ಹರ ಜಾತ್ರೆ ಜಾತ್ಯತೀತ ಸಂಭ್ರಮವಾಗಲಿ

14-15ರಂದು ಜಾತ್ರೆಪಕ್ಷಗಳಿಗೆ ಬೆಂಬಲ ಅನಿವಾರ್ಯವಾಗುವಂತೆ ಪೀಠ ಬೆಳೆಸೋಣ

Team Udayavani, Jan 6, 2020, 11:45 AM IST

6-Jnauary-3

ದಾವಣಗೆರೆ: ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಲ್ಲಿ ಜ.14 ಮತ್ತು 15 ರಂದು ನಡೆಯುವ ಹರ ಜಾತ್ರೆ ಜಾತ್ಯತೀತ ಜಾತ್ರೆ ಆಗಬೇಕು ಎಂದು ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ಆಶಿಸಿದ್ದಾರೆ.

ಭಾನುವಾರ ದಾವಣಗೆರೆಯ ರೇಣುಕಾ ಮಂದಿರದಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ವಿವಿಧ ಘಟಕಗಳ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು, ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜ ಬಾಂಧವರರು ಎಲ್ಲರೂ ಒಂದು ಕಡೆ ಸೇರಬೇಕು. ಸಂಕ್ರಾಂತಿಯನ್ನು ಜಾತ್ರೆಯಂತೆ ಆಚರಿಸಬೇಕು. ಆ ಹರ ಜಾತ್ರೆಯಲ್ಲಿ ಬರೀ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜ ಬಾಂಧವರು ಮಾತ್ರವಲ್ಲ, ಎಲ್ಲ ಸಮಾಜದವರು ಭಾಗಿಯಾಗುವ ಮೂಲಕ ಜಾತ್ಯತೀತ ಜಾತ್ರೆ ಆಗಬೇಕು. ಹರ ಜಾತ್ರೆಯನ್ನು 5 ಅಂಶಗಳೊಂದಿಗೆ ಆಚರಿಸಲಾಗುವುದು ಎಂದು ತಿಳಿಸಿದರು.

ಎರಡು ದಿನಗಳ ಕಾಲ ನಡೆಯುವ ಜಾತ್ರೆಯಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ
ಬಾಂಧವರು ಎಲ್ಲರೂ ಭಾಗವಹಿಸಬೇಕು. ಎರಡು ದಿನ ಮನೆಗಳಲ್ಲಿ ಅಡುಗೆ ಮಾಡುವ ಪ್ರಮಯವೇ ಇಲ್ಲ. ಪೀಠದಲ್ಲೇ ತಿಂಡಿ, ಊಟ ಮಾಡಬೇಕು. ನಮ್ಮ ಸಮಾಜದವರು ಮಾತ್ರವಲ್ಲ. ಇತರ ಸಮಾಜದವರನ್ನೂ ಕರೆ ತರಬೇಕು. ಇನ್ನು ಮುಂದೆ ಪ್ರತಿ ಸಂಕ್ರಾಂತಿಯಂದು ಹರ ಜಾತ್ರೆ ನಡೆಯಲಿದೆ.

ಮುಂದೆ ಹರ ಜಾತ್ರೆ ಜಗತ್‌ ಜಾಗೃತಿ ಜಾತ್ರೆ ಆಗಲಿದೆ ಎಂದು ಶ್ರೀಗಳು ತಿಳಿಸಿದರು.
ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠ ಈಗ ಜಾಗೃತ ಪೀಠವಾಗಿದೆ. ತನ್ನದೇ ಆದ ಇತಿಹಾಸ ಇದೆ. ಪೀಠವನ್ನು ಬೆಳೆಸುವ ಸವಾಲು ನಮ್ಮ ಮುಂದೆ ಇದೆ.  ಹಾಗಾಗಿ ಯಾವುದೇ ರಾಜಕೀಯ ಪಕ್ಷಗಳು ಒಳಗೊಂಡಂತೆ ಯಾರೂ ಸಹ ಹರಿಹರ ಪೀಠವನ್ನು ಹಗುರವಾಗಿ ಪರಿಗಣಿಸುವಂತೆಯೇ ಇಲ್ಲ. ಹರಿಹರ ಪೀಠ ಈಗ 1 ಕೋಟಿಯಷ್ಟು ಜನಸಂಖ್ಯೆಯ ಪೀಠವಾಗಿದೆ. ಎಲ್ಲಾ ಪಕ್ಷಗಳ ಮುಖಂಡರು ಬಂದು ಹೋಗುವಂತಾಗಿದೆ. ಹರಿಹರ ಪೀಠ ಒಂದೇ ಅಖಂಡ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠವಾಗಿದೆ. ರಾಜಕೀಯ ಪಕ್ಷಗಳಿಗೆ ಹರಿಹರ ಪೀಠದ ಬೆಂಬಲ ಅನಿವಾರ್ಯ ಆಗುವಂತೆ ನಾವೆಲ್ಲರೂ ಸಂಘಟಿತರಾಗಿ ಬೆಳೆಸಬೇಕು ಎಂದು ತಿಳಿಸಿದರು.

