ಚಂದ್ರಗ್ರಹಣ ಎಫೆಕ್ಟ್, ನೋ ಸಿಜೇರಿಯನ್‌!

ಶಸ್ತ್ರಚಿಕಿತ್ಸೆಗಳು ಮುಂಚಿತವಾಗಿ ನಿಗದಿಯಾಗಿದ್ದರೂ ಗ್ರಹಣ ಕೆಟ್ಟದೆಂಬ ನಂಬಿಕೆಯಿಂದ ಒಬ್ಬರೂ ಬಂದಿಲ್ಲ

Team Udayavani, Jul 18, 2019, 10:26 AM IST

18-July-3

ದಾವಣಗೆರೆ: ಚಾಮರಾಜಪೇಟೆ ಮಹಿಳೆಯರು ಮತ್ತು ಮಕ್ಕಳ ಆಸ್ಪತ್ರೆಯ ಹೊರ ನೋಟ.

ರಾ.ರವಿಬಾಬು
ದಾವಣಗೆರೆ:
ಮಂಗಳವಾರ ಗುರುಪೂರ್ಣಿಮೆಯಂದು ಸಂಭವಿಸಿದ ಪಾರ್ಶ್ವ ಚಂದ್ರ ಗ್ರಹಣದ ನೇರ ಪರಿಣಾಮ ಸಿಜೇರಿಯಿನ್‌ ಶಸ್ತ್ರಚಿಕಿತ್ಸೆ ಮೇಲೆ ಉಂಟಾಗಿದೆ!.

ಅರೆ ಇದೇನಿದು? ಚಂದ್ರಗ್ರಹಣಕ್ಕೂ ಸಿಜೇರಿಯನ್‌ ಶಸ್ತ್ರಚಿಕಿತ್ಸೆಗೆ ಏನು ಸಂಬಂಧ? ಚಂದ್ರಗ್ರಹಣ ಹೇಗೆ ಸಿಜೇರಿಯನ್‌ ಶಸ್ತ್ರಚಿಕಿತ್ಸೆ ಮೇಲೆ ಹೇಗೆ ನೇರ ಪರಿಣಾಮ ಉಂಟು ಮಾಡುತ್ತದೆ ಎಂಬುದು ಆಶ್ಚರ್ಯ, ಪ್ರಶ್ನೆ ಮೂಡಿಸುತ್ತದೆ.

ಆದರೆ ಚಂದ್ರ ಗ್ರಹಣ ಸಿಜೇರಿಯನ್‌ ಶಸ್ತ್ರಚಿಕಿತ್ಸೆ ಮೇಲೆ ನೇರ ಪರಿಣಾಮ ಉಂಟು ಮಾಡಿದೆ ಎಂಬುದಕ್ಕೆ ದಾವಣಗೆರೆಯ ಚಾಮರಾಜಪೇಟೆ ವೃತ್ತದಲ್ಲಿರುವ ಮಹಿಳೆಯರು ಮತ್ತು ಮಕ್ಕಳ ಆಸ್ಪತೆ ್ರ(ಹಳೆ ಹೆರಿಗೆ ಆಸ್ಪತ್ರೆ) ಯಲ್ಲಿ ಒಂದೇ ಒಂದು ಸಿಜೇರಿಯನ್‌ ಶಸ್ತ್ರಚಿಕಿತ್ಸೆ ನಡೆಯದೇ ಇರುವುದು ಸಾಕ್ಷಿ.

ಅದೇ ಸಮಯದಲ್ಲಿ 7 ಸಾಮಾನ್ಯ ಹೆರಿಗೆ ಆಗಿವೆ. ಆದರೆ, ಒಂದೇ ಒಂದು ಸಿಜೇರಿಯನ್‌ ಶಸ್ತ್ರಚಿಕಿತ್ಸೆ ಆಗಿಲ್ಲ ಎನ್ನುವುದಕ್ಕೆ ನೇರ ಕಾರಣ ಪಾರ್ಶ್ವ ಚಂದ್ರ ಗ್ರಹಣ ಎಂದೇ ಹೇಳಲಾಗುತ್ತಿದೆ.

