ಯುವಾ ಬ್ರಿಗೇಡ್‌: ನೀರುಳಿಸಲು ವೀಕೆಂಡ್‌ ವಿಥ್‌ ರೈನ್‌


Team Udayavani, Jul 4, 2017, 7:00 PM IST

Save-Water-4-7.jpg

ಮಹಾನಗರ: ರಾಜ್ಯಾದ್ಯಂತ 100ಕ್ಕೂ ಹೆಚ್ಚು ಕಲ್ಯಾಣಿಗಳನ್ನು ಸ್ವಚ್ಛಗೊಳಿಸುವ ಮೂಲಕ ಜಲಕ್ರಾಂತಿ ಮಾಡಿದ ಯುವಾ ಬ್ರಿಗೇಡ್‌ ಈಗ ‘ಜಲ ಜನ ಸಂಪರ್ಕ ಸೇತು’ ಎಂಬ ವಿನೂತನ ಜಲಸಾಕ್ಷರ ಅಭಿಯಾನವನ್ನು ಆರಂಭಿಸಿದೆ. ಮುಂದಿನ ಬೇಸಗೆಯಲ್ಲಿ ನೀರಿನ ಕೊರತೆ ಉಂಟಾಗದಂತೆ ಜನರನ್ನು ಈಗಿಂದಲೇ ನೀರಿನ ಉಳಿತಾಯಕ್ಕೆ ಅಣಿಗೊಳಿಸುವುದು ಇದರ ಉದ್ದೇಶ. ಈ ಸಂಬಂಧ ಜಿಲ್ಲೆಯಲ್ಲಿ 5 ಸಾವಿರ ಮನೆಗಳನ್ನು ತಲುಪುವ ಗುರಿ ಹೊಂದಲಾಗಿದೆ. ಈಗಾಗಲೇ ಕೆಲವು ಪ್ಲಂಬರುಗಳನ್ನು ಸಂಪರ್ಕಿಸಿ ‘ಮಳೆ ನೀರು ಸಂರಕ್ಷಣೆಯೊಂದಿಗೆ ಈ ವಾರಾಂತ್ಯ’ ಎಂಬ ಘೋಷವಾಕ್ಯದೊಂದಿಗೆ ಮಳೆ ಕೊಯ್ಲು ಕಾರ್ಯಕ್ರಮ ನಡೆಸಲು ಯೋಜಿಸಲಾಗಿದೆ.


ಮಳೆ ಬಿದ್ದ ಮಾತ್ರಕ್ಕೆ ಮುಂದಿನ ಬೇಸಗೆಯಲ್ಲಿ ನೀರಿನ ಕೊರತೆ ತಪ್ಪದು. ಅದಕ್ಕಾಗಿ ಪ್ರತಿಯೊಬ್ಬರೂ ಜಲಸಾಕ್ಷರರಾಗಬೇಕು. ಈ ಹಿನ್ನೆಲೆಯಲ್ಲೇ ‘ಜಲ ಜನ ಸಂಪರ್ಕ ಸೇತು’ ಅಭಿಯಾನ ಆರಂಭಗೊಂಡಿದೆ. ‘ಇರುವ ನೀರನ್ನು ವ್ಯರ್ಥ ಮಾಡದೇ ಉಪಾಯದಿಂದ ಬಳಸಲು ಪ್ರೇರೇಪಿಸಲು ಈ ಅಭಿಯಾನ. ವಾರದ ಕೊನೆಯ ದಿನದಂದು ಮನೆ ಮನೆಗಳಿಗೆ ತೆರಳಿ ಕರಪತ್ರ ಹಂಚಿ ಕಾರ್ಯಕರ್ತರು ನೀರು ಸಂರಕ್ಷಿಸಲು ಅರಿವು ಮೂಡಿಸುತ್ತಿದ್ದಾರೆ. ಸಾರ್ವಜನಿಕರೂ ಇದರಲ್ಲಿ ಪಾಲ್ಗೊಳ್ಳಬಹುದು’ ಎನ್ನುತ್ತಾರೆ ಯುವಾ ಬ್ರಿಗೇಡ್‌ನ‌ ನಿತ್ಯಾನಂದ ವಿವೇಕವಂಶಿ.