ಡಿ.ಕೆ. ಶಿವಕುಮಾರ್‌ ಸಚಿವರಾಗಿದ್ದಾಗ ಹರಿಹರ ಪೀಠಕ್ಕೆ ಶುದ್ಧ ಸಿಹಿ ನೀರಿನ ಸೌಲಭ್ಯ
ಒದಗಿಸಬೇಕು ಎಂದು ಕೇಳಿದ್ದೆವು. ಅದರಂತೆ ಅವರು ಮಂಜೂರು ಮಾಡಿದ್ದರು. ಇನ್ನು ಕೆಲವೇ ದಿನಗಳಲ್ಲಿ ಪೀಠದಲ್ಲಿ ಸಿಹಿ ನೀರಿನ ಸೌಲಭ್ಯ ಇರಲಿದೆ. ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ.ಎಸ್‌. ಈಶ್ವರಪ್ಪ ಪೀಠಕ್ಕೆ ಬಂದ ಸಂದರ್ಭದಲ್ಲಿ 4 ಕೋಟಿ ಅನುದಾನ ಮಂಜೂರು ಮಾಡಿದ್ದರು. ಈಗ ಪೀಠದಲ್ಲಿ ಸಿಮೆಂಟ್‌ ರಸ್ತೆ ಎಲ್ಲವೂ ಆಗುತ್ತಿವೆ. ಕೆಲವೇ ದಿನಗಳಲ್ಲಿ ಪೀಠದ ಚಿತ್ರಣವೇ ಬದಲಾಗಲಿದೆ. ಜನಪ್ರತಿನಿಧಿಗಳು ಅಧಿಕಾರಕ್ಕೆ ಬರುವಂತಹ ಅಧಿಕಾರ ನೀಡಿರುವ ಮಠ ಅಧಿಕಾರ ಪಡೆಯುವಂತಾಗಬೇಕು ಎಂದು ತಿಳಿಸಿದರು.

ಸಮಾಜದ ಪ್ರಧಾನ ಧರ್ಮದರ್ಶಿ ಬಿ.ಸಿ. ಉಮಾಪತಿ ಮಾತನಾಡಿ, ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ದೊರೆಯಬೇಕಾದ ಸೌಲಭ್ಯ, ತಮ್ಮದೇ ಗುರುಪೀಠ, ಗುರುಗಳನ್ನ ಹೊಂದಬೇಕು ಎನ್ನುವ ಕಾರಣಕ್ಕೆ 1994 ರಲ್ಲಿ ಹನುಮನಾಳ್‌ರವರು ಪ್ರಾರಂಭಿಸಿದ ಸಂಘಟನೆ ಈಗ ಬೆಳೆಯುತ್ತಿದೆ. ಈವರೆಗೆ 1036 ಸಾಮೂಹಿಕ ಮದುವೆ, 3,800 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಗಿದೆ. ರಾಜ್ಯದ ಅತಿ ದೊಡ್ಡ ಸಮಾಜವಾಗಿದ್ದರೂ ಸಂಘಟನೆಯ ಕೊರತೆಯಿಂದ ಸಮಾಜ ಬೆಳೆದಿಲ್ಲ. ಸಮಾಜದ ಪ್ರತಿಯೊಬ್ಬರು ನನ್ನ ಸಮಾಜ, ನನ್ನ ಪೀಠ, ನಮ್ಮ ಗುರುಗಳು ಎಂಬ ಭಾವನೆಯಿಂದ ಸಮಾಜ ಬೆಳೆಸಿದಲ್ಲಿ ಮುಂದಿನ ಪೀಳಿಗೆಗೆ ಸಾಕಷ್ಟು ಅನುಕೂಲ ಆಗಲಿದೆ. ನಾವೆಲ್ಲರೂ ಸಂಘಟಿತರಾಗಿ ಹರಿಹರದ ಪೀಠವನ್ನು ರಾಜ್ಯದಲ್ಲಿ ಅತ್ಯುತ್ತಮ ಪೀಠವನ್ನಾಗಿ ಬೆಳೆಸೋಣ ಎಂದು ಮನವಿ ಮಾಡಿದರು.

ಸಮಾಜದ ಮುಖಂಡರಾದ ಬಾದಾಮಿ ಕರಿಬಸಪ್ಪ, ಎಂ. ದೊಡ್ಡಪ್ಪ, ಮಲ್ಲಿನಾಥ್‌,
ಮಂಜುನಾಥ್‌ ಪುರವಂತರ್‌, ಕಂಚೀಕೆರೆ ಸುಶೀಲಮ್ಮ, ರಶ್ಮಿ ಕುಂಕೋದ್‌, ಪಾರ್ವತಿ
ಕೊಟ್ರಗೌಡ, ಅಂದನೂರು ಮುರುಗೇಶ್‌, ಸತೀಶ್‌ ಮತ್ತೋಡು, ಮಹಾನಗರ ಪಾಲಿಕೆ ಸದಸ್ಯ ಕೆ.ಎಂ. ವೀರೇಶ್‌ ಇತರರು ಇದ್ದರು. ಪ್ರಧಾನ ಕಾರ್ಯದರ್ಶಿ ಎಸ್‌.ಸಿ. ಕಾಶೀನಾಥ್‌ ಸ್ವಾಗತಿಸಿದರು. ಉಚ್ಚಂಗಿದುರ್ಗದ ಬಸವರಾಜ್‌ ನಿರೂಪಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.