ಆಗ್ತಿಲ್ಲ ಟಿಕೆಟ್‌ ಕನ್ಫರ್ಮ್..ಹೆಚ್ಚುತ್ತಿದೆ ಟೆನ್ಷ್ನ್‌


Team Udayavani, Oct 30, 2019, 11:28 AM IST

Udayavani Kannada Newspaper

„ರಾ. ರವಿಬಾಬು
ದಾವಣಗೆರೆ:
ನ.12 ರಂದು ನಡೆಯಲಿರುವ ದಾವಣಗೆರೆ ಮಹಾನಗರ ಪಾಲಿಕೆಯ ಚುನಾವಣೆ ನಾಮಪತ್ರ ಸಲ್ಲಿಕೆಗೆ ಕೆಲವೇ ಗಂಟೆಗಳು ಬಾಕಿ ಇದ್ದರೂ ಪಕ್ಷದ ಟಿಕೆಟ್‌ ಕನ್ಫರ್ಮ್… ಆಗದೇ ಇರುವುದು ಅನೇಕ ಸ್ಪರ್ಧಾಕಾಂಕ್ಷಿಗಳನ್ನುಚಿಂತೆಗೀಡು ಮಾಡಿದೆ.

ಅ.27 ರಿಂದ ಪ್ರಾರಂಭವಾಗಿರುವ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಅ.31ಕ್ಕೆ ಮುಕ್ತಾಯ ಆಗಲಿದೆ. ನಾಮಪತ್ರ ಸಲ್ಲಿಕೆಗೆ ಕೆಲ ಗಂಟೆಗಳ ಸಮಯಾವಕಾಶ ಇದೆ. ಪಕ್ಷಗಳ ಮುಖಂಡರು ಈವರೆಗೆ ಟಿಕೆಟ್‌ ಖಚಿತ ಪಡಿಸುವ ಜೊತೆಗೆ ಬಿ-ಫಾರಂ ನೀಡುವ ಬಗ್ಗೆ ಸುಳಿವು ಸಹ ನೀಡದೇ ಇರುವುದು ಆಕಾಂಕ್ಷಿಗಳಲ್ಲಿ ತಳಮಳಕ್ಕೆ ಕಾರಣವಾಗುತ್ತಿದೆ.

ಮಹಾನಗರ ಪಾಲಿಕೆಗೆ ದಿಢೀರ್‌ ಚುನಾವಣೆ ಘೋಷಣೆ ಆಗುತ್ತಿದ್ದಂತೆ ಇರುವ ಕಾಲಾವಧಿಯಲ್ಲೇ ಟಿಕೆಟ್‌, ನಾಮಪತ್ರ ಸಲ್ಲಿಕೆಗೆ ಅಗತ್ಯ ದಾಖಲೆ ಸಿದ್ಧತೆಯಲ್ಲಿ ತೊಡಗಿಸಿಕೊಂಡಿರುವ ಆಕಾಂಕ್ಷಿಗಳು ರಾಜಕೀಯ ಪಕ್ಷಗಳ ಮುಖಂಡರು ಇನ್ನೂ ಟಿಕೆಟ್‌ ಖಚಿತಪಡಿಸದೇ ಇರುವ ಕಾರಣಕ್ಕೆ ದ್ವಂದ್ವದಲ್ಲಿದ್ದಾರೆ.

ನಾಮಪತ್ರ ಸಲ್ಲಿಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡು ಕೊನೆಯ ಗಳಿಗೆಯಲ್ಲಿ ಬೇರೆಯವರಿಗೆ ಬಿ-ಫಾರಂ ನೀಡಿದರೆ ಹೇಗೆ ಎಂಬ ಚಿಂತೆ ಒಂದು ಕಡೆಯಾದರೆ, ಬಿ-ಫಾರಂ ನೀಡಿದ ತಕ್ಷಣ ನಾಮಪತ್ರ ಸಲ್ಲಿಸಲು ಅಗತ್ಯ ದಾಖಲೆ ಸಿದ್ಧಪಡಿಸಿಕೊಳ್ಳುವ ಯೋಚನೆ ಮತ್ತೂಂದು ಕಡೆ. ಹಾಗಾಗಿ ಎಲ್ಲರೂ ಚಾತಕ ಪಕ್ಷಿಗಳಂತೆ ಬಿ-ಫಾರಂಗೆ ಕಾಯುವಂತಾಗಿದೆ.

