ಪೊಲೀಸರೂ ಪ್ರತಿಭೆ ಪ್ರದರ್ಶಿಸಲಿ

•ಮನಸ್ಸಿನ ಭಾವ ಹೇಳಿಕೊಳ್ಳುವ ಮಾಧ್ಯಮವೇ ಕವಿತೆ: ಆನಂದ

Team Udayavani, Aug 18, 2019, 1:09 PM IST

18-Agust-27

ದಾವಣಗೆರೆ: ಡಿವೈಎಸ್ಪಿ ಡಾ| ದೇವರಾಜ್‌ ರಚಿಸಿದ ಕವನ ಸಂಕಲನವನ್ನು ಎಸ್‌ಪಿ ಹನುಮಂತರಾಯ ಬಿಡುಗಡೆಗೊಳಿಸಿದರು.

ದಾವಣಗೆರೆ: ಪೊಲೀಸ್‌ ಇಲಾಖೆಯಲ್ಲಿ ಸಾಕಷ್ಟು ಪ್ರತಿಭಾವಂತರಿದ್ದು, ಅವರೆಲ್ಲರೂ ಮುಖ್ಯವಾಹಿನಿಗೆ ಬರಬೇಕಿದೆ ಎಂದು ಜಿಲ್ಲಾ ಪೋಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ ಹೇಳಿದ್ದಾರೆ.

ಶನಿವಾರ ನಗರದ ಸೋಮೇಶ್ವರ ವಿದ್ಯಾಲಯದ ಮಂಜೂಷ ಸಭಾಂಗಣದಲ್ಲಿ ಡಿವೈಎಸ್ಪಿ ಡಾ| ಬಿ. ದೇವರಾಜ್‌ ರಚಿಸಿದ ಅಮೃತದ ಒರತೆ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಶು ವೈದ್ಯಕೀಯದಲ್ಲಿ ಪದವಿ ಪಡೆದ ಡಾ| ದೇವರಾಜ್‌ ಪೊಲೀಸ್‌ ಇಲಾಖೆಗೆ ಸೇರಿದ್ದಾರೆ. ಅವರು ಇನ್ನೂ ಹೆಚ್ಚು ಹೆಚ್ಚು ಬರೆಯಲಿ ಎಂದು ಆಶಿಸಿದರು.

ನಮ್ಮ ಪೊಲೀಸ್‌ ಇಲಾಖೆಯಲ್ಲಿ ಬಹಳಷ್ಟು ಮಂದಿ ಪ್ರತಿಭಾವಂತರಿದ್ದಾರೆ. ಅವರೆಲ್ಲರನ್ನೂ ಪ್ರೋತ್ಸಾಹಿಸುವ ಅಗತ್ಯವಿದೆ. ಇತ್ತೀಚೆಗೆ ಪೊಲೀಸ್‌ ಇಲಾಖೆ ವತಿಯಿಂದ ಬೆಂಗಳೂರಿನಲ್ಲಿ ಪೊಲೀಸರಿಗಾಗಿಯೇ ಕವಿಗೋಷ್ಠಿ ಆಯೋಜಿಸಲಾಗಿತ್ತು. ಅದೇ ರೀತಿ ದಾವಣಗೆರೆಯಲ್ಲಿಯೂ ಸಹ ಮುಂದಿನ ದಿನಗಳಲ್ಲಿ ಏರ್ಪಡಿಸಲಾಗುವುದು ಎಂದು ಹೇಳಿದರು.

ಉಡುಪಿಯ ಕರಾವಳಿ ಕಾವಲು ಪಡೆ ಪೊಲೀಸ್‌ ಅಧೀಕ್ಷಕ ಆರ್‌.ಚೇತನ್‌ ಮಾತನಾಡಿ, ಡಾ| ಬಿ. ದೇವರಾಜ್‌ ಬಹುಮುಖೀ ಪ್ರತಿಭೆ. ಎಲ್ಲ ರಂಗಗಳಲ್ಲೂ ಆಸಕ್ತಿ ಹೊಂದಿರುವ ಅವರು ತಾಯಿ, ಪ್ರೀತಿ, ಪ್ರೇಮ, ಪ್ರಕೃತಿ, ದೇಶಪ್ರೇಮ ಹೀಗೆ ಹಲವು ವಿಷಯಗಳ ಬಗ್ಗೆ ತಮ್ಮ ಕವಿತೆಗಳಲ್ಲಿ ವ್ಯಕ್ತಪಡಿಸಿದ್ದಾರೆ. ಪೊಲೀಸ್‌ ಇಲಾಖೆಯವರು ಒಂದೇ ರೀತಿ ಇರುತ್ತಾರೆ ಎಂಬುದಾಗಿ ಸಮಾಜ ಭಾವಿಸುತ್ತದೆ. ಪೊಲೀಸರು ಮಾತ್ರವಲ್ಲ ವೈದ್ಯರು, ಉಪನ್ಯಾಸಕರು ಹೀಗೆ ಇವರೆಲ್ಲ ಹೀಗೆ ಇರಬೇಕು ಎಂದು ಸಮಾಜ ಬಯಸುತ್ತದೆ. ಅದನ್ನು ಮೀರಿದವರು ದೇವರಾಜ್‌. ಇಲಾಖೆಯಲ್ಲಿ ಇರುವ ಎಲ್ಲ ಪ್ರತಿಭೆಗಳಿಗೆ ಅವರು ಮಾದರಿಯಾಗಲಿ. ಅವರ ಅಮೃತ ಒರತೆ ಕವನ ಸಂಕಲನಕ್ಕೆ ನಾನೇ ಮುನ್ನುಡಿ ಬರೆದಿರುವೆ. ಮುಂದೆ ಕೂಡ ಅವರು ಸಾಕಷ್ಟು ಕೃತಿಗಳನ್ನು ರಚಿಸಲಿ ಎಂದು ಹಾರೈಸಿದರು.

ಸಾಹಿತಿ,ಕವಿ ಆನಂದ ಋಗ್ವೇದಿ ಮಾತನಾಡಿ, ಮನಸ್ಸಿನ ಭಾವ ಹೇಳಿಕೊಳ್ಳುವ ಮಾಧ್ಯಮವೇ ಕವಿತೆ. ಇಲ್ಲಿ ಪ್ರೀತಿ, ಸಂಕಟ, ಬಡತನ ಎಲ್ಲವನ್ನೂ ಒಳಗೊಂಡ ಮನುಷ್ಯ ಪ್ರೀತಿಯ ಕವಿತೆಗಳು ಇವಾಗಿವೆ ಎಂದು ಹೇಳಿದರು.

ವಿಧಾನ ಪರಿಷತ್‌ ಮಾಜಿ ಮುಖ್ಯಸಚೇತಕ ಡಾ.ಎ.ಎಚ್ ಶಿವಯೋಗಿಸ್ವಾಮಿ, ಜಾನಪದ ತಜ್ಞ ಡಾ| ಎಂ.ಜಿ ಈಶ್ವರಪ್ಪ, ಹಿರಿಯ ಪತ್ರಕರ್ತ ಬಿ.ಎನ್‌ ಮಲ್ಲೇಶ್‌, ಸೋಮೇಶ್ವರ ವಿದ್ಯಾಲಯದ ಕೆ.ಎಂ ಸುರೇಶ್‌ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.