ನೊಂದವರು-ಬಡವರ ಸೇವೆ ಪುಣ್ಯದ ಕೆಲಸ

•ಸೋಷಿಯಲ್ ಇಂಪ್ಯಾಕ್ಟ್ ಅವಾರ್ಡ್‌ ಪ್ರದಾನ•ದುಡ್ಡಿನ ಹಿಂದೆ ಹೋಗುತ್ತಿರುವ ಆಧುನಿಕ ಜಗತ್ತು: ವಿಷಾದ

Team Udayavani, Jul 29, 2019, 10:02 AM IST

29-July-2

ದಾವಣಗೆರೆ: ಸಾಧಕರಿಗೆ ಸೋಷಿಯಲ್ ಇಂಪ್ಯಾಕ್ಟ್ ಅವಾರ್ಡ್‌-2019 ಪ್ರಶಸ್ತಿಯನ್ನು ಗಣ್ಯರು ಪ್ರದಾನ ಮಾಡಿದರು.

ದಾವಣಗೆರೆ: ನೊಂದವರು, ಬಡವರ ಸೇವೆ ಮಾಡುವುದು ಪುಣ್ಯದ ಕೆಲಸ ಎಂದು ದಾವಣಗೆರೆ ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ತಿಳಿಸಿದ್ದಾರೆ.

ಚಿಂದೋಡಿ ಲೀಲಾ ಕಲಾಕ್ಷೇತ್ರದಲ್ಲಿ ಬೆಂಗಳೂರಿನ ರೀಚ್4ಕಾಜ್‌ ಟೆಕ್ನಾಲಜಿ, ಗೋ ಗ್ರೀನ್‌ ಸಂಸ್ಥೆ ಸಹಯೋಗದಲ್ಲಿ ನಡೆದ ಸೋಷಿಯಲ್ ಇಂಪ್ಯಾಕ್ಟ್ ಅವಾರ್ಡ್‌-2019 ಪ್ರಶಸ್ತಿ ಪ್ರದಾನ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಹಸಿದವರು, ನೊಂದವರು, ರೋಗಿಗಳಿಗೆ, ಬಡವರಿಗೆ, ಶೋಷಿತರಿಗೆ, ನಿರ್ಗತಿಕರಿಗೆ ದಾನ, ಸೇವೆ ಮಾಡುವರೋ ಅವರಿಗೆ ತೃಪ್ತಿ, ನೆಮ್ಮದಿ ಸಿಗುತ್ತದೆ ಎಂದರು.

ಮನುಷ್ಯನಿಗೆ ತೃಪ್ತಿ ಎನ್ನುವುದೇ ಇಲ್ಲ, ಎಷ್ಟು ಇದ್ದರೂ ಸಾಲದು. ಕೆಲವರು ಆಸ್ತಿ ಮಾಡಬೇಕು. ಹೆಚ್ಚಿನ ಹಣ ಗಳಿಸಬೇಕು, ದೊಡ್ಡ ಮನೆ ಕಟ್ಟಿಸಬೇಕು ಹೀಗೆ ಹಲವಾರು ಯೋಚನೆಯಲ್ಲೇ ಕಾಲ ಕಳೆಯುತ್ತಾರೆ. ರಾಜಕಾರಣದಲ್ಲಿ ಎಂದಿಗೂ ತೃಪ್ತಿ ಎನ್ನುವುದೇ ಇಲ್ಲ. ಯಾರು ಸಮಾಜಮುಖೀಯಾಗಿ, ನೊಂದವರ, ಶೋಷಿತರ, ಬಡವರ ಸಮಸ್ಯೆಗಳಿಗೆ ಸ್ಪಂದಿಸುತ್ತಾರೋ ಅವರು, ಜೀವನದಲ್ಲಿ ಯಾರು ತನಗೋಸ್ಕರ ಬದುಕದೇ ನೊಂದವರ ಕಣ್ಣೀರು ಒರೆಸುವರೋ ಅವರಿಗೆ ಬದುಕಿನಲ್ಲಿ ತೃಪ್ತಿ ಸಿಗುತ್ತದೆ ಎಂದು ತಿಳಿಸಿದರು.

ಬಸವಣ್ಣ, ಬುದ್ಧ, ಗಾಂಧಿಧೀಜಿ, ಅಂಬೇಡ್ಕರ್‌, ಮದರ್‌ ತೆರೆಸಾರಂತಹ ದಾರ್ಶನಿಕರು ಇನ್ನೊಬ್ಬರ ಕಷ್ಟಗಳನ್ನು ಗಮನಿಸಿ ಮಾನವೀಯತೆ ಮೆರೆದು ಹೆಸರಾಗಿದ್ದಾರೆ. ಅಂತಹವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಅಧ್ಯಕ್ಷ ಡಾ| ಎಚ್.ಎಸ್‌. ಮಂಜುನಾಥ್‌ ಕುರ್ಕಿ ಮಾತನಾಡಿ, ಆಧುನಿಕ ಜಗತ್ತು ದುಡ್ಡಿನ ಹಿಂದೆ ಹೋಗುತ್ತಿದ್ದು, ಮಾನವೀಯ ಮೌಲ್ಯಗಳನ್ನು ಕಳೆದುಕೊಳ್ಳುತ್ತಿದ್ದೇವೆ. ರೀಚ್4ಕಾಜ್‌ ಟೆಕ್ನಾಲಜಿ ಲಿಮಿಟೆಡ್‌ನ‌ಂತಹ ಸರ್ಕಾರೇತರ ಸಂಸ್ಥೆಗಳು ಇಂತಹ ಸಮಾಜಮುಖೀ ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಸಂತಸ ವ್ಯಕ್ತಪಡಿಸಿದರು.

