ಮಂಗಳೂರಿನಲ್ಲೂ ಡ್ರಗ್ಸ್ ಬಳಕೆ ಹೆಚ್ಚಳ ಶಂಕೆ: ಯುವತಿಯರೂ ಡ್ರಗ್ಸ್‌ ಪೆಡ್ಲರ್‌ಗಳ ಗುರಿ?

ಪಾರ್ಟಿ ಡ್ರಗ್ಸ್‌ ಬಳಕೆ ಹೆಚ್ಚಳ ಶಂಕೆ

Team Udayavani, Jan 6, 2022, 1:18 PM IST

ಯುವತಿಯರೂ ಡ್ರಗ್ಸ್‌ ಪೆಡ್ಲರ್‌ಗಳ ಗುರಿ? ಮಂಗಳೂರಿನಲ್ಲೂ ಪಾರ್ಟಿ ಡ್ರಗ್ಸ್‌ ಬಳಕೆ ಹೆಚ್ಚಳ ಶಂಕೆ

ಮಂಗಳೂರು: ಕಾಲೇಜು ವಿದ್ಯಾರ್ಥಿಗಳನ್ನು ಕೇಂದ್ರೀಕರಿಸಿ ಮಾದಕ ದ್ರವ್ಯ ದಂಧೆ ನಡೆಯುತ್ತಿರುವುದನ್ನು ನಗರ ಪೊಲೀಸರು ಈಗಾಗಲೇ ಪತ್ತೆ ಹಚ್ಚಿದ್ದು ಇದೀಗ ವಿದ್ಯಾರ್ಥಿನಿ ಯರು/ಯುವತಿಯರನ್ನು ಕೂಡ ಗುರಿಯಾ ಗಿಸಲಾಗುತ್ತಿದೆಯೇ ಎಂಬ ಅನುಮಾನ ಬಲವಾಗಿದೆ.

ಮಗಳಿಗೆ ಡ್ರಗ್ಸ್‌ ನೀಡಿ ನಿರಂತರ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂದು ಕೆಲವು ದಿನಗಳ ಹಿಂದೆ ಬಿಜೈಯ ಮಹಿಳೆಯೋರ್ವರು ಪೊಲೀಸರಿಗೆ ದೂರು ನೀಡಿರುವುದು ಪೊಲೀಸರಲ್ಲಿನ ಶಂಕೆಗೆ ಇನ್ನಷ್ಟು ಪುಷ್ಟಿ ನೀಡಿದೆ.

ಕಾಲೇಜು ವಿದ್ಯಾರ್ಥಿನಿಯರು ಡ್ರಗ್ಸ್‌ ಸೇವಿಸಿ ಸಿಕ್ಕಿಬಿದ್ದಿರುವ ಪ್ರಕರಣ ದಾಖಲಾಗಿಲ್ಲ. ಆದರೆ ಕೆಲವರು ಜಾಲಕ್ಕೆ ಸಿಲುಕಿರುವ ಸಾಧ್ಯತೆಗಳಿವೆ. ಅನೇಕ ಮಂದಿ ಹೆತ್ತವರಿಗೆ ಮಕ್ಕಳ ಚಟದ ಬಗ್ಗೆ ತಿಳಿದಿರುವುದಿಲ್ಲ. ಇನ್ನು ಕೆಲವರಿಗೆ ಮಾಹಿತಿ ಇದ್ದರೂ ಅಸಹಾಯಕರಾಗಿರುತ್ತಾರೆ. ಡ್ರಗ್ಸ್‌ ಚಟಕ್ಕೆ ಬಿದ್ದವರು ಸಕಾಲದಲ್ಲಿ ಸೂಕ್ತ ಚಿಕಿತ್ಸೆ, ಸಮಾಲೋಚನೆಗೆ ಒಳಗಾಗದ ಪರಿಣಾಮ ಹೊರಬರಲಾಗುತ್ತಿಲ್ಲ ಎನ್ನುತ್ತಾರೆ ಪೊಲೀಸರು. ಪಾರ್ಟಿ ಡ್ರಗ್ಸ್‌, ಸಿಂಥೆಟಿಕ್‌ ಡ್ರಗ್ಸ್‌ ಗಳ ಬಳಕೆ ಕೂಡ ಮಂಗಳೂರಿನಲ್ಲಿ ಯಥೇತ್ಛವಾಗಿ ನಡೆಯುತ್ತಿರುವ ಸಾಧ್ಯತೆ ಇದೆ ಎಂದು ಕೆಲವರು ಆತಂಕ ವ್ಯಕ್ತಪಡಿಸಿದ್ದಾರೆ.

ಭಾರೀ ಡ್ರಗ್ಸ್‌ ವಶ
ನಗರ ಪೊಲೀ ಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ 2021ರಲ್ಲಿ ಡ್ರಗ್ಸ್‌ ಸೇವನೆ, ಮಾರಾಟಕ್ಕೆ ಸಂಬಂಧಿಸಿದಂತೆ 328 ಪ್ರಕರಣಗಳನ್ನು ದಾಖಲಿಸಿಕೊಂಡು 492 ಮಂದಿಯನ್ನು ಬಂಧಿಸಲಾಗಿದೆ. ಗಾಂಜಾ, ಎಂಡಿಎಂಎ ಟ್ಯಾಬ್ಲೆಟ್‌, ಕೊಕೇನ್‌, ಹೆರಾಯ್ನ, ಎಂಡಿಎಂಎ ಪೌಡರ್‌, ಎಲ್‌ಎಸ್‌ಡಿ ಸ್ಟಾಂಪ್ಸ್‌ ಸೇರಿದಂತೆ 85 ಲ.ರೂ. ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನೂ ನಡೆಸಲಾಗುತ್ತಿದೆ ಎಂದು ಪೊಲೀಸ್‌ ಆಯುಕ್ತ ಎನ್‌. ಶಶಿಕುಮಾರ್‌ ತಿಳಿಸಿದ್ದಾರೆ.

