ಆಂಗ್ಲ ಮಾಧ್ಯಮ ಆರಂಭಕ್ಕೆ ಪೋಷಕರ ಆನಂದ

ಜಿಲ್ಲೆಯ 32 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್‌ ಮೀಡಿಯಂ

Team Udayavani, May 29, 2019, 10:35 AM IST

29-May-3

ದಾವಣಗೆರೆ: ಹಳೇ ಕುಂದವಾಡದಲ್ಲಿರುವ ಸರ್ಕಾರಿ ಉನ್ನತೀಕರಿಸಿದ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಆರಂಭದ ಹಿನ್ನೆಲೆಯಲ್ಲಿ ಸಿಹಿ, ವಿತರಿಸಿ, ಸಂಭ್ರಮಿಸಿದ ಕ್ಷಣ (ಸಂಗ್ರಹ ಚಿತ್ರ).

ರಾ.ರವಿಬಾಬು
ದಾವಣಗೆರೆ:
ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ನಡು ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆ ಜಿಲ್ಲೆಯ 32(ಹರಪನಹಳ್ಳಿ ತಾಲೂಕು ಸೇರಿ) ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಪ್ರಾರಂಭವಾಗಲಿದೆ.

ಮೇ.29ರ ಬುಧವಾರ ಶಾಲಾ ಪ್ರಾರಂಭೋತ್ಸವದೊಂದಿಗೆ ಆಂಗ್ಲ ಮಾಧ್ಯಮಕ್ಕೆ ಚಾಲನೆ ದೊರೆಯಲಿದ್ದು, ಆಂಗ್ಲ ಮಾಧ್ಯಮಕ್ಕೆ ಆಯ್ಕೆಗೊಂಡಿರುವ ಶಾಲೆಯಲ್ಲಿ ಪ್ರತ್ಯೇಕ ಕೊಠಡಿಗಳನ್ನು ಈಗಾಗಲೇ ಸಿದ್ಧಪಡಿಸಲಾಗಿದೆ.

ಆಂಗ್ಲ ಮಾಧ್ಯಮಕ್ಕಾಗಿಯೇ ಹೊಸದಾಗಿ ಶಿಕ್ಷಕರ ನೇಮಕ ಪ್ರಕ್ರಿಯೆ ನಡೆದಿಲ್ಲ. ಈಗಾಗಲೇ ಸೇವೆಯಲ್ಲಿರುವ ಶಿಕ್ಷಕರಲ್ಲೇ ಇಬ್ಬರನ್ನು ಆಯ್ಕೆ ಮಾಡಿ ಆಂಗ್ಲ ಮಾಧ್ಯಮ ಹೊಣೆಗಾರಿಕೆ ವಹಿಸಲಾಗಿದೆ.

ದಾವಣಗೆರೆ ಜಿಲ್ಲಾ ಮತ್ತು ಶಿಕ್ಷಣ ತರಬೇತಿ ಸಂಸ್ಥೆ (ಡಯಟ್)ನಲ್ಲಿ ಮೇ.13 ರಿಂದ 15 ದಿನಗಳ ಪ್ರತಿ ದಿನ 40 ಶಿಕ್ಷಕರಿಗೆ ಆಂಗ್ಲ ಮಾಧ್ಯಮದ ಬಗ್ಗೆ ವಿಶೇಷ ತರಬೇತಿ ಸಹ ನೀಡಲಾಗಿದೆ.

ಆಂಗ್ಲ ಮಾಧ್ಯಮಕ್ಕೆ ಆಯ್ಕೆಯಾಗಿರುವ ಶಾಲೆಯಲ್ಲಿ ಆಂಗ್ಲ ಮಾಧ್ಯಮದ ಪ್ರಾರಂಭದ ಕುರಿತು ಫ್ಲೆಕ್ಸ್‌, ಬ್ಯಾನರ್‌ ಹಾಕಲಾಗಿದೆ. ಶಾಲಾ ಪ್ರಾರಂಭೋತ್ಸವದಂದು ಜಾಥಾದ ಮೂಲಕ ಆಂಗ್ಲ ಮಾಧ್ಯಮದ ಪ್ರಾರಂಭದ ಬಗ್ಗೆ ಜನರಿಗೆ ತಿಳಿಸಲಾಗುವುದು. ಜಾಥಾದ ನಂತರ ಆಂಗ್ಲ ಮಾಧ್ಯಮದ ಒಂದನೇ ತರಗತಿಗೆ ದಾಖಲಾತಿ ಪ್ರಾರಂಭಿಸಲಾಗುವುದು.