1935-36 ರಲ್ಲಿ ಪ್ರಾರಂಭವಾಗಿರುವ ಮಹಿಳೆಯರು ಮತ್ತು ಮಕ್ಕಳ ಆಸ್ಪತ್ರೆ(ಹಳೆ ಹೆರಿಗೆ ಆಸ್ಪತ್ರೆ) ಯಲ್ಲಿ ತಿಂಗಳಿಗೆ ಏನಿಲ್ಲವೆಂದರೂ 450-480 ಹೆರಿಗೆ ಆಗುತ್ತವೆ. ಅವುಗಳಲ್ಲಿ 150-180 ಸಿಜೇರಿಯನ್‌ ಶಸ್ತ್ರಚಿಕಿತ್ಸೆ ಇರುತ್ತವೆ.

ಪ್ರತಿ ದಿನದ 45-50 ಹೆರಿಗೆಗಳಲ್ಲಿ 20-25 ಸಿಜೇರಿಯನ್‌ ಶಸ್ತ್ರಚಿಕಿತ್ಸೆ ಆಗುತ್ತವೆ. ಸಿಜೇರಿಯನ್‌ ಶಸ್ತ್ರಚಿಕಿತ್ಸೆಗೆ ಒಳಗಾದ ಗರ್ಭಿಣಿಯರಿಗೆ ಇಂತಹ ದಿನವೇ ಶಸ್ತ್ರಚಿಕಿತ್ಸೆ ನೆರವೇರಿಸಲಾಗುವುದು ಎಂದು ಮೊದಲೇ ದಿನಾಂಕ ನಿಗದಿಪಡಿಸಲಾಗುತ್ತದೆ. ಆ ದಿನದಂದು ಸಿಜೇರಿಯನ್‌ ಶಸ್ತ್ರಚಿಕಿತ್ಸೆ ನೆರವೇರಿಸಲಾಗುತ್ತದೆ.

ಅದೇ ರೀತಿ ಪಾರ್ಶ್ವ ಚಂದ್ರ ಗ್ರಹಣ ದಿನ (ಜು.16) ರಂದು ಕೂಡ ಸಿಜೇರಿಯನ್‌ ಶಸ್ತ್ರಚಿಕಿತ್ಸೆಗಳು ನಡೆಯಬೇಕಿತ್ತು. ಮೊದಲೇ ದಿನ ನಿಗದಿಪಡಿಸಲಾಗಿತ್ತು. ಆದರೆ, ಒಬ್ಬರೇ ಒಬ್ಬರು ಸಿಜೇರಿಯನ್‌ ಶಸ್ತ್ರಚಿಕಿತ್ಸೆಗೆ ಬರಲೇ ಇಲ್ಲ. ಹಾಗಾಗಿ ಒಂದು ಆಪರೇಷನ್‌ ಕೂಡ ನಡೆಯಲಿಲ್ಲ.

ಅನೇಕ ವರ್ಷದಿಂದ ಈ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದೇನೆ. ದಿನಕ್ಕೆ ಏನಿಲ್ಲವೆಂದರೂ 20-25 ಸಿಜೇರಿಯನ್‌ ಶಸ್ತ್ರಚಿಕಿತ್ಸೆ ಆಗಿಯೇ ಆಗುತ್ತವೆ. ಆದರೆ, ಚಂದ್ರ ಗ್ರಹಣ ದಿನದ 24 ಗಂಟೆ ಒಂದೇ ಒಂದು ಸಿಜೇರಿಯನ್‌ ಶಸ್ತ್ರಚಿಕಿತ್ಸೆ ಆಗಿಲ್ಲ. ಅದಕ್ಕೆ ಚಂದ್ರಗ್ರಹಣ ಇದ್ದುದ್ದೇ ಕಾರಣ ಎಂದು ನಿಖರವಾಗಿ ಹೇಳಲಿಕ್ಕಾಗದು. ಆದರೆ, ಆ ಸಮಯದಲ್ಲಿ ಒಂದೇ ಒಂದು ಸಿಜೇರಿಯನ್‌ ಶಸ್ತ್ರಚಿಕಿತ್ಸೆ ಆಗಿಯೇ ಇಲ್ಲ ಎನ್ನುವುದು ನಿಜ… ಎನ್ನುತ್ತವೆ ಆಸ್ಪತ್ರೆಯ ಮೂಲಗಳು.