ತರಾತುರಿಯಲ್ಲಿ ಚುನಾವಣೆ ಘೋಷಣೆಯಿಂದ ಅನೇಕ ಆಕಾಂಕ್ಷಿಗಳು ಮೀಸಲಾತಿ ಆಧರಿಸಿ ಸೂಕ್ತ ವಾರ್ಡ್‌ ಕಂಡು ಕೊಳ್ಳಲು ಪ್ರಯತ್ನ ನಡೆಸಿ, ಕೊನೆಗೂ ಅಳೆದು ತೂಗಿ ವಾರ್ಡ್‌ ಗುರುತಿಸಿಕೊಂಡು ಮುಖಂಡರಿಗೆ ಟಿಕೆಟ್‌ಗೆ ಮನವಿ ಮಾಡಿಕೊಂಡಿದ್ದಾರೆ. ಆದರೆ, ನಾಮಪತ್ರ ಸಲ್ಲಿಕೆ ಕೊನೆಯ ದಿನ ಹತ್ತಿರವಾಗುತ್ತಿದ್ದರೂ ಯಾವುದೇ ರೀತಿಯಲ್ಲಿನ ಹಸಿರು ನಿಶಾನೆ… ದೊರೆಯದೇ ಇರುವುದು ಆಕಾಂಕ್ಷಿಗಳಲ್ಲಿ ಕಳವಳಕ್ಕೆಡೆ ಮಾಡಿಕೊಟ್ಟಿದೆ.

ಮಹಾನಗರ ಪಾಲಿಕೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡೇ ವಾರ್ಡ್‌ ಗಳಲ್ಲಿ ಕೆಲಸ ಮಾಡಿದವರಿಗೆ ಮುಖಂಡರ ಜಾಣಮೌನ… ಬಿಸಿ ತುಪ್ಪವಾಗುತ್ತಿದೆ. ನುಂಗುವಂತೆಯೂ ಇಲ್ಲ. ಉಗುಳುವಂತೆಯೂ ಇಲ್ಲ ಎನ್ನುವಂತಾಗಿದೆ. ಬಿ-ಫಾರಂಗಾಗಿ ಮುಖಂಡರಿಗೆ ಪದೆ ಪದೇ ಫೋನಾಯಿಸುವುದು ಸಾಮಾನ್ಯವಾಗಿದೆ.

ಆದರೂ, ದೊರೆಯಲೇಬೇಕಾದ ಸಮ್ಮತಿ… ದೊರೆಯದೇ ಇರುವುದು ಅನೇಕರ ಬೇಗುದಿಗೆ ಕಾರಣವಾಗಿದೆ. ಟಿಕೆಟ್‌ಗಾಗಿ ನಮ್‌ ಪಾರ್ಟಿ ಮುಖಂಡರಿಗೆ ಬೆಳಗ್ಗೆ, ಮಧ್ಯಾಹ್ನ, ಸಾಯಂಕಾಲ, ರಾತ್ರಿ… ಹಿಂಗೆ ಬಿಟ್ಟು ಬಿಡದೆ ಫೋನ್‌ಮಾಡುತ್ತಲೇ ಇದ್ದೇವೆ. ಈವರೆಗೆ ಯಾವುದಕ್ಕೂ ಏನೇನೂ ಹೇಳುತ್ತಿಲ್ಲ. ಟಿಕೆಟ್‌ ಕೊಟ್ಟೇ ಕೊಡುತ್ತಾರೆ ಎಂದು ಹೇಳುವಂತೆ ಇಲ್ಲ. ಕೊಡೊಲ್ಲ…ಎಂದು ಸುಮ್ಮನಿರುವಂತೆಯೂ ಇಲ್ಲ. ಟಿಕೆಟ್‌ ಬಗ್ಗೆ ಇನ್ನೂ ಏನೂ ಎಂಬುದೇ ಗೊತ್ತಾಗುತ್ತಿಲ್ಲ. ಅದೇ ಕಾರಣಕ್ಕೆ ದೀಪಾವಳಿ ಹಬ್ಬ ಮಾಡೋಕೂ ಮನಸ್ಸೇ ಇಲ್ಲದಂತಾಗಿದೆ ಎಂದು ಕೆಲವರು ಅಲವತ್ತುಕೊಳ್ಳುತ್ತಾರೆ.

