ನಂದಿನಿ ನದಿಗೆ ಹಾರಿದ ಯುವಕ: ತೀವ್ರ ಶೋಧ
Team Udayavani, Oct 6, 2017, 7:45 AM IST
ಹಳೆಯಂಗಡಿ : ಸಸಿಹಿತ್ಲು- ಕದಿಕೆಯ ನೂತನ ಸೇತುವೆಯಿಂದ ಅಪರಿಚಿತ ಯುವಕನೋರ್ವ ನಂದಿನಿ ನದಿಗೆ ಹಾರಿದ್ದಾನೆ ಎಂಬ ಮಾಹಿತಿಯಿಂದ ಪೊಲೀಸರು ಅಗ್ನಿಶಾಮಕ ದಳದ ಸಹಾಯದಿಂದ ತೀವ್ರ ಶೋಧ ನಡೆಸಿದ ಘಟನೆ ಅ. 5ರಂದು ನಡೆದಿದೆ.
ಸಸಿಹಿತ್ಲುವಿನ ಶ್ರೀ ಭಗವತೀ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ನೂತನ ಸೇತುವೆಯಿಂದ ಏಕಾಏಕಿ ಯುವಕನೋರ್ವ ನದಿಗೆ ಹಾರಿದ್ದನ್ನು ಮಹಿಳೆಯೋರ್ವರು ನೋಡಿದ್ದಾರೆ ಎಂದು ಮೂಲ್ಕಿ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿತ್ತು. ತತ್ಕ್ಷಣ ಪೊಲೀಸರು ಸ್ಥಳೀಯ ಮೀನುಗಾರರ ಸಹಾಯದಿಂದ ದೋಣಿಯಲ್ಲಿ ಹುಡುಕಾಡಿದರು ಆನಂತರ ಮಂಗಳೂರಿನಿಂದ ಬಂದ ಅಗ್ನಿಶಾಮಕ ದಳದವರು ಸಹ ತಮ್ಮ ಬೋಟ್ನಲ್ಲಿ ನಂದಿನಿ ನದಿಯ ಸುತ್ತಮುತ್ತ ಹಾಗೂ ಬೀಚ್ನ ವರೆಗೆ ಶೋಧ ಕಾರ್ಯ ನಡೆಸಿದರೂ ಫಲಕಾರಿಯಾಗಲಿಲ್ಲ ಎಂದು ತಿಳಿದು ಬಂದಿದೆ.
ಯಾರು ಈ ಅಪರಿಚಿತ..?
ನೀರಿಗೆ ಹಾರಿದವ ಬಿಳಿ ಟೀ ಶರ್ಟ್ ಧರಿಸಿದ್ದ ಸಾಧಾರಣ 25ರ ಹರೆಯದ ಯುವಕ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಆತ ಸೇತುವೆಯ ಬಳಿಯಲ್ಲಿಯೇ ಬೆಳಗ್ಗೆಯಿಂದ ಕುಳಿತಿದ್ದು ಅನಂತರ ಹಾರಿದ್ದಾನೆ. ಎರಡು ಬಾರಿ ಮುಳುಗೆ ದ್ದಿದ್ದಾನೆ ಎನ್ನಲಾಗಿದೆ. ಘಟನಾ ಸ್ಥಳದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಕುತೂಹಲಿಗರು ಸೇರಿದ್ದರು. ಸಂಜೆ ವರೆಗೆ ಕಾರ್ಯಾಚರಣೆ ನಡೆಸಲಾಗಿತ್ತು.
ಸ್ಪಷ್ಟವಿಲ್ಲ…
ಈ ಬಗ್ಗೆ ಮೂಲ್ಕಿ ಇನ್ಸ್ಪೆಕ್ಟರ್ ಅನಂತ ಪದ್ಮನಾಭ ಉದಯವಾಣಿ ಯೊಂದಿಗೆ ಮಾತನಾಡಿ, ಬೆಳಗ್ಗೆ ಸುಮಾರು 10 ಗಂಟೆಗೆ ಪೊಲೀಸ್ ಠಾಣೆಗೆ ಅಪರಿಚಿತ ಯುವಕ ನದಿಗೆ ಹಾರಿದ್ದಾನೆ ಎಂದು ದೂರವಾಣಿ ಕರೆಯೊಂದು ಬಂದಿತ್ತು. ಮಹಿಳೆಯೊಬ್ಬರು ನೋಡಿದ್ದಾರೆ ಎಂದು ಹೇಳಲಾಗಿತ್ತು. ಸ್ಥಳಕ್ಕೆ ಧಾವಿಸಿದಾಗ ಜನರು ಸಹ ಸೇರಿದ್ದರಾದರೂ ಮಹಿಳೆ ಯಾರು ಎಂದು ಗೊತ್ತಾಗಿಲ್ಲ. ದೂರವಾಣಿ ಕರೆ ಮಾಡಿದವರು ನೇರವಾಗಿ ನೋಡಿಲ್ಲ. ಬದಲಾಗಿ ಘಟನೆಯನ್ನು ಕೇಳಿ ಕರೆ ಮಾಡಿದ್ದರು. ಈ ಬಗ್ಗೆ ಸಂಜೆಯವರೆಗೆ ಸಾಕಷ್ಟು ಹುಡುಕಾಟ ನಡೆಸಿದ್ದೇವೆ. ಹಾರಿದ ಯುವಕನ ಬಗ್ಗೆ ಯಾವುದೇ ಪೂರಕವಾದ ಮಾಹಿತಿ ಸಿಕ್ಕಿಲ್ಲ. ಆದರೂ ಸ್ಥಳೀಯರಿಗೆ ಮಾಹಿತಿ ನೀಡಲು ತಿಳಿಸಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
Pilikula: “ಫ್ಯಾನ್-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!
Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ
Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ
Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