ಕರಪತ್ರದಲ್ಲೇನಿದೆ?
ಸ್ನಾನ ಮಾಡಲು ನೀರನ್ನು ವ್ಯರ್ಥ ಮಾಡದೇ ಒಂದು ಬಕೆಟ್‌ಗೆ ಸೀಮಿತಗೊಳಿಸೋಣ. ವಾಟರ್‌ ಪ್ಯೂರಿಫಯರ್‌ನಿಂದ ಹೊರ ಬರುವ ನೀರನ್ನು ಸಿಂಕ್‌ಗೆ ಬಿಡದೇ ಪಾತ್ರೆ ತೊಳೆಯಲು ಬಳಸೋಣ. ಸೋರುತ್ತಿರುವ ನಲ್ಲಿಗಳನ್ನು ಮತ್ತು ಫ್ಲಶ್‌ ಟ್ಯಾಂಕ್‌ಗಳನ್ನು ತತ್‌ಕ್ಷಣ ದುರಸ್ತಿ ಮಾಡಿಸೋಣ. ಶೌಚಾಲಯದ ಬಳಕೆಗೆ ಕಮೋಡ್‌ಗಿಂತ ಇಂಡಿಯನ್‌ ಟಾಯ್ಲೆಟ್‌ ಬಳಸೋಣ. ಸಂಪ್‌ ಅಥವಾ ಕೊಳವೆ ಬಾವಿಯಿಂದ ನೀರನ್ನು ಓವರ್‌ ಹೆಡ್‌ ಟ್ಯಾಂಕ್‌ಗೆ ಪಂಪ್‌ ಮಾಡುವಾಗ ಟ್ಯಾಂಕ್‌ ತುಂಬಿ ಸುರಿಯದಂತೆ ಎಚ್ಚರ ವಹಿಸೋಣ – ಇತ್ಯಾದಿ ಸಲಹೆಗಳಿವೆ.

ಪ್ರಧಾನಿ ಗಮನ ಸೆಳೆದ ಕಲ್ಯಾಣಿ ಸ್ವಚ್ಛತೆ
ಯುವಾ ಬ್ರಿಗೇಡ್‌ ಎರಡೂವರೆ ವರ್ಷಗಳಿಂದ ರಾಯಚೂರು, ಗದಗ, ಮೈಸೂರು ಸೇರಿದಂತೆ ಒಟ್ಟು 100ಕ್ಕೂ ಹೆಚ್ಚು ಕಲ್ಯಾಣಿಗಳನ್ನು ಪುನರುಜ್ಜೀವನಗೊಳಿಸಿದೆ. ಇಂತಹ ಕಲ್ಯಾಣಿಗಳಲ್ಲಿ ಜೀವಜಲ ತುಂಬಿ ಅಲ್ಲಿನ ಜನಜೀವನಕ್ಕೆ ಸಹಾಯವಾಗಿದೆ. ಈ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಮನ್‌ ಕೀ ಬಾತ್‌ ಕಾರ್ಯಕ್ರಮದಲ್ಲೂ ಉಲ್ಲೇಖೀಸಿ ಶ್ಲಾಘಿಸಿದ್ದರು.

ತಮಿಳು – ಕನ್ನಡಿಗರ ಬೆಸೆಯಲು ‘ಮೈಟ್ರೀ’
ಕಾವೇರಿ ಜಲಾನಯನದಲ್ಲಿ ಮಳೆ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಎರಡೂ ರಾಜ್ಯಗಳಲ್ಲಿ ಜಲ ಕದನ ನಡೆಯದಂತೆ ಜಾಗೃತಿ ಮೂಡಿಸಿ ತಮಿಳುನಾಡಿನ ಯುವ ಜನರನ್ನೂ ಸೇರಿಸಿಕೊಂಡು ಕುಶಾಲನಗರದಲ್ಲಿ ಈ ಹಿಂದೆ ‘ಮೈಟ್ರೀ’ ಕಾವೇರಿ ಸ್ವಚ್ಛತೆ ಕಾರ್ಯವನ್ನು ಕೈಗೆತ್ತಿಕೊಂಡಿತ್ತು. ತಮಿಳು -ಕನ್ನಡಿಗರ ಮತ್ತು ಭೂಮಿ – ಆಕಾಶಗಳ ನಡುವಣ ಮರದ ಸಂಬಂಧ ಎಂಬ ಧ್ಯೇಯೋದ್ದೇಶದೊಂದಿಗೆ ಕಾವೇರಿ ಸ್ವಚ್ಛತೆ ನಡೆಸಿತ್ತು.

ಮಳೆ ಕೊಯ್ಲು, ಜಲಮರುಪೂರಣ
ಜಿಲ್ಲೆಯಲ್ಲಿ ಸುಮಾರು 5 ಸಾವಿರ ಮನೆಗಳಿಗೆ ಜಲ ಜನ ಕಾರ್ಯಕ್ರಮದ ಬಗ್ಗೆ ತಿಳಿಸುವ ಕರಪತ್ರ ತಲುಪಿಸಲಾಗುವುದು. ಈಗಾಗಲೇ ಕೆಲ ಪ್ಲಂಬರುಗಳನ್ನು ಸಂಪರ್ಕಿಸಿದ್ದು, ವಾರಾಂತ್ಯದಲ್ಲಿ ಕೆಲವೆಡೆ ಮಳೆ ಕೊಯ್ಲು, ಜಲಮರುಪೂರಣ ಕಾರ್ಯಕ್ರಮ ನಡೆಸುವ ಬಗ್ಗೆ ಯೋಜನೆ ಹಾಕಿಕೊಂಡಿದ್ದೇವೆ. ಶಾಲೆಗಳಲ್ಲಿ ಮಕ್ಕಳಿಗೆ ಜಲ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸಬೇಕಿದೆ.
– ತಿಲಕ್‌ ಶಿಶಿಲ, ಜಿಲ್ಲಾ ಸಹ ಸಂಚಾಲಕ,ಯುವಾಬ್ರಿಗೇಡ್‌

– ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.