ಮದುವೆಯಾಗಲು ಮನೆ ಬಿಟ್ಟು ಬರಲು ಕೇಳದ ಹಿನ್ನೆಲೆ: ಮನೆಗೆ ನುಗ್ಗಿ ಪ್ರೇಯಸಿಗೆ ಚೂರಿಯಿಂದ ಇರಿದ
Team Udayavani, Apr 8, 2021, 8:13 AM IST
ಬೆಳ್ತಂಗಡಿ: ಪ್ರೇಮ ಪ್ರಕರಣದ ವಿಚಾರವಾಗಿ ಯುವಕನೋರ್ವ ಪ್ರೇಯಸಿಯನ್ನು ಮನೆ ಬಿಟ್ಟು ಬರುವಂತೆ ಒತ್ತಾಯಿಸಿದಾಗ ಯುವತಿ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಕುಪಿತಗೊಂಡ ಯುವಕ, ಯುವತಿಯ ಮನೆಗೆ ನುಗ್ಗಿ ಚೂರಿಯಿಂದ ಇರಿದ ಘಟನೆ ಮಂಗಳವಾರ ರಾತ್ರಿ ಲಾೖಲ ಸಮೀಪ ನಡೆದಿದೆ.
ಬೆಳ್ತಂಗಡಿ ತಾಲೂಕು ಲಾೖಲ ಗ್ರಾಮದ ನಿವಾಸಿ ತನ್ನದೇ ಸಮುದಾಯದ 21 ವರ್ಷದ ಯುವತಿ ಇರಿತಕ್ಕೆ ಒಳಗಾದವರು. ಪೂಂಜಾಲಕಟ್ಟೆ ನಿವಾಸಿ ಶಮೀರ್ (22) ಚೂರಿ ಇರಿದ ಯುವಕ.
5 ವರ್ಷದ ಪ್ರೀತಿ!: ಶಮೀರ್, ಯುವತಿಯನ್ನು ಸುಮಾರು 5 ವರ್ಷಗಳಿಂದ ಪ್ರೀತಿ ಸುತ್ತಿದ್ದು, ಮದುವೆಯಾಗಲು ಮನೆ ಬಿಟ್ಟು ಬರಲು ಒತ್ತಾಯಿಸುತ್ತಿದ್ದ. ಅದನ್ನು ಆಕೆ ತಿರಸ್ಕರಿಸಿದ್ದರಿಂದ ಕೋಪಗೊಂಡ ಪ್ರೇಮಿ ಮಂಗಳವಾರ ರಾತ್ರಿ 10.20ಕ್ಕೆ ಯುವತಿ ಮನೆಗೆ ನುಗ್ಗಿ ಆಕೆಗೆ ಚೂರಿಯಿಂದ ಇರಿದಿದ್ದಾನೆ. ಎಡ ಕೈ, ಬಲ ಕೈಗೆ ಮತ್ತು ಕುತ್ತಿಗೆಗೆ ಗಾಯವಾಗಿದೆ. ತತ್ಕ್ಷಣ ಮನೆಮಂದಿ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಇದನ್ನೂ ಓದಿ:ಪ್ರೀತಿ ಅಮರ …ಪ್ರೇಮಿಯ ಎರಡೂ ಕೈ, ಒಂದು ಕಾಲು ತುಂಡಾದರೂ ಪ್ರೀತಿಸಿ ಮದುವೆಯಾದಳು!
ಯುವತಿಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ: 448, 324, 354, 504, 506, ಐ.ಪಿ.ಸಿ.ಯಡಿ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್