ಪ್ರತಿ ಮಕರ ಸಂಕ್ರಾಂತಿಗೆ ಹರ ಜಾತ್ರೆ

•ಎಳ್ಳು- ಬೆಲ್ಲದಂತೆ ಒಂದಾಗಿ ಜೀವನ ನಡೆಸುವ ಸಂಕಲ್ಪ •ಪೀಠಕ್ಕೆ ಬರುವ ಭಕ್ತಾದಿಗಳಿಗೆ ಮಾವಿನ ಹಣ್ಣು ವಿತರಣೆ

Team Udayavani, Sep 9, 2019, 11:31 AM IST

9-Sepctember-3

ದಾವಣಗೆರೆ: ಶ್ರೀ ವಚನಾನಂದ ಸ್ವಾಮೀಜಿ ಬೆಳ್ಳಿ ಬೆಡಗು ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿದರು.

ದಾವಣಗೆರೆ: ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗರು ಪೀಠದಲ್ಲಿ ಇನ್ನು ಮುಂದೆ ಪ್ರತಿ ಮಕರ ಸಂಕ್ರಾಂತಿ ಸಂದರ್ಭದಲ್ಲಿ ಹರ ಜಾತ್ರೆ ನಡೆಸಲಾಗುವುದು ಎಂದು ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗರು ಶ್ರೀ ವಚನಾನಂದ ಸ್ವಾಮೀಜಿ ತಿಳಿಸಿದ್ದಾರೆ.

ರೇಣುಕ ಮಂದಿರದಲ್ಲಿ ಭಾನುವಾರ ರಾಜ್ಯವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ 25ನೇ ವರ್ಷದ ಬೆಳ್ಳಿ ಬೆಡಗು, ಜಿಲ್ಲಾ ಪಂಚಮಸಾಲಿ ಸಮಾಜದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಪ್ರತಿ ಮಕರ ಸಂಕ್ರಮಣದಂದು ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗರು ಪೀಠದಲ್ಲಿ ಹರ ಜಾತ್ರೆಯಲ್ಲಿ ಎಳ್ಳು ಬೆಲ್ಲ ಹಂಚಿ, ಜೀವನದಲ್ಲಿ ಎಂದೆಂದಿಗೂ ಎಳ್ಳು- ಬೆಲ್ಲದಂತೆ ಒಂದಾಗಿ ಜೀವನ ನಡೆಸುವ ಸಂಕಲ್ಪ ಮಾಡುವ ಕಾರ್ಯಕ್ರಮ ನಡೆಸಲಾಗುವುದು ಎಂದು ತಿಳಿಸಿದರು.

ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಹಿರಿಯರು, ಪ್ರಧಾನ ಧರ್ಮದರ್ಶಿ ಬಿ.ಸಿ. ಉಮಾಪತಿ, ನಿಕಟಪೂರ್ವ ಅಧ್ಯಕ್ಷ ಬಸವರಾಜ ದಿಂಡೂರ ಮುಂತಾದವರ ಪ್ರತ್ಯಕ್ಷ, ಅಪ್ರತ್ಯಕ್ಷ ಶ್ರಮದ ಫಲವಾಗಿ ಪೀಠ ಅದ್ಬುತವಾಗಿ ಬೆಳೆಯುತ್ತಿದೆ. ಪೀಠದಲ್ಲಿ ನಿತ್ಯ ದಾಸೋಹ ನಡೆಸಲಾಗುತ್ತಿದೆ. ಪಂಚಮಸಾಲಿ ಪೀಠ ಅನ್ನ, ಅಕ್ಷರ, ಅಧಾತ್ಮ, ಆರೋಗ್ಯ, ಆಶ್ರಯದ ಪಂಚ ದಾಸೋಹ ಪೀಠವಾಗಿದೆ ಎಂದು ತಿಳಿಸಿದರು.

ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗರು ಪೀಠದಲ್ಲಿ ಕ್ಯಾನ್ಸರ್‌ ಗುಣಪಡಿಸಬಲ್ಲ 1 ಸಾವಿರ ಸೀಮಾರೂಬ ಗಿಡ ನೆಡಲಾಗಿದೆ. 140 ವಿವಿಧ ಬಗೆಯ ಮಾವಿನ ಹಣ್ಣಿನ ಮರಗಳನ್ನೆ ನೆಡಲಾಗಿದೆ. ಮುಂದಿನ ವರ್ಷದಿಂದ ಪೀಠಕ್ಕೆ ಬರುವ ಎಲ್ಲಾ ಭಕ್ತಾದಿಗಳಿಗೆ ಉಚಿತವಾಗಿಯೇ ಮಾವಿನ ಹಣ್ಣು ನೀಡಲಾಗುವುದು. 3 ಎಕರೆಯಲ್ಲಿ ಸೇವಂತಿಗೆ, 1 ಎಕರೆಯಲ್ಲಿ ಗುಲಾಬಿ ತೋಟ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಶ್ರೀ ಪೀಠವನ್ನು ಹಸಿರು ಪೀಠವನ್ನಾಗಿ ಮಾಡಲಾಗುವುದು ಎಂದು ಶ್ರೀಗಳು ತಿಳಿಸಿದರು.

