ಮಾಲ್‌ನಲ್ಲಿ ಯುವಕನಿಗೆ ಹಲ್ಲೆ: ಐವರಿಗೆ ಶಿಕ್ಷೆ


Team Udayavani, Oct 12, 2019, 3:46 AM IST

d-49

ಮಂಗಳೂರು: ಮೂರು ವರ್ಷಗಳ ಹಿಂದೆ ವಿದ್ಯಾರ್ಥಿನಿ ಜತೆ ತಿರುಗಾಡಲು ಬಂದ ಅನ್ಯ ಕೋಮಿನ ಯುವಕನಿಗೆ ನಗರದ ಮಾಲ್‌ ಒಂದರ ಸಮೀಪ ಹಲ್ಲೆ ನಡೆಸಿದ ಪ್ರಕರಣದ ಐವರಿಗೆ ಶಿಕ್ಷೆ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಕಾವೂರು ಜ್ಯೋತಿನಗರ ನಿವಾಸಿ ಚೇತನ್‌ (23), ಶೃಂಗೇರಿ ನೆಲ್ಲೂರು ನಿವಾಸಿ ರಕ್ಷಿತ್‌ ಕುಮಾರ್‌ (21), ಮಂಗಳೂರು ಕಂದುಕ ನಿವಾಸಿ ಅಶ್ವಿ‌ನ್‌ರಾಜ್‌ (21), ಕಾರ್ಕಳ ಇನ್ನಾ ನಿವಾಸಿ ಸುಶಾಂತ್‌ ಶೆಟ್ಟಿ (23), ಕಾರ್‌ಸ್ಟ್ರೀಟ್‌ ನಿವಾಸಿ ಶರತ್‌ ಕುಮಾರ್‌ (28) ಶಿಕ್ಷೆಗೊಳಗಾದವರು.

ಆರೋಪಿಗಳಿಗೆ ಐಪಿಸಿ 143 (ಅಕ್ರಮ ಕೂಟ) ಅನ್ವಯ 3,000 ರೂ., ಐಪಿಸಿ 147 (ಅಕ್ರಮ ಕೂಟದ ಹಲ್ಲೆ) ಅನ್ವಯ 3,000 ರೂ., ಐಪಿಸಿ 148ರಡಿ (ಮರಣಾಂತಿಕ ಆಯಧ ಬಳಕೆ) 3,000 ರೂ., ಐಪಿಸಿ 342(ಅಕ್ರಮ ಬಂಧನ) ಪ್ರಕಾರ 1,000 ರೂ., ಐಪಿಸಿ 323ರಡಿ 1,000 ರೂ. ದಂಡ ವಿಧಿಸಲಾಗಿದೆ. ಎಲ್ಲ ಆರೋಪಿಗಳು ತಲಾ 21,000 ರೂ. ದಂಡ ಪಾವತಿಸಬೇಕು ಹಾಗೂ ತಪ್ಪಿದಲ್ಲಿ 8 ತಿಂಗಳ ಸಜೆ ಅನುಭವಿಸಬೇಕಾಗಿದೆ. ದಂಡದ ಮೊತ್ತದಲ್ಲಿ 50,000 ರೂ. ಗಳನ್ನು ಹಲ್ಲೆಗೊಳಗಾದ ಯುವಕನಿಗೆ ಪರಿಹಾರವಾಗಿ ನೀಡಬೇಕು ಎಂದು ನ್ಯಾಯಾಲಯ ಆದೇಶಿಸಿದೆ.

