿಯಾಗಿದೆ.
ತಾಂಗಾಡಿಯ ಕೃಷಿಕರಾದ ಗಂಪದ ಬೈಲು ಭಾಸ್ಕರ್ ಮೂಲ್ಯ, ಪಲ್ಲದ ಕೋಡಿ ನಾರಾಯಣ ಗೌಡ, ಸುಂದರ ಗೌಡ ಅವರು ಗದ್ದೆಗಳಲ್ಲಿ ಯಂತ್ರದ ಮೂಲಕ ಕಟಾವು ಮಾಡಿ ಭತ್ತವನ್ನು ಗೋಣಿ ಚೀಲದಲ್ಲಿ ತುಂಬಿಸಿ ಗದ್ದೆಯಲ್ಲಿಯೇ ಇಡಲಾಗಿತ್ತು. ರಾತ್ರಿ ಸುರಿದ ಅಕಾಲಿಕ ಮಳೆಯಿಂದಾಗಿ ಸುಮಾರು 35 ಗೋಣಿ ಚೀಲಗಳು ಸಂಪೂರ್ಣ ಒದ್ದೆಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