ಜೀವನದಲ್ಲಿ ಏನೇ, ಎಂತದ್ದೇ ಸಂದರ್ಭದಲ್ಲೇ ಆಗಲಿ ಆತ್ಮವಿಶ್ವಾಸವನ್ನ ಕಳೆದುಕೊಳ್ಳಬಾರದು. ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜ ವಿದ್ಯಾರ್ಥಿಗಳಾದಿಯಾಗಿ ಎಲ್ಲರಿಗೂ ಆತ್ಮವಿಶ್ವಾಸವಾಗಿ ನಿಲ್ಲಲಿದೆ. ಇಂದಿನ ಸಮಾರಂಭದಲ್ಲಿ ಪ್ರತಿಭಾ ಪುರಸ್ಕಾರಕ್ಕೆ ಒಳಗಾದವರು ಸದಾ ಸಮಾಜದೊಂದಿಗೆ ಇರುವಂತಾಗಬೇಕು. ಸಮಾಜವೂ ಸಹ ಎಲ್ಲರ ಸುಖ, ಕಷ್ಟದ ಸಂದರ್ಭದಲ್ಲಿ ಜೊತೆಯಾಗಿಯೇ ನಿಲ್ಲಲಿದೆ. ಹರಿಹರದ ಪೀಠಕ್ಕೆ ಒಮ್ಮೆಯಾದರೂ ಭೇಟಿ ನೀಡುವಂತಾಗಬೇಕು ಎಂದು ತಿಳಿಸಿದರು.

ವಿದ್ಯಾರ್ಥಿಗಳು ಒಂದು ಹಂತಕ್ಕೆ ಬರುವುದರ ಹಿಂದೆ ತಂದೆ-ತಾಯಿ, ಗುರುಗಳು ಮತ್ತು ಸಮಾಜ ಇದೆ ಎಂಬುದನ್ನು ಮರೆಯಬಾರದು. ಜೀವನದಲ್ಲಿ ಬೆಳೆದು ದೊಡ್ಡವರಾಗಿ, ಉನ್ನತ ಸ್ಥಾನಕ್ಕೆ ಏರಿದಾಗ ಯಾವುದೇ ಕಾರಣಕ್ಕೂ ತಂದೆ-ತಾಯಿಯನ್ನ ಮರೆಯಬಾರದು. ಪ್ರತಿಯೊಬ್ಬರು ತಂದೆ-ತಾಯಿ, ಗುರು, ಸಮಾಜಕ್ಕೆ ಕೀರ್ತಿ ತರಬೇಕು. ಹಂಚಿ ತಿನ್ನುವ ಉದಾತ್ತ ಮನೋಭಾವ ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಜೀವನದಲ್ಲಿ ಯಾವುದೂ ಅಸಾಧ್ಯ ಅಲ್ಲ. ದೊಡ್ಡ ಕನಸನ್ನು ಸತತ ಪರಿಶ್ರಮದ ಮೂಲಕ ನನಸು ಮಾಡಬೇಕು. ನನ್ನಿಂದ ಆಗುವುದಿಲ್ಲ… ಎಂಬ ಮನೋಭಾವ ಕಿತ್ತೆಸೆಯಬೇಕು. ನಾನು ಮಾಡಬಲ್ಲೆ ಎಂಬ ಆತ್ಮವಿಶ್ವಾಸದ ಜೊತೆ ಸಾಗಬೇಕು. ಕೇವಲ ಇಂಜಿನಿಯರಿಂಗ್‌, ವೈದ್ಯಕೀಯದ ಗುರಿ ಇಟ್ಟುಕೊಂಡಿರಬಾರದು. ಸಾಧಿಸುವುದು ಆಗದೇ ಹೋದಾಗ ಖನ್ನತೆ, ಒತ್ತಡಕ್ಕೆ ಒಳಗಾಗಬಾರದು. ಜೀವನದಲ್ಲಿ ಸಾಧನೆಗೆ ಮುಕ್ತ ಆಯ್ಕೆ ಮತ್ತು ಸಹನೆ ಇರಬೇಕು ಎಂದು ತಿಳಿಸಿದರು.

ಕಳೆದ 25 ವರ್ಷದಿಂದ ನಿವೃತ್ತ ಶಿಕ್ಷಕ ಹನುಮನಾಳ ಅವರು ನನ್ನಿಂದ ಆಗುವುದಿಲ್ಲ ಎಂದು ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಸಂಘಟನೆಗೆ ಮುಂದಾಗದೇ ಇದ್ದಲ್ಲಿ ಈಗ ನಾವು ಇರುತ್ತಿರಲಿಲ್ಲ. ನೀವು ಇಲ್ಲಿಗೆ ಬಂದು ಪ್ರತಿಭಾ ಪುರಸ್ಕಾರ ಪಡೆಯುತ್ತಿರಲಿಲ್ಲ. ನಮ್ಮ, ಸಮಾಜದ ಹಿಂದೆ ಇರುವರನ್ನ ಮರೆಯಬಾರದು ಎಂದು ತಿಳಿಸಿದರು.

ಟಾಪ್ ನ್ಯೂಸ್

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.