ಸ್ವಯಂ ಸೇವಾ ಸಂಸ್ಥೆಗಳು ನೊಂದ ಜೀವಗಳಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವ ಕಾರ್ಯ ನಿರ್ವಹಿಸುತ್ತಿವೆ. ಎಲೆ ಮರೆಯಕಾಯಿಯಂತೆ ಸೇವಾ ಕಾರ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಂಸ್ಥೆ, ವ್ಯಕ್ತಿಗಳನ್ನು ಗುರುತಿಸಿ ಇಲ್ಲಿ ಸನ್ಮಾನಿಸುತ್ತಿರುವುದು ಮಾದರಿಯಾಗಿದೆ ಎಂದರು.

ಚನ್ನಗಿರಿಯ ಶ್ರೀ ಕೇದಾರಲಿಂಗ ಶಾಂತವೀರ ಸ್ವಾಮೀಜಿ, ಸಂಸ್ಥೆಯ ಸಿಇಒ ರಾಘವ್‌ ಶೆಟ್ಟಿ, ಡಾ| ಕಲೀಂ ಷರೀಫ, ಎಂಡಿ ಜೆ.ಆರ್‌. ಮಂಜುನಾಥ, ನಿರ್ದೇಶಕ ಆರ್‌.ಶಿವಕುಮಾರ್‌, ರಾಯಭಾರಿ ವಾಣಿ ಕೇಶವ್‌, ಡಾ| ಸುರೇಶ ಹನಗವಾಡಿ, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷೆ ಜಯಲಕ್ಷ್ಮಿಮಹೇಶ್‌, ಮಹಾನಗರ ಪಾಲಿಕೆ ಮಾಜಿ ಸದಸ್ಯ ದಿನೇಶ ಕೆ. ಶೆಟ್ಟಿ, ಪೋಪಟ್ಲಾಲ್ ಜೈನ್‌, ಮಂಜುಳಾ ಬಸವಲಿಂಗಪ್ಪ, ಕಾರ್ಯಕ್ರಮ ಸಂಯೋಜಕ ಶ್ರೀ ಕಾಂತ ಬಗರೆ, ರೋಟರ್ಯಾಕ್ಟ್ ನ ಮಾನಸ, ಶೃತಿ ಕಬ್ಬೂರು, ಕೆ.ಎನ್‌. ಸುರೇಶ, ಮಹಮ್ಮದ್‌ ಗೌಸ್‌, ಚೇತನಕುಮಾರ, ಪ್ರವೀಣಕುಮಾರ, ಶ್ರೀ ಧರ, ಗಿರಿಧರ, ಜ್ಯೋತಿ ಹಿರೇಮs್ ಇತರರು ಇದ್ದರು.

ವನಿತಾ ಸಮಾಜ, ಅಂಗವಿಕಲ ಆಶಾಕಿರಣ ಟ್ರಸ್ಟ್‌, ಹಿಮೋಫಿಲಿಯಾ ಸೊಸೈಟಿ, ಕರುಣಾಜೀವ ಕಲ್ಯಾಣ ಟ್ರಸ್ಟ್‌, ರಶ್ಮಿ ಬಾಲಕಿಯರ ವಸತಿ ಶಾಲೆ, ಸಂವೇದ ಟ್ರಸ್ಟ್‌, ಯೋಗ ಸ್ಪಂದನ ಮತ್ತು ವನಿತಾ ಯೋಗ ಕೇಂದ್ರ, ಸಂಕಲ್ಪ ವಿಕಲಚೇತನ ಶಾಲೆ, ಜನಸಾಮಾನ್ಯರ ಸೇವಾ ಸಂಸ್ಥೆ, ದೇವನಗರಿ ಗ್ರೀನ್‌ ಪ್ಲಾನೆಟ್, ರಿದ್ಧಿ-ಸಿದ್ಧಿ ಫೌಂಡೇಷನ್‌, ವೈಯಕ್ತಿಕ ವಿಭಾಗದಲ್ಲಿ ಗಿರೀಶ ದೇವರಮನಿ, ಚನ್ನಬಸವ ಶೀಲವಂತ್‌, ಕೆ.ಟಿ. ಗೋಪಾಲಗೌಡ, ಮಾಧವಿ ಗೋಪಾಲಕೃಷ್ಣ, ಆರ್‌.ಬಿ. ಪ್ರವೀಣ್‌ಕುಮಾರ್‌ಗೆ ಸೋಷಿಯಲ್ ಇಂಪ್ಯಾಕ್ಟ್ ಅವಾರ್ಡ್‌-2019 ಪ್ರದಾನ ಮಾಡಲಾಯಿತು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.