ಅಡಿಕೆ ಹಳದಿ ಎಲೆರೋಗ; ಶೀಘ್ರ ಬೆಳೆಗಾರರು, ತಜ್ಞರ ಸಭೆ: ಕಿರಣ್‌ ಕೊಡ್ಗಿ


Team Udayavani, Sep 25, 2022, 3:26 PM IST

ಅಡಿಕೆ ಹಳದಿ ಎಲೆರೋಗ; ಶೀಘ್ರ ಬೆಳೆಗಾರರು, ತಜ್ಞರ ಸಭೆ: ಕಿರಣ್‌ ಕೊಡ್ಗಿ

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಭಾಗದಲ್ಲಿ ಕಾಣಿಸಿರುವ ಅಡಿಕೆ ಹಳದಿ ಎಲೆ ರೋಗಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕ್ಯಾಂಪ್ಕೋ ಶೀಘ್ರ ಅಡಿಕೆ ಬೆಳೆಗಾರರ ಹಾಗೂ ತಜ್ಞರ ಸಭೆ ಕರೆದು ಚರ್ಚೆ ನಡೆಸಲಿದೆ ಎಂದು ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದ್ದಾರೆ.

ಸಂಘ ನಿಕೇತನದಲ್ಲಿ ಶನಿವಾರ ಜರಗಿದ ಕ್ಯಾಂಪ್ಕೋದ 48ನೇ ವಾರ್ಷಿಕ ಮಹಾಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಅಡಿಕೆಯ ಹಳದಿಎಲೆ ರೋಗ ಬೆಳೆಗಾರರನ್ನು ಕಂಗೆಡಿಸಿದೆ. ಸುಳ್ಯದಿಂದ ಪುತ್ತೂರು ಹಾಗೂ ಕಾಸರಗೋಡಿಗೂ ರೋಗ ವ್ಯಾಪಿಸುತ್ತಿದ್ದು, ಪರಿಹಾರ ಕಂಡುಕೊಳ್ಳಲು ಕ್ಯಾಂಪ್ಕೋ ಗಂಭೀರ ಪ್ರಯತ್ನ ನಡೆಸುತ್ತಿದೆ. ಈಗಾಗಲೇ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ನಿಯೋಗ ತೆರಳಿ ಸೂಕ್ತ ಪರಿಹಾರ ಹಾಗೂ ರೋಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಆಗ್ರಹಿಸಿದೆ ಎಂದರು.

ಹಳದಿ ಎಲೆರೋಗಕ್ಕೆ ಕಾಂಪ್ಕೋದ ಸಂಶೋಧನ ಪ್ರತಿಷ್ಠಾನದ ಮೂಲಕ ಸಂಶೋಧನೆಗೆ ನೆರವು ನೀಡಲು ಕ್ರಮ ಕೈಗೊಳ್ಳಲಾಗುವುದು. ಪ್ರಸಕ್ತ 3.97 ಕೋ.ರೂ. ಮೊತ್ತವನ್ನು ಸಂಶೋಧನೆಗೆ ಮೀಸಲಿರಿಸಲಾಗಿದೆ ಎಂದರು.

ಅಡಿಕೆ ವಹಿವಾಟಿನಲ್ಲಿ ಶೇ. 5 ಜಿಎಸ್‌ಟಿ ಪಾವತಿಸಲಾಗುತ್ತಿದ್ದು, 350 ಕೋ.ರೂ.ಗೂ ಅಧಿಕ ತೆರಿಗೆಯನ್ನು ಸರಕಾರಕ್ಕೆ ಪಾವತಿಸಲಾಗಿದೆ. ಇದರಲ್ಲಿ ಶೇ. 1 ಮೊತ್ತವನ್ನು ಸಂಶೋಧನೆಗೆ ಬಳಕೆ ಮಾಡಲು ಕಲ್ಪಿಸುವಂತೆ ಕೋರಲಾಗಿದೆ. ಪ್ರಸಕ್ತ ಅಡಿಕೆ ಆಮದು ಮೇಲೆ ಉತ್ಪಾದನ ವೆಚ್ಚ ಕಿಲೋಗೆ 251 ರೂ. ಇದ್ದುದನ್ನು 360 ರೂ.ಗೆ ನಿಗದಿಗೊಳಿಸಲು ಕೇಂದ್ರ ಹಣಕಾಸು ಸಚಿವರನ್ನು ಆಗ್ರಹಿಸಲಾಗಿದೆ ಎಂದರು.