ಚಂದ್ರ ಗ್ರಹಣ ಮತ್ತು ಸೂರ್ಯ ಗ್ರಹಣ ಇದ್ದಾಗ ಗರ್ಭಿಣಿಯರು ತರಕಾರಿ ಹೆಚ್ಚುವಂತಿಲ್ಲ. ಹೊರಕ್ಕೆ ಬರುವಂತೆ ಇಲ್ಲ ಎಂಬುದು ಈಗಲೂ ಇದೆ. ಅನೇಕ ಕಡೆ ಅದೇ ರೀತಿ ನಡೆದುಕೊಳ್ಳುವರೂ ಇದ್ದಾರೆ.

ಚಂದ್ರ ಗ್ರಹಣವೇ ಆಗಲಿ, ಸೂರ್ಯ ಗ್ರಹಣ ಇದ್ದಾಗ ಸಿಜೇರಿಯನ್‌ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬಾರದು. ಅದರಿಂದ ಎಲ್ಲರಿಗೂ ತೊಂದರೆ ಆಗುತ್ತದೆ ಎಂಬ ಪ್ರಬಲ ನಂಬಿಕೆ ಆಳವಾಗಿ ಬೇರೂರಿದೆ.

ಇಂದಿನ ಆಧುನಿಕ ಕಾಲದಲ್ಲೂ, ಎಷ್ಟೇ ತಾಂತ್ರಿಕವಾಗಿ ಮುಂದುವರೆದರೂ ಗ್ರಹಣಗಳ ಬಗ್ಗೆ ಜನರಲ್ಲಿ ಇರುವಂತಹ ಭಾವನೆ ಬದಲಾಗಿಲ್ಲ. ಮಾತ್ರವಲ್ಲ ಬದಲಾಗುವುದೂ ಇಲ್ಲ ಎಂಬುದನ್ನು ಮಹಿಳೆಯರು ಮತ್ತು ಮಕ್ಕಳ ಆಸ್ಪತ್ರೆ (ಹಳೆ ಹೆರಿಗೆ ಆಸ್ಪತ್ರೆ)ಯಲ್ಲಿ ಪಾರ್ಶ್ವ ಚಂದ್ರ ಗ್ರಹಣದ ದಿನ ಸಿಜೇರಿಯನ್‌ ಶಸ್ತ್ರಚಿಕಿತ್ಸೆ ನಡೆಯದೇ ಇರುವುದು ಪುಷ್ಟೀಕರಿಸುತ್ತದೆ.

ಮನೋಧೋರಣೆ ಕಾರಣ…
ಗ್ರಹಣ ದಿನದಂದು ಸೀಜೇರಿಯನ್‌ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವುದು, ಮಕ್ಕಳು ಹುಟ್ಟುವುದು ಒಳ್ಳೆಯದಲ್ಲ. ಕೆಟ್ಟದ್ದಾಗುತ್ತದೆ ಎಂಬ ಮನೋಧೋರಣೆ, ಮನೋಭಾವನೆ ಜನರಲ್ಲಿ ಈಗಲೂ ಆಳವಾಗಿ ಬೇರೂರಿದೆ. ಕಾಕತಾಳೀಯ ಎನ್ನುವಂತೆ ಮಂಗಳವಾರ ಒಂದೇ ಒಂದು ಸಿಜೇರಿಯನ್‌ ಶಸ್ತ್ರಚಿಕಿತ್ಸೆ ಆಗಿಲ್ಲ. ಗ್ರಹಣ ದಿನ ಹೆರಿಗೆ ಆಗುವುದು, ಮಕ್ಕಳು ಜನಿಸುವುದರಿಂದ ಯಾವುದೇ ಸಮಸ್ಯೆ, ತೊಂದರೆ ಆಗುವುದೇ ಇಲ್ಲ. ಜನರ ಮನೋಧೊರಣೆ, ಮನೋಭಾವ ಬದಲಾಗಬೇಕು.
•ಎಂ. ಗುರುಸಿದ್ದಸ್ವಾಮಿ, ಕಾರ್ಯದರ್ಶಿ
ರಾಜ್ಯ ವಿಜ್ಞಾನ ಪರಿಷತ್ತು.

ಟಾಪ್ ನ್ಯೂಸ್

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.