ಆಂಗ್ಲ ಮಾಧ್ಯಮ ಪ್ರವೇಶಕ್ಕೆ ಇಷ್ಟೇ ವಿದ್ಯಾರ್ಥಿಗಳಿಗೆ ಪ್ರವೇಶ ಎಂಬ ಯಾವುದೇ ನಿರ್ಬಂಧ ಇಲ್ಲ. ಪ್ರವೇಶ ಶುಲ್ಕ ಯಾವುದೂ ಇಲ್ಲ. ಆಂಗ್ಲ ಮಾಧ್ಯಮಕ್ಕೆ ಸೇರ್ಪಡೆಯಾಗುವ ಮಕ್ಕಳಿಗೆ ಸಮವಸ್ತ್ರ, ಪುಸ್ತಕ, ಬಿಸಿಯೂಟ, ಕ್ಷೀರಭಾಗ್ಯ ಯೋಜನೆಯಡಿ ಹಾಲು.. ಒಟ್ಟಾರೆಯಾಗಿ ಸರ್ಕಾರ ನೀಡುವಂತಹ ಎಲ್ಲಾ ಸೌಲಭ್ಯ ಒದಗಿಸಲಾಗುವುದು.

ಆಧುನಿಕ ಯುಗದಲ್ಲಿ ತಮ್ಮ ಮಕ್ಕಳು ಸಹ ಆಂಗ್ಲ ಮಾಧ್ಯಮದಲ್ಲೇ ಓದಬೇಕು ಎಂಬುದು ಪೋಷಕರ ಅಭಿಪ್ರಾಯ. ಖಾಸಗಿ ವಿದ್ಯಾಸಂಸ್ಥೆಗಳಲ್ಲಿ ಭಾರೀ ಶುಲ್ಕ ತೆತ್ತು, ವಂತಿಗೆ ನೀಡಿ ಓದಿಸಲು ಆಗದೇ ಇರುವಂತಹ ಅನೇಕ ಪೋಷಕರಿಗೆ ಸರ್ಕಾರಿ ಶಾಲೆಯಲ್ಲೇ ಆಂಗ್ಲ ಮಾಧ್ಯಮ ಪ್ರಾರಂಭಿಸುತ್ತಿರುವುದು ಸಾಕಷ್ಟು ಅನುಕೂಲ. ಸಹಜವಾಗಿಯೇ ಸಾಕಷ್ಟು ಬೇಡಿಕೆ ಇದೆ. ಆದರೆ, ಇದೇ ವರ್ಷ ಪ್ರಥಮವಾಗಿ ಆಂಗ್ಲ ಮಾಧ್ಯಮ ಪ್ರಾರಂಭವಾಗುತ್ತಿರುವುದರಿಂದ ಪ್ರವೇಶಾತಿ ಕುರಿತಂತೆ ಶಿಕ್ಷಣ ಇಲಾಖೆ ಸಹ ನಿರೀಕ್ಷೆಯಲ್ಲಿದೆ.

