ಮಹಾನಗರ ಪಾಲಿಕೆ ಚುನಾವಣೆಗೆ ನ.12ರ ಮುಹೂರ್ತ ಫಿಕ್ಸ್‌


Team Udayavani, Oct 21, 2019, 11:21 AM IST

21-October-2

ದಾವಣಗೆರೆ: ನಡು ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆಯ ಮಹಾನಗರ ಪಾಲಿಕೆಯ ಮೂರನೇ ಚುನಾವಣೆ ನ.12 ರಂದು ನಿಗದಿಯಾಗಿದೆ. 2007 ರ ಜ.6 ರಂದು ನಗರಸಭೆಯಿಂದ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿದ ನಂತರ 2008 ಮತ್ತು 2013 ರಲ್ಲಿ ಪುರಪಿತೃಗಳ ಆಯ್ಕೆ ಸಂಬಂಧ ಚುನಾವಣೆ ನಡೆದಿತ್ತು.

2008ರಲ್ಲಿ ಮಹಾನಗರ ಪಾಲಿಕೆಗೆ ನಡೆದ ಮೊದಲ ಚುನಾವಣೆಯಲ್ಲಿ ಬಿಜೆಪಿ ಅತ್ಯಧಿಕ ಸ್ಥಾನಗಳಿಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. 15ನೇ ವಾರ್ಡ್‌ನ ಎಂ. ಮಾದಮ್ಮ ಮುನಿಸ್ವಾಮಿ ಮೊಟ್ಟ ಮೊದಲ ಮೇಯರ್‌ ಆಗಿದ್ದರು.

2013ರಲ್ಲಿ ನಡೆದ ಎರಡನೇ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ 41 ಸ್ಥಾನಗಳಲ್ಲಿ ಒಂದೇ ಒಂದು ಸ್ಥಾನ ಪಡೆಯುವ ಮೂಲಕ ಧೂಳಿಪಟವಾಗಿತ್ತು.
36 ಸ್ಥಾನ ಪಡೆದಿದ್ದ ಕಾಂಗ್ರೆಸ್‌ಗೆ ಪಕ್ಷೇತರರು ಸೇರ್ಪಡೆಗೊಂಡ ಪರಿಣಾಮ ದಾಖಲೆಯ ಸಂಖ್ಯಾಬಲದೊಂದಿಗೆ ಆಡಳಿತ ನಡೆಸಿತ್ತು. 2013ರಲ್ಲಿ ಚುನಾವಣೆ ನಡೆದಿದ್ದರೂ ಕೆಲವರು ಮೀಸಲಾತಿ ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದ ಪರಿಣಾಮ ಕಾಂಗ್ರೆಸ್‌ ಅಧಿಕಾರ ನಡೆಸಲು ಒಂದು ವರ್ಷ ಕಾಯಬೇಕಾಯಿತು.

15ನೇ ವಾರ್ಡ್‌ ಪ್ರತಿನಿಧಿಸುತ್ತಿದ್ದ ರೇಣುಕಾ ಬಾಯಿ ವೆಂಕಟೇಶ್‌ ಕಾಂಗ್ರೆಸ್‌ ಕಡೆಯಿಂದ ಮೊದಲ ಮೇಯರ್‌ ಆಗಿದ್ದರು. ಈಗ ಮೂರನೇ ಬಾರಿಯ ಚುನಾವಣೆಯ ಲೆಕ್ಕಾಚಾರ ಬಹಳ ದಿನಗಳಿಂದ ನಡೆಯುತ್ತಲೇ ಇದೆ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿರುವ ಕಾರಣಕ್ಕೆ ಕಮಲ ಪಾಳೆಯದಲ್ಲಿ ನಗರಪಾಲಿಕೆಯ ಅಧಿಕಾರದ ಚುಕ್ಕಾಣಿ ಹಿಡಿಯುವ ಆಸೆ ಸಹಜವಾಗಿಯೇ ಗರಿಗೆದರಿದೆ. ದಾವಣಗೆರೆ ಉತ್ತರದಲ್ಲಿ ಬಿಜೆಪಿಯ ಎಸ್‌.ಎ.
ರವೀಂದ್ರನಾಥ್‌, ದಕ್ಷಿಣದಲ್ಲಿ ಹಿರಿಯ ಕಾಂಗ್ರೆಸ್ಸಿಗ ಶಾಮನೂರು ಶಿವಶಂಕರಪ್ಪ ಶಾಸಕರಾಗಿರುವುದು ಮತ್ತಷ್ಟು ಜಿದ್ದಾಜಿದ್ದಿಗೆ ಕಾರಣವಾಗಿದೆ.