10 ಲಕ್ಷ ಕ್ವಿಂಟಾಲ್‌ ಗುರಿ
ಅಡಿಕೆ ವಾರ್ಷಿಕ ವ್ಯವಹಾರವನ್ನು 5.50 ಲಕ್ಷ ಕ್ವಿಂಟಾಲ್‌ನಿಂದ 10 ಲಕ್ಷ ಕ್ವಿಂಟಾಲ್‌ಗೆ ಹೆಚ್ಚಿಸುವ ಗುರಿ ಇರಿಸಿಕೊಳ್ಳಲಾಗಿದೆ. ಇನ್ಫೋ ಇಂಡಿಯಾ ಸಂಸ್ಥೆ ಜತೆ ಕ್ಯಾಂಪ್ಕೋ ಒಪ್ಪಂದ ಮಾಡಿಕೊಂಡಿದ್ದು, ಬೆಳೆಗಾರರ ಸಮಗ್ರ ಮಾಹಿತಿಯನ್ನು ಡಿಜಿಟಲೀಕರಣಗೊಳಿಸಲಾಗುತ್ತಿದೆ ಎಂದು ಕೊಡ್ಗಿ ವಿವರಿಸಿದರು.

ಕ್ಯಾಂಪ್ಕೋದ ಹೊಸ ಉತ್ಪನ್ನಗಳನ್ನು ಆರೆಸ್ಸೆಸ್‌ ಮುಖಂಡ ನ. ಸೀತಾರಾಮ್‌ ಮತ್ತು ಗೋಪಾಲ ಚೆಟ್ಟಿಯಾರ್‌ ಬಿಡುಗಡೆಗೊಳಿಸಿದರು.

ಟಾಪ್ ನ್ಯೂಸ್

police siren

ಅಬಕಾರಿ ಇಲಾಖೆಯಿಂದ ದಾಳಿ – ಜಪ್ತಿ

fire

ರಬ್ಬರ್‌ ತೋಟದಲ್ಲಿ ಬೆಂಕಿ ಆಕಸ್ಮಿಕ

accident 2

ರಾಸಾಯನಿಕ ಸಾಗಾಟ ಮಾಡುತ್ತಿದ್ದ ಟ್ಯಾಂಕರ್‌ ಪಲ್ಟಿ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತದಾರ ಜಾಗೃತಿ ಅಭಿಯಾನ; ಮತದಾರರನ್ನು ಮತಗಟ್ಟೆಗೆ ಸೆಳೆಯುವತ್ತಸ್ವೀಪ್‌ ಚಿತ್ತ!

ಮತದಾರ ಜಾಗೃತಿ ಅಭಿಯಾನ; ಮತದಾರರನ್ನು ಮತಗಟ್ಟೆಗೆ ಸೆಳೆಯುವತ್ತ ಸ್ವೀಪ್‌ ಚಿತ್ತ!

ಮಂಗಳೂರು: ಇಕ್ಕಟ್ಟಿನಲ್ಲಿ ಮತ ಕೇಳುವವರು; ನೀರು ಹರಿದರೆ ಮತವೂ ಹರಿದೀತು!

ಮಂಗಳೂರು: ಇಕ್ಕಟ್ಟಿನಲ್ಲಿ ಮತ ಕೇಳುವವರು; ನೀರು ಹರಿದರೆ ಮತವೂ ಹರಿದೀತು!

ajit kumar rai maladi

ಬಂಟರು ಯಾನೆ ನಾಡವರನ್ನು ಪ್ರವರ್ಗ 2(ಎ)ಗೆ ಸೇರಿಸಿ- ನಿಗಮ ಸ್ಥಾಪಿಸಿ

ಹಂಪ್‌ನಲ್ಲಿ ಬಸ್‌ ಜಂಪ್‌: ಪ್ರಯಾಣಿಕನಿಗೆ ಗಂಭೀರ ಗಾಯ

ಹಂಪ್‌ನಲ್ಲಿ ಬಸ್‌ ಜಂಪ್‌: ಪ್ರಯಾಣಿಕನಿಗೆ ಗಂಭೀರ ಗಾಯ

ಭೂಮಾಲಕರ ಜತೆ ಸಂವಾದ: ರಾ.ಹೆ. 169 ಚತುಷ್ಪಥ ಕಾಮಗಾರಿ ಕೈಬಿಡುವ ಆತಂಕ

ಭೂಮಾಲಕರ ಜತೆ ಸಂವಾದ: ರಾ.ಹೆ. 169 ಚತುಷ್ಪಥ ಕಾಮಗಾರಿ ಕೈಬಿಡುವ ಆತಂಕ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

police siren

ಅಬಕಾರಿ ಇಲಾಖೆಯಿಂದ ದಾಳಿ – ಜಪ್ತಿ

fire

ರಬ್ಬರ್‌ ತೋಟದಲ್ಲಿ ಬೆಂಕಿ ಆಕಸ್ಮಿಕ

accident 2

ರಾಸಾಯನಿಕ ಸಾಗಾಟ ಮಾಡುತ್ತಿದ್ದ ಟ್ಯಾಂಕರ್‌ ಪಲ್ಟಿ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.