ಹಳೇ ಕುಂದುವಾಡದಲ್ಲಿ ಸಂಭ್ರಮ
ದಾವಣಗೆರೆ ಪಾಲಿಕೆ ವ್ಯಾಪ್ತಿಯ ಹಳೇ ಕುಂದುವಾಡ ಸರ್ಕಾರಿ ಉನ್ನತೀಕರಿಸಿದ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಆರಂಭದ ಹಿನ್ನೆಲೆಯಲ್ಲಿ ಕಳೆದ ವಾರ ಹಬ್ಬದ ವಾತಾವರಣ ನಿರ್ಮಾಣವಾಗಿ ವಿದ್ಯಾರ್ಥಿಗಳು, ಶಿಕ್ಷಕರು, ಶಿಕ್ಷಣ ಇಲಾಖೆ ಅಧಿಕಾರಿಗಳು, ಗ್ರಾಮಸ್ಥರು, ಮುಖಂಡರು ಆ ಸಂಭ್ರಮದಲ್ಲಿ ಭಾಗಿಯಾದರು. ಅಂದು ಶಾಲೆ ತಳಿರು ತೋರಣಗಳಿಂದ ಕಂಗೊಳಿಸುತ್ತಿತ್ತು. ಗ್ರಾಮದ ಬೀದಿಗಳಲ್ಲಿ ಶಾಲಾ ಸಿಬ್ಬಂದಿ ಜೊತೆ ಗ್ರಾಮಸ್ಥರು ಜಾಥಾ ನಡೆಸಿ ಮಕ್ಕಳಿಗೆ ಸಹಿ ತಿನಿಸಿ, ಸಂಭ್ರಮಿಸಿದರು. ಈ ಶೈಕ್ಷಣಿಕ ವರ್ಷದಿಂದ ಆಂಗ್ಲ ಮಾಧ್ಯಮ ಒಂದನೇ ತರಗತಿ ಆರಂಭದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಜಾಥಾ ನಡೆಸಿ ಸ್ಥಳದಲ್ಲೇ ದಾಖಲಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.
ಪ್ರವೇಶಾತಿ ಪ್ರಾರಂಭ
ಜಿಲ್ಲೆಯ 32 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಪ್ರಾರಂಭಿಸಲಾಗುತ್ತಿದೆ. ಕೆಲವು ಕಡೆ ಪ್ರವೇಶಾತಿ ಪ್ರಾರಂಭವಾಗಿದೆ. ಕೆಲವು ಶಾಲೆಯಲ್ಲಿ ಪ್ರಾರಂಭೋತ್ಸವದಂದು ಅಡ್ಮಿಷನ್‌ ಮಾಡಿಕೊಳ್ಳಲಾಗುವುದು. ಆಂಗ್ಲ ಮಾಧ್ಯಮಕ್ಕೆ ಸೇರುವ ವಿದ್ಯಾರ್ಥಿಗಳಿಗೆ ಪುಸ್ತಕ, ಸಮವಸ್ತ್ರ ನೀಡಲಾಗುವುದು. •ಸಿ.ಆರ್‌. ಪರಮೇಶ್ವರಪ್ಪ,
ಉಪ ನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ.
ಪ್ರತ್ಯೇಕ ವ್ಯವಸ್ಥೆ
ನಮ್ಮ ಶಾಲೆಯಲ್ಲಿ ಈ ವರ್ಷದಿಂದ ಆಂಗ್ಲ ಮಾಧ್ಯಮ ಪ್ರಾರಂಭಿಸಲಾಗುತ್ತಿದೆ. ಈಗಾಗಲೇ ಪ್ರತ್ಯೇಕ ಕೊಠಡಿಗಳ ವ್ಯವಸ್ಥೆ ಮಾಡಲಾಗಿದೆ. ನಮ್ಮ ಶಾಲೆಯ ಟಿ.ಎಸ್‌. ಸ್ವಾಮಿ ಮತ್ತು ಎಚ್. ತಿಪ್ಪೇಶ್‌ ಎಂಬಿಬ್ಬ ಶಿಕ್ಷಕರು ತರಬೇತಿ ಸಹ ಪಡೆದುಕೊಂಡಿದ್ದಾರೆ. ಆಂಗ್ಲ ಮಾಧ್ಯಮ ಪ್ರಾರಂಭದ ಬಗ್ಗೆ ಫ್ಲೆಕ್ಸ್‌ ಹಾಕಲಾಗಿದೆ. ಶಾಲಾ ಪ್ರಾರಂಭೋತ್ಸವದಂದು ಜಾಥಾ ನಡೆಸಿ, ಆಂಗ್ಲ ಮಾಧ್ಯಮದ ಬಗ್ಗೆ ಕರಪತ್ರಗಳನ್ನು ಸಹ ಹಂಚಲಾಗುವುದು. ಜಾಥಾದ ನಂತರ 1ನೇ ತರಗತಿಗೆ ಪ್ರವೇಶ ಪ್ರಾರಂಭಿಸಲಾಗುವುದು.
ಕೆ.ಟಿ. ಜಯಪ್ಪ, ಮುಖ್ಯ ಶಿಕ್ಷಕರು
ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ,
ನಿಟುವಳ್ಳಿ ದಾವಣಗೆರೆ.
ಬಹಳ ಒಳ್ಳೆದಾಯ್ತು
ನಮ್ಮಂತಹವರು ದೊಡ್‌ ದೊಡ್‌ ಸ್ಕೂಲ್ಗಳಲ್ಲಿ ಅವರು ಕೇಳಿದಷ್ಟು ಫೀಸ್‌, ಡೊನೇಷನ್‌ ಕೊಟ್ಟು ಇಂಗ್ಲಿಷ್‌ ಮೀಡಿಯಂನಾಗೆ ಮಕ್ಕಳನ್ನ ಓದಿಸೋದು ಕಷ್ಟ. ಇವಾಗ ಗೌರಮೆಂಟ್ ಸ್ಕೂಲ್ನಾಗೆ ಇಂಗ್ಲಿಷ್‌ ಮೀಡಿಯಂ ಸ್ಟಾರ್ಟ್‌ ಮಾಡ್ತಾ ಇರೋದು ಬಹಳ ಚೆನ್ನಾಗಿ ಆಯ್ತು. ಯೂನಿಫಾರಂ. ಬುಕ್ಸ್‌, ಊಟ ಎಲ್ಲನೂ ಕೊಡ್ತಾರೆ. ಅದು ಇನ್ನೂ ಅನುಕೂಲ. ನಿಜ್‌ವಾಗಿಯೂ ಇಂಗ್ಲಿಷ್‌ ಮೀಡಿಯಂ ಒಳ್ಳೆಯದು.
ಎ. ಲಾವಣ್ಯ,
ಪೋಷಕರು, ದಾವಣಗೆರೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.