ಬಹುಮತದ ಸರ್ಕಸ್‌ ಸರ್ಕಸ್‌!

45ನೇ ವಾರ್ಡ್‌ ಸದಸ್ಯ ಉದಯಕುಮಾರ್‌ ಕಾಂಗ್ರೆಸ್‌ಗೆಹಸ್ತಕ್ಕೆ ದಕ್ಕಿದ ಮ್ಯಾಜಿಕ್‌ ನಂಬರ್‌

Team Udayavani, Nov 20, 2019, 11:38 AM IST

20-November-3

ಎನ್‌.ಆರ್‌.ನಟರಾಜ್‌
ದಾವಣಗೆರೆ:
ಅತಂತ್ರ ಫಲಿತಾಂಶದಿಂದಾಗಿ ದಾವಣಗೆರೆ ಮಹಾನಗರಪಾಲಿಕೆ ಅಧಿಕಾರ ಚುಕ್ಕಾಣಿ ಹಿಡಿಯಲು ನಡೆಯುತ್ತಿದ್ದ ಕಸರತ್ತಲ್ಲಿ ಸದ್ಯ ಕೈ ಪಡೆ ಮೇಲಾಗಿದ್ದು, ಪಕ್ಷೇತರ ಸದಸ್ಯ ಎಚ್‌. ಉದಯಕುಮಾರ್‌ ಬೆಂಬಲದಿಂದಾಗಿ ಕಾಂಗ್ರೆಸ್‌ನ ಸಂಖ್ಯಾಬಲ 23ಕ್ಕೇರಲಿದೆ.

ಮಹಾನಗರಪಾಲಿಕೆ ಚುನಾವಣೆಯಲ್ಲಿ ಅತಂತ್ರ ಫಲಿತಾಂಶದಿಂದಾಗಿ ಕಾಂಗ್ರೆಸ್‌-ಬಿಜೆಪಿ ಎರಡೂ ಪಕ್ಷಗಳೂ ಅಗತ್ಯವಿರುವ ಸರಳ ಬಹುಮತ ಪಡೆಯುವಲ್ಲಿ ವಿಫಲವಾಗಿದ್ದವು. ವಾರ್ಡ್‌ಗಳ ಪುನರ್‌ ವಿಂಗಡನೆಯಿಂದಾಗಿ 41ರಿಂದ 45ಕ್ಕೇರಿದ್ದ ಸದಸ್ಯ ಬಲದ ಮಹಾನಗರಪಾಲಿಕೆಯಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯಲು ಯಾವುದೇ ಪಕ್ಷ ಕನಿಷ್ಠ 23 ಸದಸ್ಯರ ಸಂಖ್ಯೆಯನ್ನು ಹೊಂದಬೇಕಿತ್ತು. ಆದರೆ, ಈ ಚುನಾವಣೆಯಲ್ಲಿ ದಾವಣಗೆರೆ ನಗರದ ಮತದಾರರು ಯಾರಿಗೂ ಸ್ಪಷ್ಟ ಒಲವು ವ್ಯಕ್ತಪಡಿಸಿರಲಿಲ್ಲ.

ಕಳೆದ ಅವಧಿಯಲ್ಲಿ 39 ಸದಸ್ಯರನ್ನು ಹೊಂದಿ ಆಡಳಿತ ನಡೆಸಿದ್ದ ಕಾಂಗ್ರೆಸ್‌ 22 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿ, ಅಧಿಕಾರಕ್ಕೆ ಓರ್ವ ಸದಸ್ಯನ ಕೊರತೆ ಎದುರಿಸುತ್ತಿತ್ತು. ಕಳೆದ ಬಾರಿ ಕೇವಲ ಒಂದು ವಾರ್ಡ್‌ನಲ್ಲಿ ಗೆದ್ದಿದ್ದ ಬಿಜೆಪಿ ಈ ಬಾರಿ 17 ಸದಸ್ಯರನ್ನು ಗೆಲ್ಲಿಸಿಕೊಂಡಿದ್ದರೂ ಅಧಿಕಾರ ಗದ್ದುಗೆ ಏರಲು ಇನ್ನೂ 6 ಮಂದಿ ಬೇಕಿತ್ತು. ಉಭಯ ಪಕ್ಷಗಳಿಂದ ಟಿಕೆಟ್‌ ಸಿಗದೇ ಪಕ್ಷೇತರರಾಗಿ ಜಯಗಳಿಸಿದ್ದ ಐವರನ್ನು ಸೆಳೆಯಲು ಮೂರ್‍ನಾಲ್ಕು ದಿನಗಳಿಂದ ಕೈ ಹಾಗೂ ಕಮಲ ಪಡೆಯಲ್ಲಿ ತೀವ್ರ ಕಸರತ್ತು ನಡೆಯುತ್ತಿತ್ತು. ಈ ಪ್ರಯತ್ನದಲ್ಲಿ ಕಾಂಗ್ರೆಸ್‌ ಯಶಸ್ವಿಯಾಗಿದ್ದು, 45ನೇ ವಾರ್ಡ್‌ನಲ್ಲಿ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ವಿಜಯ ಪತಾಕೆ ಹಾರಿಸಿದ್ದ ಎಚ್‌.ಉದಯಕುಮಾರ್‌ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಮಾಜಿ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌ ನಿವಾಸದಲ್ಲಿ ಪಕ್ಷದ ಮುಖಂಡರ ಸಮ್ಮುಖದಲ್ಲಿ ಉದಯಮುಕಾರ್‌ ಮರಳಿಗೂಡಿಗೆ ಬಂದಿದ್ದಾರೆ. ಹಾಗಾಗಿ ಅಧಿಕಾರ ಚುಕ್ಕಾಣಿ ಹಿಡಿಯಲು ಬೇಕಿದ್ದ ಮ್ಯಾಜಿಕ್‌ ನಂಬರ್‌ 23 ಕಾಂಗ್ರೆಸ್‌ಗೆ ದಕ್ಕಿಂತಾಗಿದೆ. ಐವರೂ ಪಕ್ಷೇತರ ಸದಸ್ಯರನ್ನು ಸೆಳೆದು ಈ ಬಾರಿ ಪಾಲಿಕೆ ಅಧಿಕಾರವನ್ನು ಕೈ ವಶ ಮಾಡಿಕೊಳ್ಳಲೇ ಬೇಕೆಂಬ ಪ್ರಯತ್ನದಲ್ಲಿದ್ದ ಬಿಜೆಪಿಗೆ ಈಗ ಹಿನ್ನೆಡೆಯಾಗಿದೆ.