ತಲಾ ಒಮ್ಮೊಮ್ಮೆ ಅಧಿಕಾರ ನಡೆಸಿರುವ ಬಿಜೆಪಿ ಮತ್ತು ಕಾಂಗ್ರೆಸ್‌ ತಮ್ಮ ಸಾಧನೆ ಮುಂದಿಟ್ಟುಕೊಂಡು ಮತದಾರ ಪ್ರಭುಗಳ ಮುಂದೆ ತೆರಳುವ ಲೆಕ್ಕಾಚಾರ ಹಾಕಿಕೊಂಡಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ನಡೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಉತ್ತರ ವಿಧಾನಸಭಾ ಕ್ಷೇತ್ರದ ನಿಬ್ಬೆರಗಾಗಿಸುವ ಫಲಿತಾಂಶ ಬಿಜೆಪಿಯ ಆಸೆ ಹೆಚ್ಚುವಂತೆ ಮಾಡಿದೆ.

ಲೋಕಸಭೆ, ವಿಧಾನಸಭೆ ಫಲಿತಾಂಶ ಮುಂದುವರೆಸುವ ಇರಾದೆಯೊಂದಿಗೆ ಬಿಜೆಪಿ ದಂಡು ಕೆಲಸ ಮಾಡುತ್ತಿದೆ. ಸಂಸದ ಜಿ.ಎಂ. ಸಿದ್ದೇಶ್ವರ್‌, ಶಾಸಕ ಎಸ್‌.ಎ. ರವೀಂದ್ರನಾಥ್‌ ಮುಖಂಡರ ನೇತೃತ್ವದಲ್ಲಿ ಕಸರತ್ತು ಈಗ ಮುಂಚೂಣಿಗೆ ಬಂದಿದೆ.

ಕಳೆದ ಅವಧಿಯಲ್ಲಿನ ಸಾಧನೆಯ ಪಟ್ಟಿಯೊಂದಿಗೆ ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೇರುವ ಬಿರುಸಿನ ಪ್ರಯತ್ನ ನಡೆಸುತ್ತಿದೆ. ಶಾಸಕ ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಸಾರಥ್ಯದಲ್ಲಿ ಭರ್ಜರಿ ಜಯಗಳಿಸಿದ್ದ ಕಾಂಗ್ರೆಸ್‌ ಈಗ ಅದೇ ಉಮೇದಿನಲ್ಲಿದೆ.

ಅ.24 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿ, ನ.4ರಂದು ನಾಮಪತ್ರ ಹಿಂದಕ್ಕೆ ಪಡೆಯುವ ತನಕ ಲೆಕ್ಕಾಚಾರ ನಡೆಯುತ್ತಲೇ ಇರುತ್ತದೆ. ಆ ನಂತರವೇ ಅಸಲಿ ಸೆಣಸಾಟ ಪ್ರಾರಂಭವಾಗಲಿದೆ.12ಕ್ಕೆ ಚುನಾವಣೆ ನಡೆದು 14ಕ್ಕೆ ದಾವಣಗೆರೆ ಮಹಾನಗರ ಪಾಲಿಕೆ ಅಧಿಕಾರದ ಚುಕ್ಕಾಣಿ ಹಿಡಿಯುವರು ಯಾರೂ ಎಂಬುದು ಪಕ್ಕಾ ಆಗಲಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.