ಇದನ್ನೂ ಓದಿ:ಹಿಂದೂ ಮಹಿಳೆಯರ ಟಾರ್ಗೆಟ್‌ ಮಾಡುತ್ತಿದ್ದ ಜಾಲ ಬಯಲಿಗೆ

ಹಾಸ್ಟೆಲ್‌ಗ‌ಳಿಗೂ ಪೂರೈಕೆ?
ಕೆಲವು ಕಾಲೇಜು ಹಾಸ್ಟೆಲ್‌ಗ‌ಳಲ್ಲಿಯೇ ವಿದ್ಯಾರ್ಥಿಗಳು ಮಾದಕ ದ್ರವ್ಯ ಚಟಕ್ಕೆ ಒಳಗಾಗುತ್ತಾರೆ. ಅನಂತರ ಅವರದ್ದೇ ಗುಂಪು ಸೃಷ್ಟಿಯಾಗುತ್ತದೆ. ಹೆಣ್ಣು-ಗಂಡು ಭೇದವಿಲ್ಲ. ಇಂಥವರನ್ನು ಸೆಳೆದು ಖಾಯಂ ಗಿರಾಕಿ ಮಾಡಿಕೊಳ್ಳಲು ಪೆಡ್ಲರ್‌ಗಳು ಸಂಚು ರೂಪಿಸಿರುತ್ತಾರೆ ಎನ್ನುತ್ತಾರೆ ಪೊಲೀಸರು.

ಒಟ್ಟು ಡ್ರಗ್ಸ್‌ ವ್ಯಸನಿಗಳಲ್ಲಿ ಶೇ. 40ರಷ್ಟು ಯುವತಿಯರು ಇರುವುದು ವರದಿಗಳಿಂದ ಗೊತ್ತಾಗಿದೆ. ಪಾರ್ಟಿ ಡ್ರಗ್ಸ್‌ ಬಗ್ಗೆ ಯುವಜನರ ಆಕರ್ಷಣೆ ಆತಂಕಕಾರಿ. ಗೋವಾದಲ್ಲಿದ್ದ ಪಾರ್ಟಿ ಡ್ರಗ್ಸ್‌ ಮಂಗಳೂರಿನಲ್ಲಿಯೂ ಸಿಗುತ್ತಿರುವ ಅನುಮಾನವಿದೆ. 18ಕ್ಕಿಂತ ಕಡಿಮೆ ವಯಸ್ಸಿನವರು ಕೂಡ ಡ್ರಗ್ಸ್‌ ಚಟ ಹತ್ತಿಸಿಕೊಂಡಿದ್ದಾರೆ. ವ್ಯಸನಿಗಳು ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಪಡೆದರೆ ಹೊರಬರಲು ಸಾಧ್ಯ. ಇದಕ್ಕಿಂತ ಹೆಚ್ಚಾಗಿ ಯಾವುದೇ ಕಾರಣಕ್ಕೆ ಡ್ರಗ್ಸ್‌ ಚಟಕ್ಕೆ ಬೀಳದಂತೆ ಯುವಜನತೆ ಎಚ್ಚೆತ್ತುಕೊಳ್ಳುವುದು ಅತ್ಯಗತ್ಯ.
– ಗುರುಪ್ರಸಾದ್‌,
ಆಪ್ತ ಸಮಾಲೋಚಕರು, “ಬಾರ್ಕ್‌’ ಮಂಗಳೂರು

ಹಲವು ವಿದ್ಯಾರ್ಥಿಗಳ ಬಂಧನ
ನ. 12ರಿಂದ ಡಿ. 6ರವರೆಗೆ ನಗರದಲ್ಲಿ ಗಾಂಜಾ ಸೇವನೆ ಆರೋಪದಲ್ಲಿ 25ಕ್ಕೂ ಅಧಿಕ ಮಂದಿಯನ್ನು ಬಂಧಿಸಿದ್ದು ಅವರಲ್ಲಿ 16 ಮಂದಿ ಕಾಲೇಜು ವಿದ್ಯಾರ್ಥಿಗಳು. ಜೂನ್‌ನಲ್ಲಿ ಗಾಂಜಾ ಮಾರಾಟ ಪ್ರಕರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿಯೋರ್ವ ಸೆರೆಯಾಗಿದ್ದ. ಹೈಡ್ರೋವೀಡ್‌ ಗಾಂಜಾ ಮಾರಾಟ ಪ್ರಕರಣದಲ್ಲಿ ವೈದ್ಯ ವಿದ್ಯಾರ್ಥಿನಿಯನ್ನು ಬಂಧಿಸಿದ್ದರು. 2013ರಲ್ಲಿ ವಿದ್ಯಾರ್ಥಿನಿಯೋರ್ವಳು ಡ್ರಗ್ಸ್‌ ಚಟದಿಂದ ಹೊರಬರಲಾಗದೆ ನೇಣಿಗೆ ಶರಣಾಗಿದ್ದಳು.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.