ಕಳೆದ ವಿಧಾನ ಸಭೆ, ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಕೆಲಸ ಮಾಡಿದ್ದೇವೆ. ಯಾವುದೇ ಕಾರ್ಯಕ್ರಮ, ಪ್ರತಿಭಟನೆ, ಏನೇ ಇರಲಿ ನಿಂತಿದ್ದು ಕೆಲಸ ಮಾಡಿದ್ದೇವೆ. ಸಮಯ ಬಂದಾಗ ಫ್ಲೆಕ್ಸ್‌, ಬ್ಯಾನರ್‌ ಕಟ್ಟಿದ್ದೇವೆ. ನಮ್ಮ ಪಕ್ಷ ಅಂತ ಮನೆ-ಮಠ ಎಲ್ಲಾ ಬಿಟ್ಟು ಓಡಾಡಿದ್ದೇವೆ. ನಮ್ಮ ಮುಖಂಡರಿಗೆ ಎಲ್ಲವೂ ಗೊತ್ತು. ಕೆಲಸ ಮಾಡಿರೋದು ನೋಡಿದ್ದಾರೆ. ಆದರೂ, ಟಿಕೆಟ್‌ ನಿನಗೆ… ಎಂದು ಹೇಳುತ್ತಿಲ್ಲ. ಹಾಗಾಗಿ ಬಹಳ ಬೇಜಾರು ಆಗುತ್ತಿದೆ. ಆದರೂ, ಬಿ-ಫಾರಂ ಕೊಡುತ್ತಾರೆ ಎಂಬ ವಿಶ್ವಾಸ ಇದೆ. ಕೊಟ್ಟರೂ, ಬಿಟ್ಟರೂ ಪಕ್ಷದ ಕೆಲಸ ಮಾಡಿಕೊಂಡು ಹೋಗುತ್ತೇವೆ ಎಂದು ಕೆಲವರು ಹೇಳುತ್ತಾರೆ.

ಕೆಲವರಿಗೆ ಟಿಕೆಟ್‌ ಕನ್ಫರ್ಮ್…ಆಗಿದ್ದು ಈಗಾಗಲೇ ವಾರ್ಡ್‌ಗಳಲ್ಲಿ ಸಣ್ಣ ಮಟ್ಟದ ಪ್ರಚಾರ ಮಾಡುತ್ತಿದ್ದಾರೆ. ಕೆಲವರು ಟಿಕೆಟ್‌ ದೊರೆತೇ ತೀರುತ್ತದೆ ಎಂಬ ವಿಶ್ವಾಸದೊಂದಿಗೆ ವಾರ್ಡ್‌ ಸುತ್ತಾಟದಲ್ಲಿದ್ದಾರೆ. ಇನ್ನು ಕೆಲವರು ಏನು ಮಾಡಬೇಕು… ಎಂಬ ಗೊಂದಲದಲ್ಲಿ ಇದ್ದಾರೆ.

ಬಹುತೇಕ ಟಿಕೆಟ್‌ ಕನ್ಫರ್ಮ್ ಇಲ್ಲದವರು ನಿಧಾನವಾಗಿ ಇತರೆ ಪಕ್ಷಗಳತ್ತ ಚಿತ್ತ ಹರಿಸಿದ್ದಾರೆ. ಮತ್ತೆ ಕೆಲವರು ಇಂಡಿ  ಪೆಂಡೆಂಟ್‌.. ಆಗಿ ಕಣಕ್ಕಿಳಿಯುವ ಬಗ್ಗೆಯೂ ಯೋಚನೆ ಮಾಡುತ್ತಿದ್ದಾರೆ. ಪಕ್ಷದ ಸಾಕಷ್ಟು ಕೆಲಸ ಮಾಡಿಯೂ ಟಿಕೆಟ್‌ ಕೊಡದೇ ಇದ್ದಲ್ಲಿ ಕೆಲವರು ಹೈಕಮಾಂಡ್‌, ಮುಖಂಡರ ಎಡ ತಾಕುವ ಸಿದ್ಧತೆ ಮಾಡಿಕೊಂಡಿದ್ದಾರೆ.  ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ಇರುವ ಕೆಲ ಆಕಾಂಕ್ಷಿಗಳು ಮೊದಲಿಗೆ ಪಕ್ಷದ ಬಿ-ಫಾರಂ… ಪರೀಕ್ಷೆಯಲ್ಲಿ ಗೆಲ್ಲಬೇಕಾಗಿದೆ.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.