ಪ್ರಕರಣದ ವಿವರ
ಉಡುಪಿಯ ಯುವಕನೊಬ್ಬ ಮಣಿಪಾಲದಲ್ಲಿ ವ್ಯಾಸಂಗ ಮಾಡುತ್ತಿದ್ದ ಮಹಾರಾಷ್ಟ್ರ ಮೂಲದ ಯುವತಿಯನ್ನು ಪಾಂಡೇಶ್ವರದ ಮಾಲ್‌ಗೆ ಕರೆದುಕೊಂಡು ಹೋಗಿದ್ದ. ಸಿನೆಮಾ ನೋಡಿದ ಬಳಿಕ ಮರಳಿ ಹೋಗಲು ರಿಕ್ಷಾ ಸ್ಟ್ಯಾಂಡ್‌ಗೆ ತಲುಪಿದಾಗ 5 ಮಂದಿ ಯುವಕರ ತಂಡ ತಡೆದು ಯುವಕನನ್ನು ದೇವಸ್ಥಾನ ಸಮೀಪದ ಓಣಿಗೆ ಕರೆದೊಯ್ದು ಅಕ್ರಮ ಬಂಧನದಲ್ಲಿರಿಸಿ ಮರದ ದೊಣ್ಣೆ, ಕಬ್ಬಿಣದ ರಾಡ್‌ ಮತ್ತು ಕೈ ಕಾಲುಗಳಿಂದ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿತ್ತು.

ಗಾಬರಿಗೊಂಡ ಯುವತಿ ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಳು. ಘಟನೆ ಬಳಿಕ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ. ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಸ್‌ಐ ಅನಂತ ಮುಡೇಶ್ವರ ತನಿಖೆ ನಡೆಸಿ ಆರೋಪಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ಕೈಗೆತ್ತಿಕೊಂಡ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸಯಿದುನ್ನೀಸಾ ಅವರು ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿ, ತಪ್ಪಿ ತ ಸ್ಥ ರಿಗೆ ಶಿಕ್ಷೆ ವಿಧಿಸಿ ಗುರುವಾರ ತೀರ್ಪು ನೀಡಿದರು. 11 ಮಂದಿ ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. 17 ದಾಖಲೆಗಳನ್ನು ಪರಿಗಣಿಸಲಾಗಿತ್ತು.

ದೂರುದಾರ ಯುವತಿ ನ್ಯಾಯಾಲಯದ ವಿಚಾರಣೆ ಹಂತದಲ್ಲಿ ಸಾಕ್ಷಿ ಹೇಳಲು ಹಿಂದೇಟು ಹಾಕಿದ್ದಳು. ಹಾಗಾಗಿ ಕೊಲೆ ಬೆದರಿಕೆ ಆರೋಪ ಸಾಬೀತಾಗಿಲ್ಲ. ಸಾಂದರ್ಭಿಕ ಸಾಕ್ಷಿಗಳು ಮತ್ತು ಹಲ್ಲೆಗೊಳಗಾದ ಯುವಕನಿಗೆ ಚಿಕಿತ್ಸೆ ನೀಡಿದ್ದ ವೈದ್ಯರು ನುಡಿದ ಸಾಕ್ಷಿಯನ್ನು ಆಧರಿಸಿ ಆರೋಪಿಗಳಿಗೆ ಶಿಕ್ಷೆ ನೀಡಲಾಗಿದೆ. ಈ ಪ್ರಕರಣದಲ್ಲಿ ಸರಕಾರದ ಪರವಾಗಿ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಜುಡಿತ್‌ ಒ.ಎಂ. ಕ್ರಾಸ್ತಾ ವಾದಿಸಿದ್ದರು.

ಶಿಕ್ಷೆಗೊಳಗಾದ 2ನೇ ಪ್ರಕರಣ
ನಗರದಲ್ಲಿ ನೈತಿಕ ಪೊಲೀಸ್‌ಗಿರಿಗೆ ಸಂಬಂಧಿಸಿ ಶಿಕ್ಷೆಗೊಳಗಾದ 2ನೇ ಪ್ರಕರಣ ಇದಾಗಿದೆ. ಈ ಹಿಂದೆ 2011ರಲ್ಲಿ ಯುವತಿಯೊಬ್ಬಳು ತನ್ನ ಪರಿಚಯದ ಯುವಕನೊಂದಿಗೆ ಕೊಣಾಜೆಯ ಕಾಲೇಜೊಂದಕ್ಕೆ ಹೋಗುತ್ತಿದ್ದಾಗ ಯುವಕರು ಅಡ್ಡಗಟ್ಟಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆಯಾಗಿತ್ತು.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.