ಬಾಕಿ ನಾಲ್ವರು ಪಕ್ಷೇತರ ಸದಸ್ಯರೂ ಸದ್ಯ ಯಾವ ಪಕ್ಷಕ್ಕೂ ತಮ್ಮ ಬೆಂಬಲ ವ್ಯಕ್ತಪಡಿಸಿಲ್ಲ. ಅವರು ಬಿಜೆಪಿ ಟಿಕೆಟ್‌ ಸಿಗದೇ ಬಂಡಾಯವಾಗಿ ಸ್ಪರ್ಧಿಸಿ, ಗೆದ್ದವರೇ. ಆ ನಾಲ್ವರೂ ಬಿಜೆಪಿ ಬೆಂಬಲಿಸಿದರೂ ಕಮಲ ಪಡೆ ಸದಸ್ಯ ಬಲ 21ಕ್ಕೇರಲಿದೆ. ಹಾಗಾಗಿ ಆ ಪಕ್ಷಕ್ಕೆ ಪಾಲಿಕೆ ಅಧಿಕಾರ ದೂರವಾದಂತಾಗಿದೆ. ಇನ್ನು ಸಂಸದ ಜಿ.ಎಂ. ಸಿದ್ದೇಶ್ವರ್‌ ಹಾಗೂ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌.ಎ.ರವೀಂದ್ರನಾಥ್‌ ಮತ ಸೇರಿ ಬಿಜೆಪಿ ಬಲ 23 ಆಗಲಿದೆ. ಅದರಂತೆ ಕಾಂಗ್ರೆಸ್‌ಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ವಿಧಾನ ಪರಿಷತ್‌ ಸದಸ್ಯ ಅಬ್ದುಲ್‌ ಜಬ್ಟಾರ್‌ ಮತ ದೊರೆಯುವುದರಿಂದ ಕೈ ಪಡೆ ಬಲ 25ಕ್ಕೇರಲಿದೆ. ಇನ್ನು ಪಾಲಿಕೆಯಲ್ಲಿ ಓರ್ವ ಮಹಿಳಾ ಸದಸ್ಯೆಯನ್ನು ಹೊಂದಿರುವ ಜೆಡಿಎಸ್‌ ಬೆಂಬಲ ಯಾರಿಗೆಂದು ಇನ್ನೂ ಸ್ಪಷ್ಟವಾಗಿಲ್ಲ.

ಏನಾದರೂ ಹೊಸ ಬೆಳವಣಿಗೆಯಾದಲ್ಲಿ ಮಾತ್ರ ಜೆಡಿಎಸ್‌ ಸದಸ್ಯೆ ಪಾತ್ರ ನಿರ್ಣಾಯಕವಾಗಬಹುದು. ಸದ್ಯ ಮ್ಯಾಜಿಕ್‌ ನಂಬರ್‌ ಪಡೆಯುವಲ್ಲಿ ಸಕ್ಸಸ್‌ ಆಗಿರುವ ಕೈ ಪಡೆಯಲ್ಲಿ ಉತ್ಸಾಹ ಕಾಣುತ್ತಿದೆ. ಆದರೆ, ರಾಜಕೀಯ ಚದುರಂಗದಾಟ ಹೇಳಲು ಬರುವುದಿಲ್ಲ. ಏನೇ ಆಗಲಿ ಪಾಲಿಕೆ ಅಧಿಕಾರ ಹಿಡಿಯಲೇಬೇಕೆಂಬ ಹಠಕ್ಕೆ ಬಿಜೆಪಿ ಮುಂದಾದಲ್ಲಿ ಆ ಪಕ್ಷದವರು ಮತ್ಯಾವ ತಂತ್ರಕ್ಕೆ ಮೊರೆ ಹೋಗಲಿದ್ದಾರೋ ಎಂಬುದನ್ನ ಕಾದು ನೋಡಬೇಕಿದೆ.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.